![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
ಮಂಗಳೂರು: ಗೋ ಅಕ್ರಮ ವಧೆ ಪ್ರಕರಣ, ಆಸ್ತಿ ಮುಟ್ಟುಗೋಲು
Team Udayavani, Nov 3, 2022, 9:43 AM IST
![ಮಂಗಳೂರು: ಗೋ ಅಕ್ರಮ ವಧೆ ಪ್ರಕರಣ, ಆಸ್ತಿ ಮುಟ್ಟುಗೋಲು](https://www.udayavani.com/wp-content/uploads/2022/11/madhyapradesh-620x413.jpg)
ಮಂಗಳೂರು: ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020ರ ಕಲಂ 8(4) ಹಾಗೂ 8(5)ರದಂತೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗೋವು ಅಕ್ರಮ ವಧೆ ಪ್ರಕರಣದಲ್ಲಿ ವಧಾ ಸ್ಥಳದ ಮಾಲಕ ಯಾಕೂಬ್ ಹೆಸರಿನಲ್ಲಿ ಅಡ್ಕೂರು ಗ್ರಾಮದ ಅದ್ಯಪಾಡಿಯಲ್ಲಿ ಡೋರ್ ನಂ.1-337 (ಸ.ನಂ.33/6)ರ 15 ಸೆಂಟ್ಸ್ ಜಮೀನನ್ನು ಸರಕಾರದ ವಶಕ್ಕೆ ಪಡೆದು ಮುಟ್ಟುಗೋಲು ಹಾಕುವಂತೆ ಸಹಾಯಕ ಆಯುಕ್ತ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮದನಮೋಹನ್ ಸಿ. ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾದ ವಾಹನ ಹಾಗೂ ಇತರ ಸೊತ್ತುಗಳನ್ನು ಸಕ್ಷಮ ಪ್ರಾಧಿಕಾರಿಗಳಿಂದ ಮೌಲ್ಯಮಾಪನ ಮಾಡಿಸಿ, ಅಂದಾಜು ಮೌಲ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ದೂರುದಾರರಾದ ಕಂಕನಾಡಿ ನಗರ ಠಾಣಾ ಉಪನಿರೀಕ್ಷಕರಿಗೆ ಸೂಚಿಸಿದ್ದಾರೆ.
ಪ್ರಕರಣದಲ್ಲಿ 3ನೇ ಸಿಜೆಎಂ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಮುಕ್ತಾಯವಾದ ಅನಂತರ ಅಂತಿಮ ವರದಿ ಹಾಗೂ 3ನೇ ಸಿಜೆಎಂ ನ್ಯಾಯಾಲಯದ ಅಂತಿಮ ಆದೇಶ ಪ್ರತಿಯನ್ನು ಎಸಿ ಕೋರ್ಟ್ಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಮಂಗಳೂರು ತಾಲೂಕು ತಹಶೀಲ್ದಾರ್ ಜಮೀನಿಗೆ ಸಂಬಂಧಪಟ್ಟಂತೆ ಪಹಣಿ ಪತ್ರದ ಕಲಂ 11ರಲ್ಲಿ ಮುಂದಿನ ಆದೇಶದ ವರೆಗೆ ನ್ಯಾಯಾಲಯದಿಂದ ಜಪ್ತಿ ಆಗಿರುವ ಬಗ್ಗೆ ನಮೂದು ಮಾಡುವಂತೆ ಹಾಗೂ ಪಂಚಾಯತ್ ದಾಖಲೆಗಳಲ್ಲೂ ಈ ಬಗ್ಗೆ ನಮೂದು ಮಾಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಸೋತ ಬಳಿಕ ಕೊಹ್ಲಿ ವಿರುದ್ಧ ‘ಮೋಸದಾಟ’ದ ಆರೋಪ ಮಾಡಿದ ಬಾಂಗ್ಲಾ ಆಟಗಾರರು
“ಗೋಹಂತಕರಿಗೆ ಸ್ಪಷ್ಟ ಸಂದೇಶ ರವಾನೆ’
ನಗರದಲ್ಲಿ ಅಕ್ರಮ ಗೋಹತ್ಯೆ ಮಾಡುವ ವ್ಯಕ್ತಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಗೋಹಂತಕರಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ಬಳಿಕವೂ ಅಕ್ರಮವಾಗಿ ಗೋವಧೆ, ಗೋ ಸಾಗಾಟ ನಡೆಸುತ್ತಿರುವುದು ಮುಂದುವರಿದ ಹಿನ್ನೆಲೆಯಲ್ಲಿ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿದೆ. ಈ ಹಿಂದೆಯೇ ಎಚ್ಚರಿಕೆ ನೀಡಿದಂತೆ ಗೋಹತ್ಯೆ ನಡೆಸುವವರ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆದು ಅಧಿಕೃತ ಆದೇಶ ಬಂದಿದೆ. ಗೋವು ನಮ್ಮ ನಂಬಿಕೆಯ ಭಾಗವಾಗಿದೆ. ಕಾನೂನು ಗಾಳಿಗೆ ತೂರಿ ಅಕ್ರಮ ಗೋಸಾಗಾಟ, ಗೋಹತ್ಯೆ ನಡೆಸುವವರಿಗೆ ಮುಂದೆಯೂ ಶಿಕ್ಷೆ ಕಾದಿದೆ. ಗೋಹಂತಕರಿಗೆ ನಗರದಲ್ಲಿ ಉಳಿಗಾಲವಿಲ್ಲ ಎಂಬ ಸಂದೇಶ ರವಾನಿಸಲಾಗಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಕರಣದ ವಿವರ
