![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 25, 2022, 6:32 PM IST
ಮಂಗಳೂರು: ಏಪ್ರಿಲ್ 04 ರಂದು ಸಂಜೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ಗ್ರಾಮದ ಪಾಲನೆ ಎಂಬಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ 8 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಏಪ್ರಿಲ್ 25 ರಂದು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ಸಮೇತ ಬಂಧಿಸಲಾಗಿದೆ.
ಸರವನ್ನು ಸುಲಿಗೆ ಮಾಡಿದ ಆರೋಪಿಗಳಾದ ವಾಮಂಜೂರು ಅರೀಫ್ ( 26 ), ಬೊಂದೇಲ್ ನ ಮೊಹಮ್ಮದ್ ಹನೀಫ್ ( 36 ) ಎನ್ನುವವರನ್ನು ಬಂಧಿಸಿದ್ದಾರೆ.
ಅರೀಫ್ ವಿರುದ್ಧ ಈಗಾಗಲೇ ಮಂಗಳೂರು ಗ್ರಾಮಾಂತರ , ಕಂಕನಾಡಿ ನಗರ , ಕಾವೂರು , ಬಜಪೆ ಮೂಡಬಿದ್ರೆ , ಬಂಟ್ವಾಳ ಗ್ರಾಮಾಂತರ , ಬಂಟ್ವಾಳ ನಗರ ಪೊಲೀಸು ಠಾಣೆಗಳಲ್ಲಿ ಸುಲಿಗೆ , ಕೊಲೆ ಯತ್ನ , ಮನೆ ಕಳ್ಳತನ , ಸಾಮಾನ್ಯ ಕಳ್ಳತನದಂತಹ ಒಟ್ಟು 18 ಪ್ರಕರಣಗಳು ದಾಖಲಾಗಿ , ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ. ಹನೀಫ್ ವಿರುದ್ಧ ಈಗಾಗಲೇ ಬಜಪೆ ಪೊಲೀಸ್ ಠಾಣೆಯಲ್ಲಿ 2016 ರಲ್ಲಿ 1 ಸುಲಿಗೆ ಪ್ರಕರಣ ದಾಖಲಾಗಿರುತ್ತದೆ .
ಆರೋಪಿ ಮೊಹಮ್ಮದ್ ಹನೀಫ್ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲರೈ ಎಂಬಲ್ಲಿ ಪಾರ್ಕ್ ಮಾಡಿದ್ದ ಒಂದು ಆಕ್ಸಿಸ್ ಸ್ಕೂಟರ ನ್ನು ಕಳವು ಮಾಡಿ ಅದೇ ದ್ವಿಚಕ್ರವಾಹನವನ್ನು ಉಪಯೋಗಿಸಿ , ಕಾವೂರು ಪೊಲೀಸು ಠಾಣಾ ವ್ಯಾಪ್ತಿಯ ಬೊಲ್ದುಗುಡ್ಡೆ ಎಂಬಲ್ಲಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 10 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ದಾರಿ ಕೇಳುವ ನೆಪದಲ್ಲಿ ಸುಲಿಗೆ ಮಾಡಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಸುಲಿಗೆ ಮಾಡಿದ ಎರಡು ಮಾಂಗಲ್ಯ ಸರಗಳನ್ನು ಖರೀದಿಸಿದ ಕಾವೂರಿನ ನಕ್ಷತ್ರ ಜುವೆಲ್ಲರ್ನ ಮಾಲಿಕರಾದ ಅಬ್ದುಲ್ ಸಮದ್ ಪಿ.ಪಿ. ಮತ್ತು ಮೊಹಮ್ಮದ್ ರಿಯಾಝ್ ಎಂಬವರನ್ನು ವಶಕ್ಕೆ ಪಡೆದು ಎರಡು ಪ್ರಕರಣಗಳಿಗೆ ಸಂಬಂಧಪಟ್ಟ ಒಟ್ಟು 18 ಗ್ರಾಮ್ ತೂಕದ 02 ಚಿನ್ನದ ಮಾಂಗಲ್ಯ ಸರಗಳನ್ನೂ ವಶಪಡಿಸಿಕೊಳ್ಳಲಾಗಿದೆ.
ನಾಲ್ಕು ಆರೋಪಿಗಳಿಂದ ಸುಮಾರು 80 ಸಾವಿರ ರೂ ಮೌಲ್ಯದ , ಒಟ್ಟು 18 ಗ್ರಾಂ ತೂಕದ 2 ಚಿನ್ನದ ಮಾಂಗಲ್ಯ ಸರಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಸುಮಾರು 50 ಸಾವಿರ ರೂ ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಲಾಗಿದ್ದು , ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.