Kinnigoli: ಹೊಂಡ ಗುಂಡಿಗಳಿಂದ ತುಂಬಿದೆ ಕಿನ್ನಿಗೋಳಿ – ಮೂಲ್ಕಿ ರಾಜ್ಯ ಹೆದ್ದಾರಿ
ದಾಮಸಕಟ್ಟೆ - ಏಳಿಂಜೆ ರಸ್ತೆ ಮೇಲೆ ಹರಿಯುತ್ತಿದೆ ಚರಂಡಿ ನೀರು
Team Udayavani, Sep 13, 2024, 1:33 PM IST
ಕಿನ್ನಿಗೋಳಿ: ಈ ಬಾರಿಯ ಮಳೆಗೆ ಹಲವೆಡೆ ರಸ್ತೆಗಳು ಕಿತ್ತು ಹೋಗಿದ್ದು ಹೊಂಡ ಗುಂಡಿಗಳಾಗಿವೆ.
ಕಿನ್ನಿಗೋಳಿ – ಮೂಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡಿನಲ್ಲಿ ಡಾಮರು ಕಿತ್ತು ಹೋಗಿ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿದೆ.
ಕಳೆದ ವಾರ ಸುರಿದ ಮಳೆಗೆ ರಸ್ತೆ ಹೊಂಡಗಳ ಗಾತ್ರ ಹಿರಿದಾಗಿದ್ದು, ಗುಂಡಿಯ ಅರಿವು ಇಲ್ಲದೆ ದ್ವಿಚಕ್ರ ವಾಹನ ಬಿದ್ದು ಸವಾರರ ಮೂಳೆ ಮುರಿತ ಉಂಟಾಗಿದೆ. ಒಂದು ವಾರದಲ್ಲಿ ಸುಮಾರು 7 ಮಂದಿ ದ್ವಿಚಕ್ರ ವಾಹನ ಸವಾರರು ರಸ್ತೆ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದಾರೆ.
ಮಳೆಗಾಲಕ್ಕೆ ಮುನ್ನಾ ಸಣ್ಣ ಪುಟ್ಟ ಹೊಂಡಗಳಿಗೆ ತೇಪೆ ಕಾರ್ಯ ಹಾಗೂ ಹೆದ್ದಾರಿಯ ಬದಿಯ ಚರಂಡಿ ನಿರ್ವಹಣೆ ಮಾಡಿದ್ದರೆ ಇಂತಹ ಸಮಸ್ಯೆ ಆಗುತ್ತಿರಲ್ಲಿ.
ಕೆಲವು ಕಡೆಗಳಲ್ಲಿ ಚರಂಡಿಗಳ ಸಮರ್ಪಕ ನಿರ್ವಹಣೆ ಇಲ್ಲದೆ ಚರಂಡಿ ನೀರು ರಸ್ತೆಯಲ್ಲಿ ಹರಿದು ಕೆರೆಕಾಡು, ಕೆಂಚನಕೆರೆ ಶಾಲೆಯ ಮುಂಭಾಗದಲ್ಲಿ ರಸ್ತೆ ಹದಗೆಟ್ಟಿದೆ. ಇನ್ನು ಹಲವೆಡೆ ರಸ್ತೆಗೆ ಹಾಕಿದ ಪೇವರ್ ಫಿನಿಶ್ ಕಿತ್ತು ಹೋಗಿದೆ.
ಕಳೆದ ವರ್ಷ ಮಳೆಗಾಲದಲ್ಲಿ ಇದೇ ಸಮಸ್ಯೆ ಉಂಟಾಗಿತ್ತು. ಬಳಿಕ ಸ್ವಲ್ಪ ತೇಪೆ ಕಾರ್ಯ ಮಾತ್ರ ಮಾಡಲಾಯಿತು. ಇದೀಗ ಮತ್ತೆ ತೇಪೆ ಎದ್ದು ಹೋಗಿ ಸಮಸ್ಯೆ ಉಂಟಾಗಿದೆ. ಇಂತಹ ಸಮಸ್ಯೆಗೆ ಶಾಶ್ವತ ಪರಿಹಾರ ಆಗಬೇಕಾಗಿದೆ. ರಸ್ತೆಯನ್ನು ವಿಸ್ತರಿಸಿ ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಸಮಸ್ಯೆ ಪರಿಹಾರ ಆಗಲು ಸಾಧ್ಯವಿದೆ ಎಂದು ಸ್ಥಳೀಯರಾದ ರವೀಂದ್ರ ಕುಮಾರ್ ಕೆರೆಕಾಡು ತಿಳಿಸಿದ್ದಾರೆ.
ತೆರಿಗೆ ಕಟ್ಟಬೇಕು; ಸಮರ್ಪಕ ರಸ್ತೆ ಇಲ್ಲ
ರಸ್ತೆ ತೆರಿಗೆ ಹೊರೆ ಜನರ ಮೇಲೆ ಇದ್ದು ಅದೂ ಸಾಲದ್ದಕ್ಕೆ ಟ್ರಾಫಿಕ್ ಪೊಲೀಸರಿಂದ ದಂಡವೂ ಬೀಳುತ್ತದೆ. ಆದರೆ ರಸ್ತೆ ದುರಸ್ತಿಯ ಬಗ್ಗೆ ಯಾವ ಅಧಿಕಾರಿಯೂ ಚಕಾರ ಎತ್ತುತ್ತಿಲ್ಲ.
-ಸ್ಟೇನೀ ಪಿಂಟೋ, ಕಿನ್ನಿಗೋಳಿ
ದ್ವಿಚಕ್ರ ವಾಹನ ಚಾಲಕರಿಗೆ ಅಪಾಯ
ದಾಮಸಕಟ್ಟೆಯಿಂದೆ – ಏಳಿಂಜೆ ಇಳಿಜಾರಿನ ರಸ್ತೆಯ ತಿರುವಿನಲ್ಲಿ ಡಾಮರು ಕಿತ್ತು ಹೋಗಿ ರಸ್ತೆಯಲ್ಲಿ ಹೊಂಡಗಳಾಗಿವೆ. ಅಲ್ಲಿ ರಸ್ತೆಯ ಅಗಲ ಕಿರಿದಾಗಿದ್ದು ದ್ವಿಚಕ್ರ ವಾಹನಗಳಿಗೆ ತುಂಬಾ ಅಪಾಯಕಾರಿಯಾಗಿ ಪರಿಣಮಿಸಲಿದೆ.
-ರಾಮಚಂದ್ರ ಕಾಮತ್ ಬೆಳ್ಮಣ್ಣು, ದ್ವಿಚಕ್ರ ವಾಹನ ಸವಾರ
-ರಘುನಾಥ ಕಾಮತ್ ಕೆಂಚನಕೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.