ಮಲ್ಪೆ ಬಂದರು ರಸ್ತೆ: ಡಿವೈಡರ್ ತೆರವು; ಕಬ್ಬಿಣದ ಸರಳುಗಳಿಂದ ಅಪಘಾತಕ್ಕೆ ಆಹ್ವಾನ
Team Udayavani, Sep 12, 2022, 3:00 PM IST
ಮಲ್ಪೆ: ಮಲ್ಪೆ ಬಂದರಿನಿಂದ ಪಶ್ಚಿಮ ದಿಕ್ಕಿಗೆ ಹೋಗುವ ರಸ್ತೆಯ ಡಿವೈಡರ್ನ್ನು ತೆರವು ಮಾಡಲಾಗುತ್ತಿದ್ದು, ಡಿವೈಡರ್ ನಿರ್ಮಾಣ ವೇಳೆ ಹಾಕಲಾಗಿದ್ದ ಕಬ್ಬಿಣದ ಸರಳುಗಳನ್ನು ಅರ್ಧದಲ್ಲೇ ತುಂಡರಿಸಲಾಗಿದ್ದು ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಅಪಾಯದ ಮುನ್ಸೂಚನೆ ನೀಡುತ್ತಿದೆ.
ಈ ರಸ್ತೆಯಲ್ಲಿ ಟೆಂಪೋ ಹಾಗೂ ದ್ವಿಚಕ್ರ ವಾಹನಗಳು ಸೇರಿದಂತೆ ಇತರ ನೂರಾರು ವಾಹನಗಳು ದಿನನಿತ್ಯ ಚಲಿಸುತ್ತದೆ. ರಸ್ತೆಯಲ್ಲಿ ಡಿವೈಡರ್ ತೆರವುಗೊಳಿಸುವ ವೇಳೆ ಅರ್ಧ ತುಂಡರಿಸಿ ಬಿಟ್ಟಿರುವ ಕಬ್ಬಿಣ ಸರಳುಗಳ ತುದಿಗಳು ರಸ್ತೆಯಲ್ಲಿ ಮೇಲ್ಮುಖವಾಗಿ ಗೋಚರಿಸುತ್ತಿದ್ದು, ಇದರಿಂದ ಈಗಾಗಲೇ ಹಲವು ವಾಹನಗಳ ಚಕ್ರಗಳು ಇದರ ಮೇಲೆ ಚಲಿಸಿ ಟಯರ್ ಪಂಕ್ಚರ್ ಆಗುತ್ತಿದೆ.
ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಚಕ್ರ ಪಂಕ್ಚರ್ ಆದರೆ ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಿವೆ. ಇದೀಗ ಕಬ್ಬಿಣದ ಸರಳಗಳು ಕಾಣುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ತತ್ಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
MRPL: ಕರಾವಳಿಗೆ ಮೊದಲ “ಗ್ರೀನ್ ಹೈಡ್ರೋಜನ್’ ಘಟಕ
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.