ಮಾರುಕಟ್ಟೆ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ಬಂದರು ಅಡಿಕೆ ವರ್ತಕರ ಪ್ರತಿಭಟನೆ


Team Udayavani, Dec 21, 2020, 4:18 PM IST

ಮಾರುಕಟ್ಟೆ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ಬಂದರು ಅಡಿಕೆ ವರ್ತಕರ ಪ್ರತಿಭಟನೆ

ಸುರತ್ಕಲ್: ಸೆಸ್​ (ಮಾರುಕಟ್ಟೆ ಶುಲ್ಕ) ಏರಿಕೆ ಮಾಡಿ ಸರ್ಕಾರ ಹೊರಡಿಸಿರುವ ಆದೇಶವನ್ನು ವಿರೋಧಿಸಿ ಮಂಗಳೂರು ಬಂದರು ಅಡಿಕೆ ವರ್ತಕರು ತಮ್ಮ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಶನಿವಾರದಿಂದ ವ್ಯಾಪಾರ ಸ್ಥಗಿತಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಶತ 35 ಪೈಸೆಯಿಂದ 1 ರೂಪಾಯಿಗೆ ಏರಿಕೆ ಮಾಡಿರುವ ಮಾರುಕಟ್ಟೆ ಶುಲ್ಕವನ್ನು ಮೊದಲಿನಂತೆ 35 ಪೈಸೆ ಗೆ ಇಳಿಸುವಂತೆ ಒತ್ತಾಯಿಸಿರುವ ವ್ಯಾಪಾರಸ್ಥರು ಬಂದ್​ನ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.

ಕೇಂದ್ರ ಸರಕಾರ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯಿದೆಯನ್ನು ವ್ಯಾಪಾರಿಗಳು ಸ್ವಾಗತಿಸಿದ್ದು ರೈತರಿಗೆ ಮುಕ್ತ ಮಾರುಕಟ್ಟೆಯಿಂದ ಲಾಭವಿದೆ.ವ್ಯಾಪಾರಿಗಳಿಗೂ ಅನುಕೂಲ.ಹೀಗಾಗಿ ಎಪಿಎಂಸಿಯ ಅವಶ್ಯಕತೆಯಿಲ್ಲ.ಅದನ್ನು ರದ್ದು ಪಡಿಸಬೇಕು ಎಂದು ವ್ಯಾಪಾರಸ್ಥರು ಒತ್ತಾಯಿಸಿದರು.

ಅಡಿಕೆ ಶಿಪ್ಪರ್ಸ್ ಆಂಡ್ ಬ್ರೋಕರ್ಸ್ ಎಸೋಸಿಯೆಷನ್ ಅಧ್ಯಕ್ಷ ದೇವಾನಂದ ಪೈ ಅವರು ಮಾತನಾಡಿ ಸರಕಾರ 0.35 ರಷ್ಟು ಇದ್ದ ಶುಲ್ಕವನ್ನು ಏಕಾಏಕಿ ಏರಿಸಿದೆ. ಇದರಿಂದ ರೈತರಿಗೆ, ವ್ಯಾಪರಸ್ಥರಿಗೆ ದೊಡ್ಡ ಹೊಡೆತಬಿದ್ದಿದೆ. ಕೇಂದ್ರ ಸರಕಾರ ಎಪಿಎಂಸಿ ಸಹಿತ ಕೃಷಿ ಕಾಯಿದೆಗೆ ತಿದ್ದು ಪಡಿ ಮಾಡಿದ್ದು ಸ್ವಾಗತಾರ್ಹ. ಆದರೆ ರಾಜ್ಯ ಸರಕಾರ ಶುಲ್ಕ ಏರಿಕೆಯಿಂದ ಸಮಸ್ಯೆಯಾಗಿದೆ. ಕೂಡಲೇ ಸಂಸದರು, ಶಾಸಕರು ಮಧ್ಯ ಪ್ರವೇಶಿಸಿ ಈ ಹಿಂದಿನಂತೆ ಶುಲ್ಕವನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.

ಬೈಕಂಪಾಡಿ ವರ್ತಕರ ಸಂಘದ ಕಾರ್ಯದರ್ಶಿ, ಉದ್ಯಮಿ ಪ್ರಕಾಶ್ ಕಲ್ಬಾವಿ ಅವರು ಸರಕಾರ ನಿರ್ಧಾರ ವ್ಯಾಪಾರಿಗಳಿಗೆ ಹೊಡೆತ ನೀಡಿದೆ. ಕೇರಳದಲ್ಲಿ ಎಪಿಎಂಸಿ ಇಲ್ಲದ ಕಾರಣ ವರ್ತಕರು ಆ ಕಡೆ ತೆರಳುತ್ತಿದ್ದಾರೆ. ಇಲ್ಲಿನ ಎಪಿಎಂಸಿ ರದ್ದು ಮಾಡಿ ರೈತರಿಗೆ ಉದ್ಯಮಿಗಳಿಗೆ ಅನುಕೂಲವಾದ ಕೇಂದ್ರದ ಕಾಯಿದೆ ಜಾರಿ ಮಾಡಿ ಎಂದು ಒತ್ತಾಯಿಸಿದರು.

ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಅನಿವಾರ್ಯ ಎಂದು ಎಚ್ಚರಿಸಿದರು.

ಮಂಗಳೂರು ಮರ್ಚೆಂಟ್ ಎಸೋಸಿಯೇಷನ್ ಕಾರ್ಯದರ್ಶಿ ಅಬ್ದುಲ್ ರೆಹಿಮಾನ್ ಮಾತನಾಡಿ, ಸರಕಾರ ರೈತರಿಗೆ ಅನುಕೂಲ ಮಾಡುವ ಬದಲು ಹೆಚ್ಚು ಶುಲ್ಕ ಪಾವತಿಸುವ ಕೆಲಸ ಮಾಡಿದೆ. ಎಪಿಎಂಸಿಯು ಕೇಂದ್ರದ ಹೊಸ ಕಾಯಿದೆಯಿಂದ ಮಹತ್ವ ಕಳೆದುಕೊಂಡಿದೆ. ರದ್ದು ಮಾಡಬೇಕು. ದೇಶದ ಇತರೆಡೆ ರದ್ದು ಮಾಡುವ ಕೆಲಸವನ್ನು ಆಯಾ ರಾಜ್ಯಗಳು ಮಾಡುತ್ತಿವೆ ಎಂದರು. ರಾಘವ ಶೆಟ್ಟಿ, ಅನ್ವರ್ ಹುಸೈನ್, ಸುನೀಲ್ ರತಿಲಾಲ್, ಕಲ್ಪೇಶ್, ರಮೇಶ್ ಪಟೇಲ್, ಅಡಿಕೆ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು, ವರ್ತಕರು ಉಪಸ್ಥಿತರಿದ್ದರು.

ಬೈಕಂಪಾಡಿ ಎಪಿಎಂಸಿಯಲ್ಲೂ ಅಡಿಕೆ ವರ್ತಕರು ತಮ್ಮ ವ್ಯಾಪಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.