ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ನಾಲ್ವರು ದ್ವಿಚಕ್ರ ವಾಹನ ಕಳ್ಳರ ಬಂಧನ, ಸೊತ್ತು ವಶ
Team Udayavani, Apr 4, 2023, 8:17 PM IST
ಮಂಗಳೂರು : ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಪಣಂಬೂರು, ಕಸಬಾ ಬೆಂಗರೆ ನಿವಾಸಿಯಾದ ಮೊಹಮ್ಮದ್ ಸಿನಾನ್(19), ಕಸಬಾ ಬೆಂಗರೆ ನಿವಾಸಿ ಮೊಹಮ್ಮದ್ ಸಾಹಿಲ್(22), ಉಳ್ಳಾಲ ನಿವಾಸಿಯಾದ ಫೈಜಲ್ (35) ಹಾಗೂ ಪಡುಬಿದ್ರಿ ಕಂಚಿನಡ್ಕ ನಿವಾಸಿ ಮೊಹಮ್ಮದ್ ಸಾಹಿಲ್(18) ಎನ್ನಲಾಗಿದೆ.
ಬಂಧಿತರಿಂದ 2,15,000 ಮೌಲ್ಯದ 6 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಗಳು ಮಂಗಳೂರು ನಗರದ ಗೂಡ್ಸ್ ಶೆಡ್ ಪರಿಸರದಲ್ಲಿ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದ್ದು ಈ ಕುರಿತು ಮಂಗಳೂರು ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಹಾಗೂ ವಶಪಡಿಸಿಕೊಂಡ ವಾಹನಗಳನ್ನು ಮುಂದಿನ ಕ್ರಮಕ್ಕೆ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗ್ಡೆ, ಇನ್ಸ್ ಫೆಕ್ಟರ್ ಶ್ಯಾಮ್ ಸುಂದರ್ ಹೆಚ್. ಎಂ, ಪಿಎಸೈ ಸುದೀಪ್, ಶರಣಪ್ಪ ಭಂಡಾರಿ, ಎಎಸೈ ಮೋಹನ್ ಕೆ.ವಿ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ: ಸಾಕುನಾಯಿ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ರಿವಾಲ್ವರ್ನಿಂದ ಗುಂಡಿಕ್ಕಿ ಹತ್ಯೆಗೈದ ಎಎಸ್ಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.