Mallikatte: ಸಿಟಿ ಆಸ್ಪತ್ರೆ ಜಂಕ್ಷನ್; ರಸ್ತೆ ಕಾಂಕ್ರೀಟ್ ಕಾಮಗಾರಿ ಆರಂಭ
Team Udayavani, Oct 28, 2024, 3:53 PM IST
ಮಲ್ಲಿಕಟ್ಟೆ: ಬಂಟ್ಸ್ ಹಾಸ್ಟೆಲ್ ಕಡೆಯಿಂದ ಮಲ್ಲಿಕಟ್ಟೆಗೆ ಸಾಗುವ ರಸ್ತೆಯ ಸಿಟಿ ಆಸ್ಪತ್ರೆ ಜಂಕ್ಷನ್ನಲ್ಲಿ ಒಳಚರಂಡಿ ಕಾಮಗಾರಿಗಾಗಿ ಅಗೆದು ಹಾಕಿದ್ದ ರಸ್ತೆಗೆ ಮತ್ತೆ ಕಾಂಕ್ರೀಟ್ ಹಾಕುವ ಕಾಮಗಾರಿ ಆರಂಭವಾಗಿದೆ.
ಕಾಮಗಾರಿ ಮುಗಿದು ವರ್ಷ ಕಳೆದರೂ ರಸ್ತೆಯನ್ನು ಸಮರ್ಪಕ ವಾಗಿ ದುರಸ್ತಿ ಮಾಡದೆ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಕುರಿತಂತೆ ಅ. 23ರಂದು ‘ಒಳಚರಂಡಿಗೆ ಅಗೆದ ರಸ್ತೆ ಇನ್ನೂ ದುರಸ್ತಿ ಆಗಿಲ್ಲ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು. ವರದಿಯಿಂದ ಎಚ್ಚೆತ್ತ ಸ್ಥಳೀಯ ಕಾರ್ಪೋರೆಟರ್, ಮನಪಾ ಅಧಿಕಾರಿಗಳು ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ.
ಕಾಮಗಾರಿ ವೇಳೆ ಬಂಟ್ಸ್ ಹಾಸ್ಟೆಲ್ - ಮಲ್ಲಿಕಟ್ಟೆ ರಸ್ತೆಯನ್ನು ಎರಡೂ ಪಥದಲ್ಲಿ ಅಡ್ಡಲಾಗಿ ಅಗೆದು ಹಾಕಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡು ಸುಮಾರು ಒಂದು ವರ್ಷ ಆಗುತ್ತಾ ಬಂದರೂ ರಸ್ತೆಯನ್ನು ದುರಸ್ತಿ ಮಾಡಿರಲಿಲ್ಲ. ಮಳೆಗಾಲಕ್ಕೆ ಮುನ್ನ ಒಂದು ಬಾರಿ ಡಾಮರು ತೇಪೆ ಹಾಕಲಾಯಿತಾದರೂ ಮುಂಗಾರು ಮಳೆಯ ಅಬ್ಬರಕ್ಕೆ ಕೆಲವೇ ದಿನಗಳಲ್ಲಿ ಎದ್ದು ಹೋಗಿದೆ. ಬಳಿಕ ದೊಡ್ಡ ಗುಂಡಿಗಳು ಉಂಟಾಗಿತ್ತು.
ಅನಂತರ ಗುಂಡಿಗಳಿಗೆ ಜಲ್ಲಿ ಹುಡಿ ಸಿಮೆಂಟ್ ಮಿಶ್ರಣ ತಂದು ಸುರಿಯಲಾಯಿತು. ಅದರೆ ಇದು ಕೂಡ ನೀರಿನೊಂದಿಗೆ ಕೊಚ್ಚಿ ಹೋಗಿತ್ತು. ಕೊನೆಗೂ ರಸ್ತೆಯ ದುರಸ್ತಿ ಕಾಮಗಾರಿ ಆರಂಭವಾಗಿರುವುದಕ್ಕೆ ವಾಹನ ಸವಾರರು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನಾಳೆಯಿಂದ ನೀತಿ ಸಂಹಿತೆ ಸಡಿಲಿಕೆ; ನೂತನ ಮೇಯರ್ ಆಡಳಿತ ಶುರು
Mangaluru: ಸಂಗ್ರಹಿಸಿದ ಪ್ಲಾಸ್ಟಿಕನ್ನು ಏನ್ಮಾಡ್ತಾರೆ?
Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು
Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ
Alvas Award: ಪಂಡಿತ್ ಎಂ. ವೆಂಕಟೇಶ್ ಕುಮಾರ್ಗೆ 2024ರ ‘ಆಳ್ವಾಸ್ ವಿರಾಸತ್’ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ
Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ
Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.