ಮಂಗಳಾದೇವಿಯಲ್ಲಿ ಸಿಂಹ; ಮಾರ್ನಮಿಕಟ್ಟೆಗೆ ಹುಲಿ!

ವೃತ್ತದಲ್ಲಿ ಕಂಗೊಳಿಸಲಿವೆ ಆಕರ್ಷಕ ಕಲಾಕೃತಿಗಳು

Team Udayavani, Jul 22, 2022, 12:07 PM IST

9

ಮಂಗಳಾದೇವಿ: ಮಂಗಳೂರಿನ ವಿವಿಧ ವೃತ್ತಗಳನ್ನು ಹೊಸ ಸ್ವರೂಪದೊಂದಿಗೆ ಅಭಿವೃದ್ಧಿಗೊಳಿಸುವ ಯೋಜನೆಯಡಿ ಮಂಗಳಾದೇವಿ ಹಾಗೂ ಮಾರ್ನಮಿಕಟ್ಟೆಯ ವೃತ್ತವನ್ನು ಆಕರ್ಷಕ ವಿನ್ಯಾಸದೊಂದಿಗೆ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.

ಎರಡೂ ಪ್ರದೇಶಗಳು ಧಾರ್ಮಿಕ, ಸಾಂಸ್ಕೃತಿಕ ನೆಲೆಗಟ್ಟಿನ ಸಂಬಂಧ ಬೆಸೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳಾದೇವಿ ಮುಂಭಾಗ ರಥಬೀದಿಯಲ್ಲಿರುವ ಸರ್ಕಲ್‌ನಲ್ಲಿ ಸಿಂಹದ ಕಲಾಕೃತಿ, ಮಾರ್ನಮಿಕಟ್ಟೆಯಲ್ಲಿ ಹುಲಿಯ ಕಲಾಕೃತಿಯ ಸರ್ಕಲ್‌ ನಿರ್ಮಿಸಲು ಉದ್ದೇಶಿಸಲಾಗಿದೆ.

ಮಂಗಳಾದೇವಿ ಸರ್ಕಲ್‌ ಅನ್ನು ಈಗಾಗಲೇ ಸ್ಮಾರ್ಟ್‌ಸಿಟಿ ವತಿಯಿಂದ ರೂಪಿಸಲಾಗಿದೆ. ಆದರೆ ಇಲ್ಲಿ ವಿಭಿನ್ನ ಶೈಲಿಯ ಆಕರ್ಷಕ ಕಲಾಕೃತಿಯ ಸರ್ಕಲ್‌ ನಿರ್ಮಿಸುವ ಕಾರ್ಯ ಇನ್ನಷ್ಟೇ ಆಗಬೇಕಿದೆ. ಇದಕ್ಕಾಗಿ ಖಾಸಗಿ ಸಹಕಾರವನ್ನು ಪಾಲಿಕೆ ನಿರೀಕ್ಷಿಸಿತ್ತು. ಇದರಂತೆ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ವತಿಯಿಂದ ಇಲ್ಲಿನ ಸರ್ಕಲ್‌ ಅಭಿವೃದ್ಧಿಗೆ ಉದ್ದೇಶಿಸಲಾಗಿದೆ.

ಶ್ರೀ ಮಂಗಳಾದೇವಿ ದೇವಸ್ಥಾನ ಹಾಗೂ ಸಿಂಹಕ್ಕೂ ಧಾರ್ಮಿಕವಾಗಿ ಐತಿಹ್ಯವಿರುವ ಹಿನ್ನೆಲೆಯಲ್ಲಿ ಸರ್ಕಲ್‌ ಅನ್ನು ಸಿಂಹದ ಕಲಾಕೃತಿಯೊಂದಿಗೆ ಮಾಡಬೇಕು ಎಂಬ ಭಕ್ತರ ಸಲಹೆಯ ಪ್ರಕಾರ ನಿರ್ಮಿಸಲು ನಿರ್ಧರಿಸಲಾಗಿದೆ. ಸದ್ಯ ಯೋಜನಾಪಟ್ಟಿ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲಿ ಇದರ ಅಂತಿಮ ರೂಪರೇಖೆ ಆಗಲಿದೆ.

