Kodailbail: ಕೆ.ಎಸ್‌.ರಾವ್‌ ರಸ್ತೆ; ಪಾದಚಾರಿಗಳಿಗಿಲ್ಲ ಸುರಕ್ಷತೆ !

ರಸ್ತೆ ಅಗಲಗೊಂಡರೂ ಹಲವೆಡೆ ಫುಟ್‌ಪಾತ್‌ ಕೊರತೆ

Team Udayavani, Sep 25, 2024, 4:50 PM IST

10

ಕೊಡಿಯಾಲಬೈಲ್‌: ವಾಹನ ದಟ್ಟಣೆ, ಜನಸಂಚಾರ ಹೆಚ್ಚಾಗಿರುವ ನಗರದ ಕೊಡಿಯಾಲಬೈಲ್‌ ಮತ್ತು ಹಂಪನಕಟ್ಟೆ ಸಂಪರ್ಕಿಸುವ ಕಾರ್ನಾಡ್‌ ಸದಾಶಿವ ರಾವ್‌ (ಕೆ.ಎಸ್‌.ರಾವ್‌) ರಸ್ತೆಯ ಅಭಿವೃದ್ಧಿಯಾಗಿದ್ದರೂ ಈ ರಸ್ತೆಯ ಕೆಲವು ಕಡೆ ಫ‌ುಟ್‌ಪಾತ್‌ ಇಲ್ಲದೆ ಪಾದಚಾರಿಗಳು ಸುರಕ್ಷಿತವಾಗಿ ನಡೆದಾಡಲು ಸಾಧ್ಯವಾಗುತ್ತಿಲ್ಲ.

ಮಂಜೇಶ್ವರ ಗೋವಿಂದ ಪೈ ವೃತ್ತದಿಂದ(ನವಭಾರತ ವೃತ್ತ) ಹಂಪನಕಟ್ಟೆ ಜಂಕ್ಷನ್‌ವರೆಗಿನ ಸುಮಾರು ಒಂದು ಕಿ.ಮೀ ಉದ್ದದ ಈ ರಸ್ತೆಯಲ್ಲಿ ಮಾಲ್‌, ಬ್ಯಾಂಕ್‌, ಸಿನೆಮಾ ಮಂದಿರ, ಆಸ್ಪತ್ರೆ ಸೇರಿದಂತೆ ವಾಣಿಜ್ಯ, ಸೇವಾ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಹಾಗಾಗಿ ಜನರ ಓಡಾಟವೂ ಹೆಚ್ಚು. ಆದರೆ ಈ ರಸ್ತೆಯ ಹಲವೆಡೆ ಫ‌ುಟ್‌ಪಾತ್‌ ಇಲ್ಲದೆ ಪಾದಚಾರಿಗಳು ರಸ್ತೆಯಲ್ಲಿಯೇ ಅಪಾಯಕಾರಿಯಾಗಿ ನಡೆದುಕೊಂಡು ಹೋಗಬೇಕಾಗಿದೆ.

ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಹಂಪನಕಟ್ಟೆ ಕಡೆಗೆ ಹೋಗುವಲ್ಲಿ ಬಲಬದಿಯಲ್ಲಿ ಗೋಲ್ಡ್‌ ಪ್ಯಾಲೇಸ್‌ನಿಂದ ಶರವು ಕ್ರಾಸ್‌ ರಸ್ತೆಯವರೆಗೂ ಫ‌ುಟ್‌ಪಾತ್‌ ಇಲ್ಲ. ಇಲ್ಲಿ ಕೆಲವೆಡೆ ಫ‌ುಟ್‌ಪಾತ್‌ಗಾಗಿ ಮೀಸಲಿಟ್ಟ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತದೆ. ಇನ್ನು ಕೆಲವೆಡೆ ರಸ್ತೆ ಮಾತ್ರವಿದೆ.

