ಮಂಗಳೂರು: ಒಳಚರಂಡಿ ವ್ಯವಸ್ಥೆಯಿಲ್ಲದೆ ಕೊಳಚೆ ನೀರು ನೇತ್ರಾವತಿ ಒಡಲಿಗೆ!


Team Udayavani, Feb 6, 2024, 12:20 PM IST

ಮಂಗಳೂರು: ಒಳಚರಂಡಿ ವ್ಯವಸ್ಥೆಯಿಲ್ಲದೆ ಕೊಳಚೆ ನೀರು ನೇತ್ರಾವತಿ ಒಡಲಿಗೆ!

ಮಹಾನಗರ: ಬೋಳಾರ ವಾರ್ಡ್‌ ವ್ಯಾಪ್ತಿಯ ಕೆಲವು ಪ್ರದೇಶಗಳಿಗೆ ಇನ್ನೂ ಒಳಚರಂಡಿ ವ್ಯವಸ್ಥೆ ಕಲ್ಪಿಸದ ಕಾರಣ, ಮನೆ-ವಸತಿ ಸಮುಚ್ಚಯಗಳ ತ್ಯಾಜ್ಯ ನೀರು ತೆರೆದ ಚರಂಡಿ, ರಾಜಕಾಲುವೆಗಳಲ್ಲಿ ಹರಿದು ಹೋಗುತ್ತಿದ್ದು, ಇವು ನೇರವಾಗಿ ನೇತ್ರಾವತಿ
ಒಡಲು ಸೇರುವ ಮೂಲಕ ಜಲ ಮಾಲಿನ್ಯಕ್ಕೂ ಕಾರಣವಾಗುತ್ತಿದೆ.

ಇಲ್ಲಿನ ಮಹಾಕಾಳಿಪಡು³, ಜಪ್ಪು ಶೆಟ್ಟಿಬೆಟ್ಟು, ಆದರ್ಶನಗರ, ಜಪ್ಪುಪಟ್ನ ಮೊದಲಾದ ಪ್ರದೇಶಗಳ ಮನೆಗಳು ಇನ್ನೂ ಒಳಚರಂಡಿ ಸಂಪರ್ಕವನ್ನೇ ಪಡೆದಿಲ್ಲ. ಬಹುತೇಕ ಮನೆಗಳು ಶೌಚಾಲಯ ಪಿಟ್‌ ವ್ಯವಸ್ಥೆಯನ್ನು ಅಳವಡಿಕೊಂಡಿದ್ದು, ಕೆಲವರು ಕೊಳಚೆ ನೀರನ್ನು ನೇರವಾಗಿ ತೋಡಿಗೆ ಸಂಪರ್ಕಿಸಿದ್ದಾರೆ. ಇದು ಹರಿದು ನದಿಗೆ ಸೇರುತ್ತಿದೆ.

