ಮಂಗಳೂರು ಪಾಲಿಕೆ; ಕುತೂಹಲ ಸೃಷ್ಟಿಸಿದ ಹೊಸ ಮೇಯರ್‌ ಆಯ್ಕೆ

ಬಿಜೆಪಿ ಪ್ರಮುಖರಿಂದ ಇಂದು ಮಹತದ ಸಭೆ ಸಾಧ್ಯತೆ

Team Udayavani, Sep 6, 2022, 11:15 AM IST

3

ಲಾಲ್‌ಬಾಗ್‌: ಮಂಗಳೂರು ಮಹಾ ನಗರ ಪಾಲಿಕೆಯ 23ನೇ ಅವಧಿಯ ಮೇಯರ್‌, ಉಪ ಮೇಯರ್‌ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರು ಮಹ ತ್ವದ ಚುನಾವಣೆಗೆ ಮೂರು ದಿನ ಮಾತ್ರ (ಸೆ. 9) ಬಾಕಿ ಉಳಿದಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಹೊಸ ಮೇಯರ್‌ ಯಾರಾಗಬಹುದು ಎಂಬ ಬಗ್ಗೆ ಬಿಜೆಪಿಯ ಮಹತ್ವದ ಸಭೆ ಮಂಗಳವಾರ ನಗರದಲ್ಲಿ ನಡೆಯುವ ಸಾಧ್ಯತೆಗಳಿವೆ. ಇದರಲ್ಲಿಯೇ ಹೊಸ ಮೇಯರ್‌ ಆಯ್ಕೆಗೆ ಪ್ರಾರಂಭಿಕ ತೀರ್ಮಾನ ನಡೆಯಬಹುದು ಎಂದು ಅಂದಾಜಿಸಲಾಗಿದೆ. ಮೇಯರ್‌ ಸ್ಥಾನ “ಸಾಮಾನ್ಯ’, ಉಪ ಮೇಯರ್‌ ಸ್ಥಾನಕ್ಕೆ “ಹಿಂದುಳಿದ ವರ್ಗದ ಮಹಿಳೆ’ ಮೀಸಲಾತಿ ಪ್ರಕಟವಾಗಿದೆ.

ಮುಂದಿನ ಮೇಯರ್‌ ಯಾರು ಎಂಬ ಬಗ್ಗೆ ಬಹಿರಂಗ ಚರ್ಚೆ, ಮಾತುಕತೆ ಸದ್ಯ ಆರಂಭವಾಗಿದೆ. ಅದರಲ್ಲಿಯೂ ಆಡಳಿತಾರೂಢ ಬಿಜೆಪಿಯೊಳಗೆ ಹೊಸ ಮೇಯರ್‌ ಸ್ಥಾನದ ಬಗ್ಗೆ ನಾನಾ ಬಗೆಯ ಚರ್ಚೆ/ವ್ಯಾಖ್ಯಾನ ನಡೆಯುತ್ತಿದೆ. ಮಾರ್ಚ್‌ ನಲ್ಲಿ ಚುನಾವಣೆ ನಿಗದಿಯಾಗಿದ್ದ (ಕಾನೂನಾ ತ್ಮಕ ಕಾರಣದಿಂದ ಚುನಾವಣೆ ನಡೆದಿಲ್ಲ) ಸಂದರ್ಭ ಮುನ್ನೆಲೆಗೆ ಬಂದ ಕಾರ್ಪೋರೆ ಟರ್‌ಗಳ ಹೆಸರು ಇದೀಗ ಮತ್ತೆ ಪಾಲಿಕೆ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಎಲ್ಲರೂ ಅರ್ಹರು!

ಕಳೆದ ಸಾಲಿನಂತೆ ಮೇಯರ್‌ ಸ್ಥಾನ “ಸಾಮಾನ್ಯ’ ಮೀಸಲಾತಿಗೆ ದೊರೆತ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆಯ್ಕೆಯಾದ ಎಲ್ಲ ಸದಸ್ಯರು ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಇದು ಈ ಬಾರಿಯ ಮೇಯರ್‌ ಆಯ್ಕೆಗೆ ಕೊಂಚ ಕಗ್ಗಂಟು ಸೃಷ್ಟಿಸುವ ಸಾಧ್ಯತೆಯಿದೆ.