ಪಾದಚಾರಿಗಳು ಕೂಡ ರಸ್ತೆಯಲ್ಲಿಯೇ ನಡೆದುಕೊಂಡು ಹೋಗಬೇಕು. ಇದು ಭಾರೀ ವಾಹನ ದಟ್ಟಣೆಯ ರಸ್ತೆಯಾಗಿರುವುದರಿಂದ ಅಪಾಯವೂ ಹೆಚ್ಚು. ಇನ್ನೊಂದು ಬದಿಯಲ್ಲಿ ಗಿರಿಯಾಸ್‌ನಿಂದ ಹಂಪನಕಟ್ಟೆ ಸಿಗ್ನಲ್‌ವರೆಗೆ ಫ‌ುಟ್‌ಪಾತ್‌ ಇಲ್ಲ. ರಸ್ತೆಯ ಅಂಚಿನಲ್ಲೇ ಅಪಾಯಕಾರಿ ನಡಿಗೆ ಅನಿವಾರ್ಯವಾಗಿದೆ. ರಸ್ತೆಯಲ್ಲಿಯೇ ನಡೆದುಕೊಂಡು ಹೋಗುವುದರಿಂದ ಪಾದಚಾರಿಗಳಿಗೆ ವಾಹನಗಳು ಢಿಕ್ಕಿ ಹೊಡೆಯುವ ಅಪಾಯ ಮಾತ್ರವಲ್ಲದೆ, ವಾಹನಗಳ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.

ಬಸ್‌ ತಂಗುದಾಣ ಬಳಿಯೂ ಇಕ್ಕಟ್ಟು
ಹಂಪನಕಟ್ಟೆ ಕಡೆಯಿಂದ ಪಿವಿಎಸ್‌ ಕಡೆಗೆ ಸಂಚರಿಸುವ ಬಸ್‌ಗಳು ನಿಲುಗಡೆಯಾಗುವ ಕೆ.ಎಸ್‌.ರಾವ್‌ ರಸ್ತೆಯ ಶರವು ಕ್ರಾಸ್‌ ರಸ್ತೆ ಸಮೀಪದ ಬಸ್‌ ತಂಗುದಾಣದ ಬಳಿ ಪಾದಚಾರಿಗಳು ನಡೆದಾಡುವುದಕ್ಕೆ ಭಾರಿ ಪ್ರಯಾಸ ಪಡುವ ಸ್ಥಿತಿ ಇದೆ. ಒಂದೋ ಪಾದಚಾರಿಗಳು ಬಸ್‌ ನಿಲ್ದಾಣದೊಳಗಿಂದ ಪ್ರಯಾಣಿಕರ ನಡುವೆ ನುಸುಳಿಕೊಂಡು ಹೋಗಬೇಕು, ಇಲ್ಲವಾದರೆ ರಸ್ತೆಯ ನಡುವೆ ವಾಹನಗಳ ಮಧ್ಯೆ ಜೀವಭಯದಲ್ಲಿ ನಡೆಯಬೇಕು!.

ಟಾಪ್ ನ್ಯೂಸ್

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

High-Court

High Court Order: ಕೋರ್ಟ್‌ ಕಲಾಪ ವೀಡಿಯೋ ಬಳಕೆಗೆ ನಿಷೇಧ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Khrge–Rajanna

Scandal: ಸಚಿವರಾದ ಪ್ರಿಯಾಂಕ್‌, ಕೆ.ಎನ್‌.ರಾಜಣ್ಣ ಮೇಲೆ ಹಗರಣದ ತೂಗುಗತ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9(1)

Mangaluru: ಟ್ರಾಫಿಕ್‌ ಸಮಸ್ಯೆ: ಶಾಲಾ ಸಮಯ ವ್ಯತ್ಯಾಸ ಸೂತ್ರ ಮತ್ತೆ ಚರ್ಚೆಗೆ

5(1)

Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!

Western Ghats: ಅರಣ್ಯ ನಾಶ ಅಬಾಧಿತ, ತಾಪ ಏರಿಕೆಗೆ ಇಲ್ಲ ಅಂಕುಶ

Western Ghats: ಅರಣ್ಯ ನಾಶ ಅಬಾಧಿತ, ತಾಪ ಏರಿಕೆಗೆ ಇಲ್ಲ ಅಂಕುಶ

ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೊಪ್ಪಿಸಿದರು

ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೊಪ್ಪಿಸಿದರು

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15

Container Kannada Movie: ಕಂಟೈನರ್‌ನೊಳಗೆ ಹೊಸಬರ ಕನಸು

14

Life Of Mrudula Kannada Movie: ಮೃದುಲಾಗೆ ಮೆಚ್ಚುಗೆ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ

ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.