ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!


Team Udayavani, Jul 5, 2024, 2:31 PM IST

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

ಮಹಾನಗರ: ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅಗತ್ಯವಿರುವ ತರಕಾರಿಯನ್ನು ಮಾರುಕಟ್ಟೆಯಿಂದ ಖರೀದಿಸುವ ಬದಲು ಭಕ್ತರು ಮನೆ ಯಲ್ಲೇ ಸಾವಯವ ಪದ್ಧತಿಯಲ್ಲಿ ಬೆಳೆದು ಕಾಣಿಕೆ ನೀಡುವ ವಿನೂತನ ಪರಿಕಲ್ಪನೆಗೆ ಇದೀಗ ಸಿದ್ಧತೆ ನಡೆಯುತ್ತಿದೆ.

ಮಂಗಳೂರು ಹೊರವಲಯದ ಮಂಚಿ ಸಮೀಪದ ಮೋಂತಿ ಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಆ ಊರಿನ ಹಲವಾರು ಮನೆಯಲ್ಲಿ ವಿವಿಧ ತರಕಾರಿ ಬೇಸಾಯ ಮಾಡಿ ಬ್ರಹ್ಮಕಲಶದ ಅಡುಗೆಗೆ ಬಳಕೆ ಮಾಡಬೇಕು ಎಂಬ ಬಗ್ಗೆ ಚಿಂತನೆ ನಡೆಸಲಾಗಿದೆ. ಮಂಗಳೂರಿನ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದೊಂದಿಗೆ ಈ ಯೋಜನೆ ಕಾರ್ಯಗತಗೊಳ್ಳಲಿದೆ.

ಸಾವಯವ ಕೃಷಿಕ ಗ್ರಾಹಕ ಬಳಗದ ಸದಸ್ಯರು ತಮ್ಮ ಮನೆಯಲ್ಲಿ ಬೀಜಾಂಕುರ ಮಾಡಿದ 20 ಸಾವಿರದಷ್ಟು ಸಾವಯವ ತರಕಾರಿ ಗಿಡಗಳನ್ನು ದೇವಾಲಯಕ್ಕೆ ನೀಡುತ್ತಾರೆ. ಅಲ್ಲಿಂದ ಸ್ಥಳೀಯ ರೈತರು-ಭಕ್ತರು ನಿಗದಿತ ಗಿಡಗಳನ್ನು ಪಡೆದು ತಮ್ಮ ಮನೆಯಲ್ಲಿಯೇ ಆ ಗಿಡ ನೆಟ್ಟು ತರಕಾರಿ ಬೆಳೆಯಬೇಕಾಗುತ್ತದೆ. ಹೀಗೆ ಬೆಳೆದ ತರಕಾರಿಯನ್ನು ದೇಗುಲದ
ಬ್ರಹ್ಮಕಲಶೋತ್ಸವಕ್ಕೆ ಬಳಸಲಾಗುತ್ತದೆ.

ಆಗಸ್ಟ್‌ ಕೊನೆಗೆ ಬೀಜಾಂಕುರ
ದೇವಸ್ಥಾನದ ಬ್ರಹ್ಮಕಲಶೋತ್ಸವವು 2025ರ ಜ. 6ರಿಂದ 13ರ ವರೆಗೆ ನಡೆಯಲಿದೆ. ಇದಕ್ಕಾಗಿ ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಬೀಜಾಂಕುರ ಕಾರ್ಯಕ್ರಮ ಆಗಸ್ಟ್‌ ಕೊನೆ ವಾರದಲ್ಲಿ ನಡೆಯಲಿದೆ. ಗಿಡ ಬೆಳೆದು ನಾಟಿಗೆ 20 ದಿನ ಬೇಕಾಗುತ್ತದೆ. ಸೆಪ್ಟಂಬರ್‌ ಕೊನೆಯ ವಾರದೊಳಗೆ ಗಿಡಗಳ ವಿತರಣೆ ನಡೆಯಲಿದೆ. ವಿವಿಧ ತರಕಾರಿ ಬೇಸಾಯದ ಒಟ್ಟು ಅವಧಿ 90 ದಿನ.

ಯಾವುದೆಲ್ಲ ತರಕಾರಿ?
ಟೊಮೇಟೊ, ಬದನೆ, ಚೀನಿಕಾಯಿ, ಸೌತೆಕಾಯಿ, ಮುಳ್ಳು ಸೌತೆ, ಕುಂಬಳ ಕಾಯಿ, ಕಾಯಿ ಮೆಣಸು ಬೆಳೆಯಲಾಗುತ್ತದೆ. 250ಕ್ಕೂ ಅಧಿಕ ಮನೆಗಳನ್ನು ನಿಗದಿ ಮಾಡಲಾಗುತ್ತದೆ.

