ರಸ್ತೆ ಹಂಪ್‌ ಗಳಿಗೆ ಬಣ್ಣ ಬರಲಿ; ಅಪಾಯ ಕಳೆಯಲಿ ಅವಘಡ ಅಳಿಯಲಿ


Team Udayavani, Dec 14, 2021, 5:34 PM IST

ರಸ್ತೆ ಹಂಪ್‌ ಗಳಿಗೆ ಬಣ್ಣ ಬರಲಿ; ಅಪಾಯ ಕಳೆಯಲಿ ಅವಘಡ ಅಳಿಯಲಿ

ಮಹಾನಗರ: ವಾಹನಗಳ ವೇಗ ನಿಯಂತ್ರಣಕ್ಕಾಗಿ ನಗರದ ವಿವಿಧ ರಸ್ತೆಗಳಲ್ಲಿ ಹಂಪ್ಸ್‌ ಅಳವಡಿಸಲಾಗಿದೆ; ಆದರೆ ಬಹುತೇಕ ರಸ್ತೆಗಳ ಹಂಪ್ಸ್‌ಗಳ ಬಣ್ಣ ಮಾಸಿ ಹೋಗಿ ಅದಾಗಲೇ ಹಲವು ಸಮಯವಾಗಿದೆ. ಅಪಘಾತ ನಿಯಂತ್ರಣಕ್ಕಾಗಿ ಅಳವಡಿಸಿದ್ದ ಹಂಪ್ಸ್‌ಗಳೇ ಈಗ ಅಪಘಾತಕ್ಕೆ ಕಾರಣವಾಗುತ್ತಿರುವುದು ವಿಪರ್ಯಾಸವಾಗಿದೆ!

ಹಂಪ್ಸ್‌ಗಳ ಬಣ್ಣ ಮಾಸಿದ ಪರಿಣಾಮ ನಗರದ ಬಹುತೇಕ ಭಾಗಗಳಲ್ಲಿ ಅಪಘಾತ ವಲಯ ಸೃಷ್ಟಿ ಯಾಗಿದೆ. ಹಂಪ್ಸ್‌ ಬಗ್ಗೆ ತಿಳಿಯದೆ ವೇಗವಾಗಿ ಬಂದರೆ ಆಪತ್ತು ಕಟ್ಟಿಟ್ಟಬುತ್ತಿ. ಅದರಲ್ಲೂ ರಾತ್ರಿ ಸಂಚರಿಸುವವರು ಹೆಚ್ಚು ಅಪಾಯಕ್ಕೆ ಸಿಲುಕುತ್ತಿದ್ದಾರೆ.

ಲೇಡಿಹಿಲ್‌ನಿಂದ ಕೊಟ್ಟಾರ, ಕಾಪಿಕಾಡ್‌, ಬಲ್ಲಾಳ್‌ಬಾಗ್‌, ಉರ್ವಸ್ಟೋರ್‌, ಪಂಪ್‌ವೆಲ್‌, ಬೆಂದೂರ್‌ವೆಲ್‌, ಬಂಟ್ಸ್‌ಹಾಸ್ಟೆಲ್‌ ಬಳಿ, ಕರಾವಳಿ ಉತ್ಸವ ಮೈದಾನ ಬಳಿ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಹಾಕಿರುವ ಹಂಪ್ಸ್‌ಗಳಲ್ಲಿ ಈಗ ಬಣ್ಣವೇ ಇಲ್ಲ. ಆದುದರಿಂದ ಇಲ್ಲಿ ಹಂಪ್ಸ್‌ ಇದೆ ಎಂದು ದೂರಕ್ಕೆ ಗೊತ್ತಾಗುವುದೇ ಇಲ್ಲ.
ನಗರದ ವಿವಿಧ ಕಡೆಗಳಲ್ಲಿ ಅವೈಜ್ಞಾನಿಕ ಹಂಪ್ಸ್‌ ಕಾರಣದಿಂದಾಗಿ ಈ ಹಿಂದೆ ಅಪಘಾತಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ಬಹುತೇಕ ಕಡೆಗಳಲ್ಲಿ ವೈಜ್ಞಾನಿಕ ರೀತಿಯ ಐಆರ್‌ಸಿ ಮಾದರಿಯ ಹಂಪ್ಸ್‌ಗಳನ್ನು ಅಳವಡಿಸಲಾಗಿದೆ. ಈ ಕಾರಣದಿಂದ “ರಬ್ಬರ್‌ ಹಂಪ್ಸ್‌’ಗಳನ್ನು ತೆರವು ಮಾಡಲಾಗಿತ್ತು. ಹೊಸ ಹಂಪ್ಸ್‌ಗಳನ್ನು ನಿರ್ಮಿಸಿದ ಕೂಡಲೇ ಬಣ್ಣ ಬಳಿದಿದ್ದು, ಅದು ನಿತ್ಯ ವಾಹನ ಸಂಚಾರದಿಂದ ಮಾಸಿ ಹೋಗಿದೆ. ಮತ್ತೊಮ್ಮೆ ಬಣ್ಣ ಬಳಿಯುವ ಕಾರ್ಯ ನಡೆದೇ ಇಲ್ಲ.

