Mangalore: ನೀರಿನ ಅಭಾವವಿದ್ದರೂ ಅಗ್ನಿಶಾಮಕ ದಳ ಸನ್ನದ್ಧ

ಮಂಗಳೂರು ನಗರ ವ್ಯಾಪ್ತಿಯಲ್ಲಿ ಅಲ್ಲಲ್ಲಿ ನೀರಿನ ಪಂಪಿಂಗ್‌ ಪಾಯಿಂಟ್‌ಗಳಿವೆ.

Team Udayavani, Apr 26, 2023, 2:58 PM IST

Mangalore: ನೀರಿನ ಅಭಾವವಿದ್ದರೂ ಅಗ್ನಿಶಾಮಕ ದಳ ಸನ್ನದ್ಧ

ಮಹಾನಗರ: ಈ ಬಾರಿ ನೀರಿನ ಸಮಸ್ಯೆ ವ್ಯಾಪಕವಾಗಿದ್ದು, ಜನರು ಮಳೆಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಇದರ ಬಿಸಿ ಅಗ್ನಿ ಶಾಮಕ ದಳಕ್ಕೆ ಮಾತ್ರ ಸದ್ಯ ತಟ್ಟಿಲ್ಲ. ನೀರಿನ ಸಮಸ್ಯೆಯಿಲ್ಲದೆ, ಎಲ್ಲ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಬಿಸಿಲಿನ ಧಗೆಯೂ ಹೆಚ್ಚಾಗಿರುವುದರಿಂದ ಅಲ್ಲಲ್ಲಿ ಅಗ್ನಿ ಅವಘಡಗಳೂ ಸಂಭವಿಸುತ್ತಿದೆ. ಇದೇ ವೇಳೆ ನೀರಿನ ಅಭಾವವೂ ಎಲ್ಲೆಡೆ ಕಾಡುತ್ತಿದೆ. ಆದರೆ ಅಗ್ನಿ ಶಾಮಕ ದಳಕ್ಕೆ ಇಲ್ಲಿನ ವರೆಗೆ ಯಾವುದೇ ರೀತಿಯಲ್ಲಿ ನೀರಿನ ಸಮಸ್ಯೆ ಉಂಟಾಗಿಲ್ಲ. ಠಾಣೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿರುವ ಅಗ್ನಿ ಶಾಮಕ ವಾಹನಗಳ ಟ್ಯಾಂಕ್‌ಗಳಲ್ಲಿ ನೀರು ಭರ್ತಿಯಾಗಿಯೇ ಇರುತ್ತದೆ. ಇದರಿಂದ ಕರೆಗಳು ಬಂದ ತತ್‌ಕ್ಷಣ ತಡ ಮಾಡದೆ ಕಾರ್ಯಾಚರಣೆ ನಡೆಸಬಹುದಾಗಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

ನೀರು ಸಿಕ್ಕಲ್ಲಿ ಭರ್ತಿ
ಬೆಂಕಿ ನಂದಿಸುವ ಕಾರ್ಯಾಚರಣೆಗೆ ಹೋದ ಸಂದರ್ಭದಲ್ಲಿ ಕಾರ್ಯಾಚರಣೆ ಮುಗಿದ ಬಳಿಕ ವಾಪಸಾಗುವ ವೇಳೆ ನೀರು ಭರ್ತಿ ಮಾಡಿಯೇ ವಾಹನಗಳು ಠಾಣೆಗೆ ಹಿಂದಿರುಗುತ್ತವೆ. ಇದಕ್ಕಾಗಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಅಲ್ಲಲ್ಲಿ ನೀರಿನ ಪಂಪಿಂಗ್‌ ಪಾಯಿಂಟ್‌ಗಳಿವೆ.

