ಚೇಳಾಯಿರು ಗ್ರಾಮ ಬೆಳಗುತ್ತಿರುವ ಎಲ್‌ಇಡಿ ಲೈಟುಗಳು !

ವಿದ್ಯುತ್‌ ಮಿತ ಬಳಕೆಯ ಉದ್ದೇಶ

Team Udayavani, Mar 30, 2019, 10:11 AM IST

30-March-1

ಎಲ್‌ಇಡಿ ವಿದ್ಯುತ್‌ ದೀಪಗಳನ್ನು ಅಳವಡಿಸಿರುವುದು.

ಚೇಳಾಯಿರು : ವಿದ್ಯುತ್‌ ಮಿತ ಬಳಕೆಯ ಉದ್ದೇಶದಿಂದ ದ.ಕ. ಜಿಲ್ಲೆಯ ವ್ಯಾಪ್ತಿಯ ಚೇಳಾಯರು ಗ್ರಾಮದಲ್ಲಿ ಹಾಲಿ ವಿದ್ಯುತ್‌ ಬೀದಿ ದೀಪಗಳನ್ನು ಸಂಪೂರ್ಣವಾಗಿ ಎಲ್‌ಇಡಿ ವಿದ್ಯುತ್‌ ದೀಪಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿಯಾಗಿದೆ.
ವಿದ್ಯುತ್‌ ಮಿತಬಳಕೆ ದೃಷ್ಟಿಯಿಂದ ಕೇಂದ್ರ ಸರಕಾರದ ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ಯೋಜನೆಯ ಪ್ರಸ್ತಾವನೆಯನ್ನು ಆಯಾ ರಾಜ್ಯದ ಸ್ಥಳೀಯ ಸಂಸ್ಥೆಗಳು ಅಳವಡಿಸಿಕೊಳ್ಳುತ್ತಿದ್ದು, ಚೇಳಾಯಿರು ಗ್ರಾಮ ಪಂಚಾಯತ್‌ ಇದನ್ನು ವೇಗವಾಗಿ ಅನುಷ್ಠಾನಗೊಳಿಸುವತ್ತ ಮುಂದಡಿಯಿರಿಸಿದೆ.
ಚೇಳಾಯಿರು ಗ್ರಾಮ ಪಂಚಾಯತ್‌ ವ್ಯಾಪ್ತಿಯು ಚೇಳಾಯಿರು ಮಧ್ಯ ಎಂ.ಆರ್‌.ಪಿ.ಎಲ್‌. ನಿರ್ವಸಿತರ ಕಾಲನಿ ಮೂರು ಗ್ರಾಮಗಳನ್ನು ಒಳಗೊಂಡಿದೆ. ಚೇಳಾಯಿರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪ್ರಮುಖ ಎಲ್ಲ ರಸ್ತೆಗಳಿಗೆ ದಾರಿದೀಪ ವ್ಯವಸ್ಥೆ ಇದ್ದು. ಒಳಗಡೆಯ ಹೆಚ್ಚಿನ ರಸ್ತೆಗಳಿಗೆ ದಾರಿದೀಪದ ವ್ಯವಸ್ಥೆ ಗ್ರಾಮ ಪಂಚಾಯತ್‌ನಿಂದ ಆಗಿದೆ.
ತಿಂಗಳಿಗೆ 20 ಸಾವಿರ ರೂ. ಉಳಿತಾಯ
ಗ್ರಾಮ ಪಂಚಾಯತ್‌ ಗೆ ದಾರಿದೀಪದ ವಿದ್ಯುತ್‌ ಬಿಲ್ಲು ತಿಂಗಳಿಗೆ ಸುಮಾರು 40,000 ರೂ. ಬರುತ್ತಿದ್ದು. ಇದನ್ನು ಮನಗಂಡ ಗ್ರಾಮ ಪಂಚಾಯತ್‌ ಈ ಬಗ್ಗೆ ಎಂ.ಆರ್‌.ಪಿ.ಎಲ್‌. ಸಂಸ್ಥೆಗೆ ಮನವಿ ನೀಡಿದ್ದು ಇದಕ್ಕೆ ಸ್ಪಂದನೆ ನೀಡಿದ ಎಂ.ಆರ್‌.ಪಿ.ಎಲ್‌. ಸಂಸ್ಥೆ ಗ್ರಾಮ ಪಂಚಾಯತ್‌ಗೆ ಸೋಲಾರ್‌ ದಾರಿದೀಪ ಅಳವಡಿಸಲು ಸುಮಾರು 25 ಲಕ್ಷ ರೂ. ಬಿಡುಗಡೆ ಮಾಡಿದೆ.
ಇದರಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಚೇಳಾಯಿರುವಿನ ಮುಖ್ಯ ರಸ್ತೆಗೆ ಸೋಲಾರ್‌ ದಾರಿದೀಪ ಅಳವಡಿಸಿದೆ. ಇದರಿಂದ ಗ್ರಾ.ಪಂ.ಗೆ 20,000 ರೂ. ತಿಂಗಳಿಗೆ ವಿದ್ಯುತ್‌ ಬಿಲ್ಲು ಉಳಿತಾಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಉಳಿದ 15 ಲಕ್ಷ ರೂ.ಗಳಲ್ಲಿ ಗ್ರಾಮ ಪಂಚಾಯತ್‌ನ ಎಲ್ಲ ಮುಖ್ಯ ರಸ್ತೆಗಳಿಗೆ ಸೋಲಾರ್‌ ದೀಪ ಅಳವಡಿಸಿ ಇನ್ನಷ್ಟು ವಿದ್ಯುತ್‌ ಉಳಿತಾಯ ಮತ್ತು ಪಂಚಾಯತ್‌ಗೆ ಆದಾಯ ಉಳಿಸಲು ಸಾಧ್ಯವಿದೆ.
