Kulai: ಅವೈಜ್ಞಾನಿಕ ಕುಳಾಯಿ ಮೀನುಗಾರಿಕಾ ಜೆಟ್ಟಿ

ಸಾಂಕೇತಿಕ ಪ್ರತಿಭಟನೆ: ಪಾಲಿಕೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ.

Team Udayavani, Oct 15, 2024, 3:34 PM IST

10

ಕುಳಾಯಿ: ಕುಳಾಯಿ ಜೆಟ್ಟಿಯನ್ನು ಸ್ಥಳೀಯ ಮೀನುಗಾರರ ಬೇಡಿಕೆ ಯನ್ನು ಪರಿಗಣಿಸದೆ ಯಥಾಸ್ಥಿತಿಯಲ್ಲಿ ನಿರ್ಮಿಸ ಲಾಗುತ್ತಿದ್ದು, ಇದರಿಂದ ಆಕ್ರೋಶ ಗೊಂಡ ನಾಡದೋಣಿ ಹಾಗೂ ಮೂಲ ಮೀನುಗಾರ ಸಂಘಟನೆಯ ಮೀನುಗಾರರು ಸೋಮವಾರ ಜೆಟ್ಟಿ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ಮೀನುಗಾರಿಕೆಗೆ ಈ ಜೆಟ್ಟಿಯಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದ್ದು ಸರಕಾರವು ಸ್ಥಳೀಯ ನಾಡ ದೋಣಿ ಮೀನುಗಾರರ ಅಹವಾಲಿಗೆ ಸ್ಪಂದಿಸದೆ ಮತ್ತೆ ಕಾಮಗಾರಿಯನ್ನ ಆರಂಭಿಸಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಪಾಲಿಕೆ ಚುನಾವಣೆ ಸಹಿತ ಎಲ್ಲ ಚುನಾವಣೆಯಲ್ಲಿ ಮತ ಹಾಕದೆ ಬಹಿಷ್ಕಾರ ಹಾಕಲಿದ್ದೇವೆ ಎಂದು ಗಂಭೀರ ಎಚ್ಚರಿಕೆಯನ್ನು ಮೀನುಗಾರರು ನೀಡಿದರು.

ಕರಾವಳಿ ಸಾಂಪ್ರದಾಯಿಕ ನಾಡ ದೋಣಿ ಹಾಗೂ ಕರಾವಳಿ ಮೂಲ ನಾಡ ದೋಣಿ ಮೀನುಗಾರಿಕಾ ಸಂಘಟನೆಗಳು ಸೋಮವಾರ ತುರ್ತು ಸಭೆ ನಡೆಸಿ ಹೋರಾಟದ ರೂಪುರೇಷೆ ಚರ್ಚಿಸಿದರು.

ಎನ್‌ಎಂಪಿಎ ಅಧಿಕಾರಿಗಳು ಜನಪ್ರತಿನಿಧಿಗಳ ಭಯವೇ ಇಲ್ಲವೆಂಬಂತೆ ಅವರ ಮಾತಿಗೂ ನಿರ್ಲಕ್ಷ್ಯ ವಹಿಸಿದ್ದಾರೆ. ಕಾಮಗಾರಿ ಸ್ಥಗಿತಕ್ಕೆ ರಾಜ್ಯದ ಸಚಿವ ಮಂಕಾಳ್‌ ವೈದ್ಯ ಆದೇಶ ನೀಡಿದ್ದರೂ ಕಾಮಗಾರಿಯನ್ನು ಗುತ್ತಿಗೆದಾರರು ಮುಂದುವರಿಸಿದ್ದಾರೆ.

ಜನಪ್ರತಿನಿಧಿಗಳು ನಾಡ ದೋಣಿ ಮೀನುಗಾರಿಕೆಗೆ ಸೂಕ್ತವಾದ ಜೆಟ್ಟಿ ನಿರ್ಮಾಣ ಮಾಡುವವರೆಗೆ ಹಾಗೂ ಬೇಡಿಕೆಯನ್ನು ಈಡೇರಿಸುವವರೆಗೆ ಚುನಾವಣ ಬಹಿಷ್ಕಾರ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆಯ ನಿರ್ಧಾರ ಕೈಗೊಂಡರು. ಇದೇ ಸಂದರ್ಭ ಕಾಮಗಾರಿಯ ಲಾರಿಗಳನ್ನು ತಡೆದು ಒಂದು ಗಂಟೆ ಪ್ರತಿಭಟನೆ ನಡೆಸಲಾಯಿತು.

ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಮಗಾರಿ
ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ವಸಂತ ಸುವರ್ಣ ಮಾತನಾಡಿ, ಅವೈಜ್ಞಾನಿಕ ಕಾಮಗಾರಿಯನ್ನು ನಿಲ್ಲಿಸಲು ಸಚಿವ ಮಂಕಾಳ್‌ ವೈದ್ಯ ಸ್ಥಳಕ್ಕೆ ಭೇಟಿ ನೀಡಿ ಆದೇಶಿಸಿದ್ದರು. ಆದರೆ ಎನ್‌ಎಂಪಿಎ ಮೀನುಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಮಗಾರಿ ನಡೆಸಲಾಗುತ್ತಿದೆ. ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ ಎಂದರು.

