ಕುಡುಪು, ವಾಮಂಜೂರು: ಕಟ್ಟಡ ತೆರವು ಕಾರ್ಯಾಚರಣೆ

ಬಿಕರ್ನಕಟ್ಟೆ-ಸಾಣೂರು ಹೆದ್ದಾರಿ ಕಾಮಗಾರಿ ಹಿನ್ನೆಲೆ

Team Udayavani, Jul 18, 2022, 11:35 AM IST

6

ಕುಡುಪು: ರಾಷ್ಟ್ರೀಯ ಹೆದ್ದಾರಿ 169ರ ಬಿಕರ್ನಕಟ್ಟೆ-ಸಾಣೂರು ಚತುಷ್ಪಥ ಯೋಜನೆಗೆ ಪೂರಕವಾಗಿ ಕಟ್ಟಡ ತೆರವು ಕಾರ್ಯಾಚರಣೆ ರವಿವಾರ ಕುಡುಪುವಿನಿಂದ ವಾಮಂಜೂರುವರೆಗೆ ನಡೆಯಿತು. ಸುಮಾರು 10 ಮನೆ, ಅಂಗಡಿಯ ಕಾಂಪೌಂಡ್‌ ಗೋಡೆಯನ್ನು ಬುಲ್ಡೋಜರ್‌ ಮೂಲಕ ತೆರವು ಮಾಡಲಾಗಿದೆ. ಜತೆಗೆ 1 ಗ್ಯಾರೇಜ್‌ ಕಟ್ಟಡ ತೆರವು ಆಗಿದೆ.

ಮನೆ, ಕಟ್ಟಡ ತೆರವು ಕಾರ್ಯಾ ಚರಣೆ ಸಂದರ್ಭ ಕುಡುಪು ಹಾಗೂ ವಾಮಂಜೂರು ಭಾಗದಲ್ಲಿ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. “ಕಾನೂನು ವಿಚಾರ ಇನ್ನೂ ಬಾಕಿ ಇರುವಾಗ ಏಕಾಏಕಿ ತೆರವು ಮಾಡುವ ಕ್ರಮ ಸರಿಯಲ್ಲ; ಕೊಂಚ ದಿನ ಅವಕಾಶ ನೀಡಬೇಕು’ ಎಂದು ಕೆಲವರು ಕೋರಿದರು. ಈ ವೇಳೆ ಕೆಲವು ಕಟ್ಟಡ ಮಾಲಕರು ಹಾಗೂ ಭೂಸ್ವಾಧೀನಾಧಿಕಾರಿಗಳ ಜತೆಗೆ ಮಾತಿನ ಚಕಮಕಿಗೂ ಕಾರಣವಾಯಿತು.

‘ಭೂಸ್ವಾಧೀನಕ್ಕೆ ಸಂಬಂಧಿಸಿ ಹಣ ಪಡೆದುಕೊಂಡವರು ತೆರವು ಮಾಡುವಂತೆ ಈಗಾಗಲೇ ಕೆಲವು ಬಾರಿ ನೋಟಿಸ್‌ ನೀಡಿದ್ದರೂ ತೆರವು ಮಾಡದ ಕಾರಣದಿಂದ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ಅಧಿಕಾರಿಗಳು ಉತ್ತರ ನೀಡಿದ್ದಾರೆ.

ಮಂಗಳೂರು ಸಹಾಯಕ ಆಯುಕ್ತ ಮದನ್‌ ಮೋಹನ್‌, ರಾ.ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ (ಪ್ರಭಾರ) ಬಿನೋಯ್‌, ತಹಶೀಲ್ದಾರ್‌ ಪುರಂದರ ಹೆಗ್ಡೆ, ರಾ.ಹೆದ್ದಾರಿ ಪ್ರಾಧಿಕಾರ, ಗುತ್ತಿಗೆದಾರರಾದ ದಿಲೀಪ್‌ ಬಿಲ್ಡ್‌ಕಾನ್‌ನ ಪ್ರಮುಖರು ಉಪಸ್ಥಿತರಿದ್ದರು.

ಕಟ್ಟಡ ತೆರವು ಕಾರ್ಯಾಚರಣೆಗೆ ಜೂ. 28ರಂದು ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕುಡುಪುವಿನಲ್ಲಿ ಚಾಲನೆ ನೀಡಿದ್ದರು. ಮನೆ, ಅಂಗಡಿ ಸಹಿತ ಖಾಸಗಿ ಸ್ಥಳದ ತೆರವು ಬಗ್ಗೆ ಆಗ ಸೂಚನೆ ನೀಡಲಾಗಿತ್ತು. ಈ ಸಂಬಂಧ ರವಿವಾರದಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.

ವಾರದೊಳಗೆ ಮನೆ, ಕಟ್ಟಡ ತೆರವು: ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕಾಗಿ ಜಾಗ ಬಿಟ್ಟುಕೊಟ್ಟು ಪರಿಹಾರ ಮೊತ್ತ ಪಡೆದುಕೊಂಡವರು ಈಗಾಗಲೇ ಸ್ಥಳ ತೆರವು ಮಾಡಬೇಕಿತ್ತು. ತೆರವು ಮಾಡದ ಕಾರಣ ಕಾರ್ಯಾಚರಣೆಯನ್ನು ಕುಡುಪುವಿನಿಂದ ವಾಮಂಜೂರು ಭಾಗದವರೆಗೆ ರವಿವಾರ ನಡೆಸಲಾಗಿದೆ. ಕೆಲವು ಕಾಂಪೌಂಡ್‌ ಕೆಡವಲಾಗಿದೆ. ಪರಿಹಾರ ಮೊತ್ತ ಪಡೆದವರು ಮುಂದಿನ 1 ವಾರದೊಳಗೆ ಕಟ್ಟಡ/ಮನೆ ತೆರವು ಮಾಡದಿದ್ದರೆ ನಾವೇ ತೆರವು ಮಾಡಲಿದ್ದೇವೆ ಎಂದು ಸೂಚನೆ ನೀಡಲಾಗಿದೆ. – ಬಿನೋಯ್‌, ವಿಶೇಷ ಭೂಸ್ವಾಧೀನಾಧಿಕಾರಿ, (ಪ್ರಭಾರ) ರಾ.ಹೆದ್ದಾರಿ ಪ್ರಾಧಿಕಾರ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.