ವಿವಿಧ ರಾಜ್ಯಗಳಲ್ಲಿ ಯೋಜನೆ ಅನುಷ್ಠಾನ
ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಯೋಜನೆ ಅನುಷ್ಠಾನ ಪ್ರಗತಿಯಲ್ಲಿದೆ. ಇದೀಗ ರಾಜ್ಯದಲ್ಲೂ ಎಲ್ಲ ಸ್ಥಳೀಯ ಸಂಸ್ಥೆಗಳು ಹಾಲಿ ಬೀದಿ ದೀಪಗಳನ್ನು ಎಲ್‌ಇಡಿ ವಿದ್ಯುತ್‌ ದೀಪಗಳನ್ನಾಗಿ ಪರಿವರ್ತಿಸಲು ಮುಂದಾಗಿದೆ.
ಎಲ್‌ಇಡಿ ಅಳವಡಿಕೆ ದುಬಾರಿ
ಎಲ್‌ಇಡಿ ಅಳವಡಿಕೆ ದುಬಾರಿ ಆಗಿದ್ದು, ಅನುದಾನದ ಕೊರತೆಯಿಂದ ಈ ಯೋಜನೆ ಎಲ್ಲೂ ಸಂಪೂರ್ಣವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಅಳವಡಿಕೆಗೆ ತಗಲುವ ಹೊರೆಯನ್ನು ಹೊರಲು ಸ್ಥಳೀಯ ಸಂಸ್ಥೆಗಳಿಂದ ಸಾಧ್ಯವಿಲ್ಲ.
ಚೇಳಾಯಿರು ಗ್ರಾಮ ಪಂಚಾಯತ್‌ಗೆ ಎಂಆರ್‌ಪಿಎಲ್‌ ತನ್ನ ಸಿಎಸ್‌ಆರ್‌ ನಿಧಿ ಒದಗಿಸಿ ಸಹಾಯ ಹಸ್ತ ಚಾಚಿದೆ. ಕೇಂದ್ರೀಕೃತ ನಿರ್ವಹಣೆ ವ್ಯವಸ್ಥೆಯಿಂದ ವಿದ್ಯುತ್‌ ಪೋಲಾಗುವುದನ್ನೂ ಇದರಿಂದ ತಡೆಗಟ್ಟಬಹುದು. ಶೇ.45 ವಿದ್ಯುತ್‌ ಉಳಿತಾಯ ಸಾಧ್ಯವಿದ್ದು, ಇದೊಂದು ಬಹುಪಯೋಗಿ ಯೋಜನೆಯಾಗಿದೆ. ಎಲ್‌ಇಡಿ ದೀಪಗಳಲ್ಲಿ ಬೆಳಕಿನ ಪ್ರಖರತೆಯೂ ಹೆಚ್ಚಾಗಿರಲಿದ್ದು, ಸುಗಮ ಸಂಚಾರಕ್ಕೆ ನೆರವಾಗಲಿವೆ.
ವಿದ್ಯುತ್‌, ಬಿಲ್‌ ಉಳಿತಾಯ
ಎಲ್‌ಇಡಿ ಅಳವಡಿಕೆಯಿಂದ ವಿದ್ಯುತ್‌ ಬಿಲ್‌ನಲ್ಲಿ ಉಳಿಯುವುದರ ಜತೆಗೆ ಸವಾರರಿಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲ. ಸೋಲಾರ್‌ ಮೂಲಕ ಇದರ ಚಾರ್ಜ್‌ ಕೂಡ ಆಗುತ್ತದೆ. ಯಾವುದೇ ಲೋಪ ದೋಷವಿದ್ದರೆ ಗುತ್ತಿಗೆದಾರರೇ ಸರಿ ಪಡಿಸಿಕೊಡಬೇಕು.ಇಲ್ಲಿನ ಗ್ರಾಮ ಪಂಚಾಯತ್‌ನ್ನು ಆಧುನೀಕರಣಗೊಳಿಸಲು ಬೇಕಾದ ಕ್ರಮವನ್ನು ಹಂತ ಹಂತವಾಗಿ ಕೈಗೊಳ್ಳುತ್ತೇವೆ.
 - ವಿಶ್ವನಾಥ್‌,
    ಪಿಡಿಒ ಗ್ರಾ. ಪಂ. ಚೇಳಾಯಿರು
ನೀರಿನ ಇ ಬಿಲ್‌  ವ್ಯವಸ್ಥೆ ಚಿಂತನೆ
ಚೇಳಾಯಿರು ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ಇದೀಗ ಎಲ್‌ಇಡಿ ಅಳವಡಿಕೆ ಅದರ ಒಂದು ಭಾಗವಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಇ ಬಿಲ್‌ ವ್ಯವಸ್ಥೆ ಕೈಗೊಳ್ಳುತ್ತೇವೆ.
ಜಯಾನಂದ
ಅಧ್ಯಕ್ಷರು, ಗ್ರಾ.ಪಂ. ಚೇಳಾಯಿರು
ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.