KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

ರಸ್ತೆಯಲ್ಲೇ ಅಪಾಯಕಾರಿಯಾಗಿ ನಡೆದುಕೊಂಡು ಹೋಗಬೇಕಾದ ಸ್ಥಿತಿ

Team Udayavani, Oct 24, 2024, 5:25 PM IST

8

ಲಾಲ್‌ಭಾಗ್‌: ವಾಹನ ದಟ್ಟಣೆ, ಜನ ಸಂಚಾರ ಹೆಚ್ಚಾಗಿರುವ ಬಿಜೈ ಕೆಎಸ್‌ಆರ್‌ಟಿಸಿ-ಲಾಲ್‌ಭಾಗ್‌ ರಸ್ತೆಯಲ್ಲಿ ಫ‌ುಟ್‌ಪಾತ್‌ ಇಲ್ಲದೆ ಪಾದಚಾರಿಗಳು ಪರದಾಡುವಂತಾಗಿದೆ.

ಸಾವಿರಾರು ಮಂದಿ ಪಾದಚಾರಿಗಳು ರಸ್ತೆಯಲ್ಲೇ ಅಪಾಯಕಾರಿಯಾಗಿ ನಡೆದುಕೊಂಡು ಹೋಗಬೇಕಾದ ಸ್ಥಿತಿ ಇಲ್ಲಿದೆ. ಫ‌ುಟ್‌ಪಾತ್‌ಗಾಗಿ ಜಾಗವಿದ್ದರೂ ಅದು ಬೀದಿಬದಿ ವ್ಯಾಪಾರಸ್ಥರು, ವಾಹನಗಳ ಪಾಲಾಗಿದೆ. ಅಲ್ಲದೆ ಫ‌ುಟ್‌ಪಾತ್‌ನ ಅರ್ಧಭಾಗದಲ್ಲಿ ಕಾಮಗಾರಿಗಾಗಿ ಅಗೆದು ಹಾಕಿದ ಕಲ್ಲುಗಳ ರಾಶಿಯೂ ಇದೆ. ಇವೆಲ್ಲದರ ನಡುವೆ ಪಾದಚಾರಿಗಳು ನಡೆದಾಡಲು ಅಸಾಧ್ಯವಾಗುತ್ತಿದೆ.

ಪದೇ ಪದೇ ಟ್ರಾಫಿಕ್‌ ಜಾಮ್‌
ಕೆಎಸ್‌ಆರ್‌ಟಿಸಿ ಜಂಕ್ಷನ್‌ನಲ್ಲಿ ಪದೇ ಪದೇ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ಇಲ್ಲಿನ ಫ‌ುಟ್‌ಪಾತ್‌ ಅವ್ಯವಸ್ಥೆ ಕೂಡ ಕಾರಣವಾಗುತ್ತಿದೆ. ಪಾದಚಾರಿಗಳು ಅನಿವಾರ್ಯವಾಗಿ ರಸ್ತೆಯಲ್ಲೇ ನಡೆದುಕೊಂಡು ಹೋಗುತ್ತಿದ್ದಾರೆ. ಅಲ್ಲದೆ ಆಟೋರಿಕ್ಷಾ, ಇತರ ಕೆಲವು ವಾಹನಗಳನ್ನು ರಸ್ತೆ ಬದಿ ನಿಲ್ಲಿಸಲಾಗುತ್ತಿದೆ. ಅತ್ತ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಪ್ರವೇಶಿಸುವ, ನಿಲ್ದಾಣದಿಂದ ನಿರ್ಗಮಿಸುವ ನೂರಾರು ಬಸ್‌ಗಳು ಇದೇ ಜಂಕ್ಷನ್‌ ಮುಖಾಂತರ ಸಂಚರಿಸುತ್ತವೆ. ಬಸ್‌ಗಳ ಸುಗಮ ಆಗಮನ, ನಿರ್ಗಮನಕ್ಕೆ ಇತರ ವಾಹನಗಳು, ಪಾದಚಾರಿಗಳ ಓಡಾಟದಿಂದ ಅಡ್ಡಿಯಾಗುತ್ತಿದೆ. ಈ ಸ್ಥಳದಲ್ಲಿ ಆಗಾಗ್ಗೆ ಅಪಘಾತಗಳು ಕೂಡ ಸಂಭವಿಸುತ್ತಿವೆ. ಪಾದಚಾರಿಗಳಿಗೂ ವಾಹನಗಳು ಢಿಕ್ಕಿಯಾದ ಘಟನೆಗಳು ನಡೆದಿವೆ. ಆದರೂ ಫ‌ುಟ್‌ಪಾತ್‌ನ ಅವ್ಯವಸ್ಥೆಗೆ ಮುಕ್ತಿ ಸಿಕ್ಕಿಲ್ಲ.