ಅರೆಕೆರೆಬೈಲ್‌ ವೆಟ್‌ವೆಲ್‌ ಮುಂಭಾಗದ ಕಾಲುವೆಯಲ್ಲೇ ಕಪ್ಪು ಕೊಳಚೆ ನೀರು ಹರಿದು ಹೋಗುತ್ತಿದೆ. ವೆಟ್‌ವೆಲ್‌ ನಿಂದಲೂ ಕೊಳಚೆ ನೀರನ್ನು ಚರಂಡಿಗೆ ಬಿಡಲಾಗುತ್ತಿದೆ. ವೆಟ್‌ವೆಲ್‌ನಲ್ಲಿ ಲಕ್ಷಾಂತರ ರೂ. ವೆಚ್ಚಮಾಡಿ ಜನರೇಟರ್‌ ವ್ಯವಸ್ಥೆ ಮಾಡಿದರೂ ಪರಿಣಾಮ ಬೀರಿಲ್ಲ ಎನ್ನುತ್ತಾರೆ ಸ್ಥಳೀಯರು. ಸ್ಮಾರ್ಟ್‌ ರಸ್ತೆಯಲ್ಲಿ ವ್ಯವಸ್ಥೆಯಿಲ್ಲ ಜಪ್ಪಿನಮೊಗರಿನಿಂದ ಮಹಾಕಾಳಿಪಡ್ಪು ಮೂಲಕ ನಿರ್ಮಾಣವಾಗುತ್ತಿರುವ ಸ್ಮಾರ್ಟ್‌ ಸಿಟಿ ರಸ್ತೆಯಲ್ಲೂ ಒಳಚರಂಡಿ ವ್ಯವಸ್ಥೆಗೆ ಅಗತ್ಯ ಅನುಕೂಲಕಗಳನ್ನು ಮಾಡಿಲ್ಲ.ಮುಂದಿನ ದಿನಗಳಲ್ಲಿ ಇಲ್ಲಿ ಒಳಚರಂಡಿ ಸಂಪರ್ಕ ಕಲ್ಪಿಸಬೇಕಾದರೆ ಮತ್ತೆ ಕಾಂಕ್ರೀಟ್‌ ರಸ್ತೆಯನ್ನು ಅಗೆಯಬೇಕಾದ ಅನಿವಾರ್ಯ ಎದುರಾಗಲಿದೆ. ಇದರಿಂದ ತೆರಿಗೆ ಹಣ ವನ್ನು ಅನಾವಶ್ಯಕರವಾಗಿ ಪೋಲು ಮಾಡಬೇಕಾದ ಪರಿಸ್ಥಿತಿ ಉಂಟಾಗಲಿದೆ ಎನ್ನುತ್ತಾರೆ ಸ್ಥಳೀಯರಾದ ಗಿರೀಶ್‌.

ಅಭಿವೃದಿಯಾದ ಕೆರೆಗಳೂ ಕಲುಷಿತ
ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೆ ಇಲ್ಲಿನ ಕೆರೆಗಳೂ ಮಲಿನಗೊಂಡಿವೆ. ಸುಮಾರು 4 ಕೋ. ರೂ. ವೆಚ್ಚ ಮಾಡಿ ಅಭಿವೃದ್ಧಿ ಮಾಡಲಾದ ಗುಜ್ಜಕೆರೆ ಮತ್ತು ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾದ ಮೊಲಿ ಕೆರೆ (ಶೆಟ್ಟಿಬೆಟ್ಟು ಕೆರೆ)ಗಳಿಗೆ ಕಲುಷಿತ ನೀರು ಹರಿದು ಹೋಗುತ್ತಿದೆ. ಮೊಲಿ ಕೆರೆ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದ್ದು, ಪಾಚಿಕಟ್ಟಿದೆ.

ತಡೆಗಟ್ಟಲು ಕ್ರಮ
ಬೋಳಾರ ಭಾಗದಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದು ಈಗಾಗಲೇ ಗಮನಕ್ಕೆ ಬಂದಿದೆ. ಹಂತ ಹಂತವಾಗಿ ಸರಿಪಡಿಸುವ ಕೆಲಸ ಮಾಡಲಾಗುವುದು. ಕೊಳಚೆ ನೀರು ರಾಜಕಾಲುವೆ ಮೂಲಕ ನದಿ ಸೇರದಂತೆ ತಡೆಯುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು.
ಸುಧೀರ್‌ ಶೆಟ್ಟಿ ಕಣ್ಣೂರು, ಮೇಯರ್‌

ಗಮನಕ್ಕೆ ತಂದರೂ ಪ್ರಯೋಜನವಿಲ್ಲ ಬೊಳಾರ ವಾರ್ಡ್‌ನ ಕೆಲವು ಭಾಗದಲ್ಲಿ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಕೆಲವೆಡೆ ಇನ್ನೂ ಒಳಚರಂಡಿ ವ್ಯವಸ್ಥೆಯೇ ಇಲ್ಲದೆ ಕಾಲುವೆಗಳಲ್ಲಿ ಕೊಳಚೆ ನೀರು ಹರಿಯುತ್ತಿದೆ. ಇದು ನೇತ್ರಾವತಿ ಒಡಲು ಸೇರುವ ಮೂಲಕ ನದಿ ಮಲಿನವಾಗುತ್ತಿದೆ. ಹಲವು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
ಪಿ. ನೇಮು ಕೊಟ್ಟಾರಿ, ಸ್ಥಳೀಯರು

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.