LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


Team Udayavani, Apr 25, 2024, 9:58 AM IST

5-harikrishna

ಮಂಗಳೂರು: ತುಳುನಾಡಿನ ಪುಣ್ಯದ ಮಣ್ಣಿನ ಜನರು ಹಿಂದೂ ಸಂಸ್ಕೃತಿ, ಪರಂಪರೆ ಉಳಿಸುವ ಆಶಯದಿಂದಾಗಿ ಜಾತಿಯನ್ನು ನೋಡದೆ ದೇಶದ ಹಿತವನ್ನೇ ಬಯಸಿದ ಕಾರಣ ದಿಂದ ಬಿಜೆಪಿ ಸಶಕ್ತವಾಗಿ ಕರಾವಳಿಯಲ್ಲಿ ನಿಂತಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆಯಲ್ಲೂ ಜಾತಿಗಿಂತ ದೇಶದ ಹಿತವೇ ಮುಖ್ಯ ಎಂಬುವುದನ್ನು ಕ್ಯಾ| ಬ್ರಿಜೇಶ್‌ ಚೌಟ ಗೆಲುವಿನ ಮೂಲಕ ಮತದಾರರು ಸ್ಪಷ್ಟಪಡಿಸಲಿದ್ದಾರೆ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ಹೇಳಿದರು.

ಕ್ಯಾ| ಬ್ರಿಜೇಶ್‌ ಚೌಟ ಅವರ ಪರ ಮೂಲ್ಕಿಯಲ್ಲಿ ಬುಧವಾರ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತುಳುನಾಡಿನ ಮಣ್ಣು ಅತ್ಯಂತ ಪವಿತ್ರವಾದ ಮಣ್ಣು. ಕಳೆದ 33 ವರ್ಷಗಳಿಂದ ಇಲ್ಲಿನ ಮತದಾರರು ಜಾತಿ, ಮತ, ಪಂಥ, ಭಾಷೆ ನೋಡದೆ ಮತದಾನ ಮಾಡಿದ್ದಾರೆ. ಧನಂಜಯ ಕುಮಾರ್‌, ಸದಾನಂದ ಗೌಡ, ನಳಿನ್‌ ಕುಮಾರ್‌ ಕಟೀಲು ಅವರ ಜತೆಗೆ ನಮ್ಮ ಬಿಲ್ಲವರು, ಬಂಟರು, ಕುಲಾಲರು, ಬ್ರಾಹ್ಮಣರ ಸಹಿತ ಎಲ್ಲ ತುಳುನಾಡಿನ ಮಣ್ಣಿನ ಮಕ್ಕಳು ಜಾತಿ ನೋಡದೆ ಮತ ನೋಡದೆ ಭಾರತದ ಹಿಂದೂ ಸಂಸ್ಕೃತಿ, ಪರಂಪರೆ ಉಳಿಸುವಂತಹ ಪಕ್ಷವಾದ ಬಿಜೆಪಿ ಪರವಾಗಿಯೇ ನಿಂತಿದ್ದಾರೆ. ಇದೇ ರೀತಿ ಈ ಬಾರಿಯೂ ಕ್ಯಾ| ಬ್ರಿಜೇಶ್‌ ಚೌಟ ಅವರ ಬಿಜೆಪಿ ಪರವಾಗಿಯೇ ಜನರು ನಿಲ್ಲಲಿದ್ದಾರೆ. ಇದರಲ್ಲಿ ಜಾತಿ ನೋಡುವುದಿಲ್ಲ. ಮತ-ಭಾಷೆಯನ್ನೂ ಜನರು ನೋಡುವುದಿಲ್ಲ. ದೇಶದ ಹಿತವನ್ನೇ ಜನರು ಬಯಸಿದ್ದಾರೆ ಎಂದರು.

ಕಾಂಗ್ರೆಸ್‌ನ ಕೈ ಚಿಹ್ನೆಯಲ್ಲಿ 5 ಬೆರಳುಗಳಿವೆ. ಅದರಲ್ಲಿ 1 ಬೆರಳು ಮಾತ್ರ ಕಾಂಗ್ರೆಸ್‌. ಉಳಿದ ಒಂದೊಂದು ಬೆರಳುಗಳು ಭಾರತ ವಿರೋಧಿ ನಿಲುವು ಹೊಂದಿದ ಪಕ್ಷಗಳ ಸಖ್ಯವನ್ನು ಹೊಂದಿದೆ. ಹೀಗಾಗಿ ಭಾರತ ವಿರೋಧಿ ಪಕ್ಷವನ್ನು ಮೆಟ್ಟಿನಿಲ್ಲಬೇಕಿದೆ ಎಂದರು.

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲ್ಲುವುದಕ್ಕೆ ಹಾಗೂ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದವರು ಹೇಳಿದರು.

ಶಾಸಕ ಉಮಾನಾಥ ಕೋಟ್ಯಾನ್‌, ಬಿಜೆಪಿ ಮುಖಂಡರಾದ ಈಶ್ವರ ಕಟೀಲು, ಅನಿಲ್‌ ಕುಮಾರ್‌, ದಿನೇಶ್‌ ಮುಂತಾದವರು ಉಪಸ್ಥಿತರಿದ್ದರು.

“ಪ್ರಧಾನಿ ಮೋದಿ ಭಾರತ ಮಾತೆಯ ಪೂಜಾರಿ

ಭಾರತ ಮಾತೆಯನ್ನು ಪೂಜೆ ಮಾಡಿ, ದೇಶದ ಸರ್ವ ಜನರ ಹಾರೈಕೆಯನ್ನೇ ತನ್ನ ಕಾಯಕವಾಗಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ಈ ದೇಶದ ಮಹಾ ಪೂಜಾರಿ. ಅವರು ಭಾರತದ ಪೂಜಾರಿಯೂ ಹೌದು. ಹಿಂದುತ್ವದ ಪೂಜಾರಿಯೂ ಹೌದು. ದೇಶದ ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಪೂಜಾರಿ ಅವರು. ದೇಶ ರಕ್ಷಣೆಯ ಮಹಾ ಸಂಕಲ್ಪದ ಕನಸುಗಾರ ಅವರು ಎಂದು ಹರಿಕೃಷ್ಣ ಬಂಟ್ವಾಳ ಹೇಳಿದರು.

ಟಾಪ್ ನ್ಯೂಸ್

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.