ಮಾತ್ರವಲ್ಲದೆ ಠಾಣೆಯಲ್ಲೂ ತುರ್ತು ಉಪಯೋಗಕ್ಕಾಗಿ 1 ಲಕ್ಷ ಲೀ. ಸಾಮರ್ಥ್ಯದ ಟ್ಯಾಂಕ್‌ ಇದೆ. ಹಾಗಾಗಿ ಯಾವುದೆ ಸಮಸ್ಯೆ ಇಲ್ಲ. ಎಲ್ಲ ಠಾಣೆಗಳಲ್ಲೂ ಈ ರೀತಿ ಟ್ಯಾಂಕ್‌ ಗಳಲ್ಲಿ ನೀರು ಶೇಖರಿಸಿ ಇರಿಸಲಾಗುತ್ತದೆ ಎನ್ನುತ್ತಾರೆ ಕದ್ರಿ ಅಗ್ನಿ ಶಾಮಕ ಠಾಣೆಯ ಠಾಣಾಧಿಕಾರಿ ಸುನೀಲ್‌ ಕುಮಾರ್‌.

ಈ ಬಾರಿ ನೀರಿನ ಹೆಚ್ಚು ಬಳಕೆ
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅಗ್ನಿ ಶಾಮಕ ಠಾಣೆಗಳಿಗೆ ಅಗ್ನಿ ಅವಘಡಗಳಿಗೆ ಸಂಬಂಧಿಸಿದಂತೆ ಅತೀ ಹೆಚ್ಚು ಕರೆಗಳು ಬಂದಿವೆ. ಇದರಿಂದಾಗಿ ಬೆಂಕಿ ನಂದಿಸಲು ಬಳಸಿದ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಪಚ್ಚನಾಡಿಯಲ್ಲಿ ತ್ಯಾಜ್ಯಕ್ಕೆ ಬಿದ್ದ ಬೆಂಕಿ ನಂದಿಸಲು ಲಕ್ಷಾಂತರ ಲೀ. ನೀರು ಬಳಕೆಯಾಗಿದೆ. ಕೆಲವು ಸ್ಥಳಗಳಿಗೆ ಬೆಂಕಿ ನಂದಿಸಲು ಹೋದಾಗ ವಾಹನದಲ್ಲಿ ಇದ್ದ ನೀರು ಸಾಕಾಗದೆ ಸ್ಥಳೀಯ ಮೂಲಗಳಿಂದ ನೀರು ಪಡೆದು ಬೆಂಕಿ ನಂದಿಸಿದ ಉದಾಹರಣೆಗಳೂ ಇವೆ. ಶೀಘ್ರ ಮಳೆಯಾದಲ್ಲಿ ಯಾವುದೇ ಸಮಸ್ಯೆಯಾಗದು. ಇಲ್ಲದವಾದಲ್ಲಿ ಅಗ್ನಿ ಶಾಮಕ ಇಲಾಖೆಗೂ ಬಿಸಿತಟ್ಟುವ ಸಾಧ್ಯತೆಯಿದೆ.

ನೀರಿಗೆ ಸಮಸ್ಯೆಯಾಗಿಲ್ಲ
ಅಗ್ನಿಶಾಮಕ ವಾಹನಗಳಿಗೆ ಈ ಬಾರಿ ಇಲ್ಲಿಯವರೆಗೆ ನೀರಿಗೆ ಸಮಸ್ಯೆಯಾಗಿಲ್ಲ, ಮುಂದಿನ ದಿನಗಳಲ್ಲೂ ಆಗುವ ಸಾಧ್ಯತೆ ಕಡಿಮೆ. ಠಾಣೆಯಲ್ಲಿ ಎಲ್ಲ ವಾಹನಗಳಲ್ಲೂ ನೀರು ತುಂಬಿಸಿ ಸನ್ನದ್ಧ ಸ್ಥಿತಿಯಲ್ಲಿ ಇರುತ್ತವೆ. ಠಾಣಾ ಮಟ್ಟದಲ್ಲಿ ನೀರಿನ ಟ್ಯಾಂಕ್‌ ಗಳಿದ್ದು, ತುರ್ತು ಸಂದರ್ಭಗಳಿಗಾಗಿ ಅವುಗಳನ್ನು ಭರ್ತಿ ಮಾಡಿ ಇರಿಸಲಾಗುತ್ತದೆ.
ಭರತ್‌ ಕುಮಾರ್‌, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ, ಪಾಂಡೇಶ್ವರ ಠಾಣೆ

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.