ಹಲವು ಕಾಲದಿಂದ ಅಭಿವೃದ್ಧಿಯಾಗಿಲ್ಲ

ಮಾರ್ನಮಿಕಟ್ಟೆಯಲ್ಲಿರುವ ಬೃಹತ್‌ ಸರ್ಕಲ್‌ ಹಲವು ಕಾಲದಿಂದ ಅಭಿವೃದ್ಧಿ ಕಾಣದೆ ಹಾಗೆಯೇ ಬಾಕಿಯಾಗಿದೆ. ಖಾಸಗಿ ಸಂಘ ಸಂಸ್ಥೆಗಳು ಇದರ ಅಭಿವೃದ್ಧಿಗೆ ಮುಂದೆ ಬಂದರೂ ಕೂಡ ನಿರ್ವಹಣೆ ಸಮಸ್ಯೆಯಿಂದ ಇದು ಈಡೇರಿರಲಿಲ್ಲ. ಇದೀಗ ಆಸಕ್ತ ಸಂಸ್ಥೆಯೊಂದನ್ನು ಪರಿಗಣಿಸಿ ನಿರ್ವಹಣೆಯ ಹೊಣೆಯೊಂದಿಗೆ ಇಲ್ಲಿನ ಸರ್ಕಲ್‌ ಅಭಿವೃದ್ಧಿಗೆ ಉದ್ದೇಶಿಸಲಾಗಿದೆ. ಮಾರ್ನಮಿಕಟ್ಟೆಯ ಸರ್ಕಲ್‌ ಅನ್ನು ಮಾರ್ನೆಮಿಯ ನೆನಪಿನಲ್ಲಿ ಹುಲಿಯ ಕಲಾಕೃತಿಯೊಂದಿಗೆ ನಿರ್ಮಿಸಲು ಉದ್ದೇಶಿಸಲಾಗಿದೆ.

ಶೀಘ್ರ ಕೆಲಸ ಆರಂಭ

‘ಮಾರ್ನಮಿಯ ಹೆಸರಿನಲ್ಲಿ ಹುಲಿ ವೇಷದ ಭಂಗಿಯಲ್ಲಿ ಮಾರ್ನಮಿಕಟ್ಟೆಯ ಸರ್ಕಲ್‌ ಅಭಿವೃದ್ಧಿಗೆ ಉದ್ದೇಶಿಸಲಾಗಿದೆ. ಶೀಘ್ರ ಕೆಲಸ ಶುರು ಮಾಡಲಾಗುವುದು’ ಎಂದು ಶಾಸಕ ವೇದವ್ಯಾಸ ಕಾಮತ್‌ ಅವರು “ಸುದಿನ’ಕ್ಕೆ ತಿಳಿಸಿದ್ದಾರೆ.

ನಗರದ ಹಲವು ವೃತ್ತಗಳ ಅಭಿವೃದ್ಧಿ

ನಗರದ ವಿವಿಧ ವೃತ್ತಗಳನ್ನು ಮಂಗಳೂರು ಪಾಲಿಕೆ, ಸ್ಮಾರ್ಟ್‌ಸಿಟಿ, ಮುಡಾ, ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ. ಇದರಂತೆ, ಸ್ಟೇಟ್‌ಬ್ಯಾಂಕ್‌ನ ಎ.ಬಿ. ಶೆಟ್ಟಿ ವೃತ್ತವನ್ನು ಬ್ಯಾಂಕ್‌ ಆಫ್‌ ಬರೋಡಾ ವತಿಯಿಂದ ವಿಶೇಷ ವಿನ್ಯಾಸದಲ್ಲಿ, ಬಲ್ಮಠದಲ್ಲಿರುವ ಅಂಬೇಡ್ಕರ್‌ ಜಂಕ್ಷನ್‌ನಲ್ಲಿ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತವನ್ನು ಪಾಲಿಕೆ ವತಿಯಿಂದ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಲೇಡಿಹಿಲ್‌ನಲ್ಲಿ ‘ಬ್ರಹ್ಮಶ್ರೀ ನಾರಾಯಣ ಗುರು ವೃತ್ತ’ವನ್ನು ಮುಡಾ ವತಿಯಿಂದ ಅಭಿವೃದ್ಧಿಪಡಿಸಲಾಗುತ್ತದೆ. ಇನ್ನೂ ಹಲವು ಸರ್ಕಲ್‌ಗ‌ಳು ಅಭಿವೃದ್ಧಿಯಾಗುವ ನಿರೀಕ್ಷೆಯಲ್ಲಿವೆ.

ಧಾರ್ಮಿಕ, ಸಾಂಸ್ಕೃತಿಕ ಪ್ರತೀಕ: ಮಂಗಳಾದೇವಿ, ಮಾರ್ನಮಿಕಟ್ಟೆ ಪ್ರದೇಶವು ತುಳುನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರತೀಕವಾಗಿ ಗುರುತಿಸಿಕೊಂಡಿದೆ. ಹೀಗಾಗಿ ಎರಡೂ ಪ್ರದೇಶಗಳಲ್ಲಿರುವ ಸರ್ಕಲ್‌ಗ‌ಳನ್ನು ಇದೇ ಆಶಯದೊಂದಿಗೆ ಸಿಂಹ, ಹುಲಿಯ ಕಲಾಕೃತಿಯೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. – ಪ್ರೇಮಾನಂದ ಶೆಟ್ಟಿ, ಮೇಯರ್‌, ಮಂಗಳೂರು ಪಾಲಿಕೆ

ಟಾಪ್ ನ್ಯೂಸ್

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

5

Dasara holiday: ಕರಾವಳಿಯ ಪ್ರವಾಸಿ ಕೇಂದ್ರಗಳಲ್ಲಿ ಜನದಟ್ಟಣೆ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.