ಟ್ರಾಫಿಕ್‌ ಪೊಲೀಸರ ಅಸಹಾಯಕತೆ
ಫ‌ುಟ್‌ಪಾತ್‌ ಇಲ್ಲದಿರುವುದರಿಂದ ರಸ್ತೆಯನ್ನೇ ಬಳಸುವ ಪಾದಚಾರಿಗಳನ್ನು ತಡೆಯಲು ಪೊಲೀಸರಿಂದ ಆಗುತ್ತಿಲ್ಲ. ಫ‌ುಟ್‌ಪಾತ್‌ನಲ್ಲಿರುವ ವ್ಯಾಪಾರಸ್ಥರನ್ನು ತೆರವು ಮಾಡುವುದಕ್ಕೂ ಸಾಧ್ಯವಾಗುತ್ತಿಲ್ಲ. ಸಂಜೆಯಾಗುತ್ತಲೇ ಇದೇ ಸ್ಥಳದಲ್ಲಿ ಖಾಸಗಿ ಟೂರಿಸ್ಟ್‌ ಬಸ್‌ಗಳು ಬೇಕಾಬಿಟ್ಟಿಯಾಗಿ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತವೆ. ಇವೆಲ್ಲವುಗಳ ನಡುವೆ ಸಂಚಾರ ನಿರ್ವಹಿಸುವ ಸವಾಲು ಪೊಲೀಸರದ್ದು. ಕೆಲವೊಮ್ಮೆ ಪೊಲೀಸರೇ ಸಾರ್ವಜನಿಕರಲ್ಲಿ ಅಸಹಾಯಕತೆ ವ್ಯಕ್ತಪಡಿಸುವಂತಾಗಿದೆ. ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಮುಂಭಾಗದಲ್ಲೇ ಇಂತಹ ಅವ್ಯವಸ್ಥೆ ಇದೆ.

ಜಾಗವಿದ್ದರೂ ಫ‌ುಟ್‌ಪಾತ್‌ ನಿರ್ಮಿಸಿಲ್ಲ
ಫ‌ುಟ್‌ಪಾತ್‌ಗಾಗಿ ಮೀಸಲಿಟ್ಟ ಜಾಗವಿದ್ದರೂ ಅದನ್ನು ಬಳಕೆ ಮಾಡದಿರುವುದು ಪಾಲಿಕೆಯ ನಿರ್ಲಕ್ಷ್ಯತನಕ್ಕೆ ಸಾಕ್ಷಿ. ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಸಾವಿರಾರು ಪ್ರಯಾಣಿಕರು ಓಡಾಡುವ ಸ್ಥಳ ಇದು. ಲಗೇಜ್‌ಗಳನ್ನು ಹೊತ್ತುಕೊಂಡು ಸಾಗುವವರು ಕೂಡ ರಸ್ತೆಯಲ್ಲಿಯೇ ಹೋಗಬೇಕಾದ ಅನಿವಾರ್ಯತೆ ಇದೆ.

ಲಭ್ಯವಿರುವ ಜಾಗದಲ್ಲಿ ಫ‌ುಟ್‌ಪಾತ್‌ ನಿರ್ಮಿಸಿ ಇಲ್ಲಿನ ಫ‌ುಟ್‌ಪಾತ್‌ ವ್ಯಾಪಾರಿಗಳಿಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ಸಮಸ್ಯೆ ಬಹಳಷ್ಟು ಮಟ್ಟಿಗೆ ಪರಿಹಾರವಾಗಬಹುದು ಎಂಬುದು ಪಾದಚಾರಿಗಳ ಅಭಿಪ್ರಾಯ.

ಟಾಪ್ ನ್ಯೂಸ್

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1)

Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್‌!

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.