ವಿ.ಸಭಾ ಚುನಾವಣೆ ಸವಾಲು

ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾರಿಯ ಮೇಯರ್‌ ಹುದ್ದೆ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಹೀಗಾಗಿ ರಾಜಕೀಯ ಅನುಭವ, ಪಾಲಿಕೆ ಆಡಳಿತದ ಪೂರ್ಣ ಹಿಡಿತ ಗೊತ್ತಿರುವವರಿಗೆ ಮುಂದಿನ ಮೇಯರ್‌ ಹುದ್ದೆ ಸಿಗುವ ಸಾಧ್ಯತೆಯಿದೆ. ಇದಕ್ಕಾಗಿ ಅನುಭವಿ ಕಾರ್ಪೋರೆಟರ್‌ಗಳ ಹೆಸರು ಮೇಯರ್‌ ಹುದ್ದೆಗೆ ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ಮಾರ್ಚ್‌ 2ರಂದು ನಿಗದಿಯಾಗಿದ್ದ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್‌, ಉಪ ಮೇಯರ್‌ ಚುನಾವಣೆಯನ್ನು ಕಾನೂನಾತ್ಮಕ ಕಾರಣದಿಂದ ನಡೆದಿರಲಿಲ್ಲ. ಹೀಗಾಗಿ ಒಂದು ವರ್ಷದ ಅವಧಿ (ಮಾ.2ಕ್ಕೆ) ಪೂರ್ಣಗೊಳಿಸಿದ್ದ ಪ್ರೇಮಾನಂದ ಶೆಟ್ಟಿ ಅವರೇ ಮೇಯರ್‌ ಸ್ಥಾನದಲ್ಲಿ ಹಾಗೂ ಸುಮಂಗಳಾ ರಾವ್‌ ಉಪಮೇಯರ್‌ ಸ್ಥಾನದಲ್ಲಿ ಮುಂದುವರಿದಿದ್ದರು. ಈ ಮೂಲಕ 6 ತಿಂಗಳು ಹೆಚ್ಚುವರಿಯಾಗಿ ಅವರು ಅಧಿಕಾರದಲ್ಲಿದ್ದಾರೆ. ಹಾಲಿ ಮೇಯರ್‌ ಅಧಿಕಾರ ಅವಧಿ ಮೀರಿ ಮುಂದುವರಿದಿರುವ ಕಾರಣ ಹಾಲಿ ಬಿಜೆಪಿ ಆಡಳಿತದ ಕೊನೆಯ ಮೇಯರ್‌ ಅವರ ಅಧಿಕಾರಾವಧಿ ಅಷ್ಟು ದಿನ (ಉದಾಹರಣೆಗೆ 1 ವರ್ಷ ಅವಧಿಯ ಪೈಕಿ ಇಲ್ಲಿಯವರೆಗೆ 6 ತಿಂಗಳು) ಕಡಿತವಾಗಲಿದೆ.

ಮಂ. ಉತ್ತರಕ್ಕೆ ಮೇಯರ್‌?

ಬಿಜೆಪಿಯಿಂದ ಎರಡು ಬಾರಿ ಮೇಯರ್‌ ಸ್ಥಾನ ಮಂಗಳೂರು ದಕ್ಷಿಣಕ್ಕೆ ಲಭಿಸಿರುವ ಕಾರಣ (ದಿವಾಕರ್‌ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ) ಮಂಗಳೂರು ಉತ್ತರಕ್ಕೆ ಈ ಬಾರಿ ಮೇಯರ್‌ ಸ್ಥಾನ ದೊರಕಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಹಿರಿತನದ ಕಾರಣದಿಂದ ಶರತ್‌ ಕುಮಾರ್‌, ಜಯಾನಂದ್‌ ಅವರ ಹೆಸರು ಕೇಳಿಬರುತ್ತಿದ್ದರೆ, ಜಾತಿ ಸಮೀಕರಣದ ಮೂಲಕ ಕಿರಣ್‌ ಕುಮಾರ್‌, ಜಯಾನಂದ್‌ ಅವರ ಹೆಸರು ರೇಸ್‌ನಲ್ಲಿದೆ. ಈ ಮಧ್ಯೆ, ಹೊಸದಾಗಿ ಆಯ್ಕೆಯಾದ ಸದಸ್ಯರ ಹೆಸರು ಕೂಡ ಮೇಯರ್‌ ರೇಸ್‌ನಲ್ಲಿ ಕೇಳಿಬರುತ್ತಿದೆ.

ಒಂದೆರಡು ದಿನದಲ್ಲಿ ತೀರ್ಮಾನ: ಹೊಸ ಮೇಯರ್‌ ಆಯ್ಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಒಂದೆರಡು ದಿನದೊಳಗೆ ಪಾಲಿಕೆ ವ್ಯಾಪ್ತಿಯ ಇಬ್ಬರು ಶಾಸಕರು, ಪಕ್ಷದ ಪ್ರಮುಖರು ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಒಮ್ಮತದ ತೀರ್ಮಾನ ನಡೆಯಲಿದೆ. –ಪ್ರೇಮಾನಂದ ಶೆಟ್ಟಿ, ಮೇಯರ್‌, ಮಂಗಳೂರು ಪಾಲಿಕೆ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.