ಸಾವಯವ ಕೃಷಿಕ ಗ್ರಾಹಕ ಬಳಗ ಸದಸ್ಯರು 20 ಸಾವಿರ ವಿವಿಧ ತರಕಾರಿ ಗಿಡಗಳನ್ನು ಸಿದ್ಧಮಾಡಿ ಕೊಡುವ ನಿಟ್ಟಿನಲ್ಲಿ ತಯಾರಿ ಆಗುತ್ತಿದೆ. ವಿವಿಧ ತರಕಾರಿ ಬೀಜ ಮತ್ತು ಪ್ರೋ ಟ್ರೇ, ಕೊಕ್ಕೊಪೀಟ್‌ಗಳನ್ನು ಬಳಗ ಸದಸ್ಯರಿಗೆ ವಿತರಿಸಲಿದೆ. ಒಪ್ಪಿಗೆ ಕೊಟ್ಟ ಸದಸ್ಯರ ಮನೆಯಲ್ಲಿ ಬೀಜಾಂಕುರ ಕಾರ್ಯಕ್ರಮ ನಡೆಯಲಿದೆ. ಬೀಜಾಂಕುರ ಆಗಸ್ಟ್‌ ಕೊನೆಯ ವಾರ ಅಥವಾ ಸೆಪ್ಟಂಬರ್‌ ಮೊದಲ ವಾರ ನಡೆಸಲಾಗುತ್ತದೆ. 20 ದಿನದ ಬಳಿಕ ಗಿಡ ಗಳನ್ನು ದೇವಾಲಯಕ್ಕೆ ಹಸ್ತಾಂತರಿಸುತ್ತೇವೆ. *ರತ್ನಾಕರ ಕುಳಾಯಿ,
ಕಾರ್ಯದರ್ಶಿ, ಸಾವಯವ ಕೃಷಿಕ ಗ್ರಾಹಕ ಬಳಗ

ನಮ್ಮ ವ್ಯಾಪ್ತಿಯ ರೈತರು, ಭಕ್ತರಿಗೆ ಮುಂಚಿತವಾಗಿಯೇ ತರಕಾರಿ ಗಿಡವನ್ನು ನೀಡಿ ಸಾವಯವ ರೀತಿಯಲ್ಲಿಯೇ ಬೆಳೆಸಿ ಬ್ರಹ್ಮಕಲಶ ಸಂದ ರ್ಭದಲ್ಲಿ ಅನ್ನಪ್ರಸಾದ ಕಾರ್ಯಕ್ರಮಕ್ಕೆ ಸಮರ್ಪಿಸುವ ಹೊಸ ಸಂಕಲ್ಪ ಇರಿಸಲಾಗಿದೆ. ದೇವಾಲಯ ಪರಿಸರದಲ್ಲಿ ಸಾವಯವ ಕೃಷಿ ಜಾಗೃತಿ, ಧಾರ್ಮಿಕ ಒಗ್ಗಟ್ಟು ಬೆಳೆಸುವುದು ಇದರ ಉದ್ದೇಶ.
*ಎಸ್‌.ಆರ್‌. ಸತೀಶ್ಚಂದ್ರ, ಆಡಳಿತ ಮೊಕ್ತೇಸರರು, ಶ್ರೀ ಕ್ಷೇತ್ರ ಮೋಂತಿಮಾರು

*ದಿನೇಶ್‌ ಇರಾ

ಟಾಪ್ ನ್ಯೂಸ್

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

ಹುಬ್ಬಳ್ಳಿ: ಗಾರ್ಮೆಂಟ್‌ನಲ್ಲಿ ತೆರೆದುಕೊಳ್ಳುತ್ತಿವೆ ದೊಡ್ಡ ಅವಕಾಶಗಳು-ಜೋಶಿ

ಹುಬ್ಬಳ್ಳಿ: ಗಾರ್ಮೆಂಟ್‌ನಲ್ಲಿ ತೆರೆದುಕೊಳ್ಳುತ್ತಿವೆ ದೊಡ್ಡ ಅವಕಾಶಗಳು-ಜೋಶಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Ranebennur: ‍‍‌‍ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ

Ranebennur: ‍‍‌‍ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.