ಬಣ್ಣದ ಜತೆಗೆ ಹಂಪ್ಸ್‌ ಮಾಯ!
ಕೊಟ್ಟಾರಚೌಕಿ ಫ್ಲೈಓವರ್ ಕೆಳಗಡೆ, ಚಿಲಿಂಬಿ, ಬೆಂದೂರ್‌ ಸೇರಿದಂತೆ ನಗರದ ಕೆಲವು ಹಂಪ್ಸ್‌ಗಳಲ್ಲಿ ಬಣ್ಣ ಮಾಸಿದ್ದು ಮಾತ್ರವಲ್ಲ; ಹಂಪ್ಸ್‌ ಕೂಡ ಮಾಯವಾಗಿದೆ. ಈ ಪೈಕಿ ಕೆಲವೆಡೆ ಹಂಪ್ಸ್‌ನ ಕೆಲವು ಭಾಗದ ಡಾಮರು ಕಿತ್ತು ಹೋಗಿದೆ. ಇಲ್ಲಿ ವಾಹನ ಸವಾರರು ಸರ್ಕಸ್‌ ಮಾಡಬೇಕಿದೆ.

ಝೀಬ್ರಾ ಕ್ರಾಸ್‌ನಲ್ಲೂ ಬಣ್ಣವಿಲ್ಲ!
ನಗರದ ಅತೀ ಹೆಚ್ಚು ಜನ ಸೇರುವ ಕಡೆಗಳಲ್ಲಿ “ಝೀಬ್ರಾ ಕ್ರಾಸ್‌’ ಅನ್ನು ಅಳವಡಿಸಲಾಗಿದೆ. ವಿಶೆಷವೆಂದರೆ ಇದರ ಬಣ್ಣ ಕೂಡ ಈಗ ಮಾಸಿದೆ. ಜತೆಗೆ ಲಾಲ್‌ಬಾಗ್‌, ಪಿವಿಎಸ್‌ ಸಹಿತ ವಿವಿಧ ಸಿಗ್ನಲ್‌ಗ‌ಳಲ್ಲಿ ವಾಹ ನಗಳ ನಿಲುಗಡೆ ಗೊತ್ತುಪಡಿಸುವ ಬಣ್ಣವೂ ಮಾಸಿದೆ. ಹೀಗಾಗಿ ವಾಹನ ನಿಲ್ಲಿಸಲು ಕೂಡ ಇಲ್ಲಿ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಕ್ಲಾಕ್‌ಟವರ್‌ನಿಂದ ಎ.ಬಿ. ಶೆಟ್ಟಿ ರಸ್ತೆ; ಕಾಮಗಾರಿ ಆರಂಭ
ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಕ್ಲಾಕ್‌ಟವರ್‌ ನಿಂದ ಎ.ಬಿ.ಶೆಟ್ಟಿ ವೃತ್ತದವರೆಗೆ ರಸ್ತೆ ಮೇಲ್ದರ್ಜೆ ಗೇರಿದ್ದು, ಇಲ್ಲಿ ಹಂಪ್ಸ್‌ ಹಾಗೂ ಅದಕ್ಕೆ ಬಣ್ಣ ಬಳಿಯುವ ಕಾಮಗಾರಿ ಶುರುವಾಗಿದೆ. ರಾತ್ರಿ ಸಮಯದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ನಿತ್ಯ ಸಾವಿರಾರು ಮಂದಿ ಸಂಚರಿಸುವ ಕಾರಣದಿಂದ ಪಾದಚಾರಿಗಳಿಗೆ ನೆರವಾಗಲು ಝೀಬ್ರಾ ಕ್ರಾಸ್‌ ಕೂಡ ಹಾಕಲಾಗುತ್ತಿದೆ.

ಕೆವೇ ದಿನಗಳಲ್ಲಿ ಕ್ರಮ
ನಗರದ ಕೆಲವು ಹಂಪ್ಸ್‌ಗಳ ಬಣ್ಣ ಮಾಸಿದೆ. ಆದರೆ ಇತ್ತೀಚಿನವರೆಗೂ ಮಳೆ ಇದ್ದ ಕಾರಣದಿಂದ ಹಂಪ್ಸ್‌ಗಳಿಗೆ ಬಣ್ಣ ಬಳಿಯಲು ಸಾಧ್ಯವಾಗಿರಲಿಲ್ಲ. ಈಗ ಮಳೆ ನಿಂತಿರುವುದರಿಂದ ಕೆಲವೇ ದಿನಗಳಲ್ಲಿ ಹಂಪ್ಸ್‌ಗಳಿಗೆ ಬಣ್ಣ ಬಳಿಯಲು ಹಾಗೂ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು.
ಪ್ರೇಮಾನಂದ ಶೆಟ್ಟಿ, ಮೇಯರ್‌,
ಮಹಾನಗರ ಪಾಲಿಕೆ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.