ಕಂಕನಾಡಿ ಠಾಣೆಯಲ್ಲಿ ಅ. 29ರಂದು ಅಕ್ರಮ ಗೋ ಸಾಗಾಟದ 7 ಮಂದಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ವೇಳೆ ಆದ್ಯಪಾಡಿಯಲ್ಲಿ ಯಾಕೂಬ್ಗ ಸೇರಿದ ಅಕ್ರಮ ಕಸಾಯಿಖಾನೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಅದರಂತೆ ಆರೋಪಿಯನ್ನು ಬಂಧಿಸಿದ್ದರು. ಅಕ್ರಮ ಕಸಾಯಿಖಾನೆ ಹೊಂದಿದ್ದ ಆರೋಪದಲ್ಲಿ ಕಾಟಿಪಳ್ಳದ ಹಕೀಂ, ಅರ್ಕುಳದ ಬಾತೀಶ್ ಹಾಗೂ ಗಂಜಿಮಠದ ಯೂಸುಫ್ ಎಂಬವರ ಆಸ್ತಿ ಮುಟ್ಟುಗೋಲಿಗೆ ಅ. 15ರಂದು ಸಹಾಯಕ ಕಮಿಷನರ್ ಆದೇಶ ಹೊರಡಿಸಿದ್ದರು.
ಟಾಪ್ ನ್ಯೂಸ್
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ](https://www.udayavani.com/wp-content/uploads/2024/06/vehicle-panic-button-150x92.jpg)
Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ
![Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ](https://www.udayavani.com/wp-content/uploads/2024/06/TULU-2-150x55.jpg)
Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್ನಲ್ಲಿ ಮಾತ್ರವೇ ಲಭ್ಯ
![Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’](https://www.udayavani.com/wp-content/uploads/2024/06/WARNA-NADHI-150x94.jpg)
Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್’
![BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್ ಕುಮಾರ್ ಕಟೀಲು](https://www.udayavani.com/wp-content/uploads/2024/06/bjppro-150x97.jpg)
BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್ ಕುಮಾರ್ ಕಟೀಲು
![Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ](https://www.udayavani.com/wp-content/uploads/2024/06/dc-1-150x72.jpg)
Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ
MUST WATCH
ಹೊಸ ಸೇರ್ಪಡೆ
![Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು](https://www.udayavani.com/wp-content/uploads/2024/06/4-19-150x90.jpg)
Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು
![Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?](https://www.udayavani.com/wp-content/uploads/2024/06/3-21-150x90.jpg)
Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-150x83.jpg)
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು
![INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ](https://www.udayavani.com/wp-content/uploads/2024/06/ind-w-150x83.jpg)
INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.