ಕೋಟ್ಯಾಂತರ ರೂ.ಖರ್ಚು ಮಾಡಿ ದಕ್ಕೆ ಬದಲು ಕೊಳವೊಂದು ನಿರ್ಮಿಸುತ್ತಿರುವ ರೀತಿಯಲ್ಲಿದೆ. ಅಧಿಕಾರಿಗಳು ಇಷ್ಟು ನಿರ್ಲಕ್ಷé ವಹಿಸಿ ಕಾಟಾಚಾರಕ್ಕೆ ಜೆಟ್ಟಿ ನಿರ್ಮಿಸುವುದರ ಅಗತ್ಯವೇನು?. ಮೀನುಗಾರರಿಗೆ ಅನ್ಯಾಯ ವಾದರೆ ಸಹಿಸಲು ಸಾಧ್ಯವಾಗದು ಹೋರಾಟವೇ ಅಂತಿಮ ಎಂದು ಪ್ರಧಾನ ಕಾರ್ಯದರ್ಶಿ ಸುರೇಶ್‌ ಶ್ರೀಯಾನ್‌ ಬೈಕಂಪಾಡಿ ನುಡಿದರು.

ಸುಧೀರ್‌ ಶ್ರೀಯಾನ್‌ ಮಾತನಾಡಿ ಮೀನುಗಾರರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಉಳ್ಳಾಲದಿಂದ ಕಾರವಾರದವರೆಗೆ ಇರುವ ಮೀನುಗಾರರ ಒಕ್ಕೂಟದ ಬೆಂಬಲ ಪಡೆದು ಕಾಮಗಾರಿ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಂಘದ ಉಪಾಧ್ಯಕ್ಷ ಉದಯ್‌ ಅಮೀನ್‌, ಪ್ರಧಾನ ಕಾರ್ಯದರ್ಶಿ ಸುರೇಶ್‌ ಶ್ರೀಯಾನ್‌ ಬೈಕಂಪಾಡಿ, ದ.ಕ. ಕರಾವಳಿ ಮೂಲ ಮೀನುಗಾರರ ಸಂಘದ ಅಧ್ಯಕ್ಷ ಅಶ್ವಥ್‌ ಕಾಂಚನ್‌ ಬೈಕಂಪಾಡಿ, ಸಂಘಟನ ಕಾರ್ಯದರ್ಶಿ ಚಂದ್ರಶೇಖರ ಶ್ರೀಯಾನ್‌ ಮತ್ತಿತರ ಪದಾಧಿಕಾರಿಗಳು, ಸರ್ವಸದಸ್ಯರು ಉಪಸ್ಥಿತರಿದ್ದರು.

ಅ.16ರಂದು ಸಭೆ
ಮೀನುಗಾರರ ಅನಿರ್ದಿಷ್ಟಾವಧಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೇಡಿಕೆಯನ್ನು ಪರಿಗಣಿಸುವ ಸಲುವಾಗಿ ಕುಳಾಯಿ ಜೆಟ್ಟಿ ಕಾಮಗಾರಿ ಕುರಿತಂತೆ ಅ.16ರಂದು ನವಮಂಗಳೂರು ಬಂದರು ಪ್ರಾಧಿಕಾರದ ಜತೆ ಸಂಸದ ಬ್ರಿಜೇಶ್‌ ಚೌಟ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಶಾಸಕ ಡಾ|ಭರತ್‌ ಶೆಟ್ಟಿ ವೈ, ಮೀನುಗಾರರ ಸಂಘದ ಮುಖಂಡರು ಪಾಲ್ಗೊಳ್ಳಲಿದ್ದಾರೆ.ಈ ನಿಟ್ಟಿನಲ್ಲಿ ಮಂಗಳವಾರದಿಂದ ನಡೆಯುವ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅಧಿಕಾರಿಗಳು ಬೇಡಿಕೆಗೆ ಸ್ಪಂದಿಸದೇ ಹೋದಲ್ಲಿ ಹೋರಾಟವೇ ಅಂತಿಮವಾಗಲಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

4-biggboss

BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ರೇಣುಕಾಚಾರ್ಯ ಟೀಕೆ

Date announcement for by-elections of Channapatnam, Sandur, Shiggamvi constituencies

By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಸಾವಯವ ಕೃಷಿಕ ಗ್ರಾಹಕ ಬಳಗದಿಂದ ನ. 1ರಂದು ನಗರದಲ್ಲಿ ಕಾರ್ಯಾಗಾರ

8(1)

Padil ಸುತ್ತಮುತ್ತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗುಂಡಿ; ಸಂಚಾರ ದುಸ್ತರ

4(4)

Mangaluru: ಜನಸಾಗರವೇ ಸಂಭ್ರಮಿಸಿದ ಮಂಗಳೂರು ದಸರಾ

3

Bajpe ಪೇಟೆ ಸಣ್ಣ ಸೇತುವೆ, ತೋಡಿಗೆ ತ್ಯಾಜ್ಯ ಎಸೆತ; ಪರಿಸರವೆಲ್ಲ ದುರ್ನಾತ

1-male

Dakshina Kannada; ಜಿಲ್ಲೆಯ ವಿವಿಧೆಡೆ ಮಳೆ : ಬೆಳ್ತಂಗಡಿಯಲ್ಲಿ ಬರೆ ಕುಸಿತ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Udupi: ಬಿಎಸ್‌ ಎನ್‌ ಎಲ್‌ ಕೇಬಲ್‌ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್‌ ಕೇಬಲ್‌ ಪತ್ತೆ!

Udupi: ಬಿಎಸ್‌ ಎನ್‌ ಎಲ್‌ ಕೇಬಲ್‌ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್‌ ಕೇಬಲ್‌ ಪತ್ತೆ!

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

4-biggboss

BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

musk

Newyork: ಮರಳಿದ ರಾಕೆಟ್‌ ಬೂಸ್ಟರ್‌ ಸ್ಪೇಸ್‌ ಎಕ್ಸ್‌ನಿಂದ “ಕ್ಯಾಚ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.