ಮನಪಾ ತ್ಯಾಜ್ಯ ನಿರ್ವಹಣೆ: ಡಿಪಿಆರ್‌ ತಯಾರಿ

ರಾಮಕೃಷ್ಣ ಮಠ ಮಾರ್ಗದರ್ಶನದ ಸ್ಟಾರ್ಟಪ್‌ಗೆ ಜಿಲ್ಲಾಧಿಕಾರಿ ಸೂಚನೆ

Team Udayavani, Sep 28, 2021, 5:30 AM IST

ಮನಪಾ ತ್ಯಾಜ್ಯ ನಿರ್ವಹಣೆ: ಡಿಪಿಆರ್‌ ತಯಾರಿ

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಕುರಿತಂತೆ ವಾರದೊಳಗೆ ವಿಸ್ತೃತ ಯೋಜನ ವರದಿ (ಡಿಪಿಆರ್‌) ತಯಾರಿಸಿ ಒದಗಿಸುವಂತೆ ನಗರದ ರಾಮಕೃಷ್ಣ ಮಠದ ಮಾರ್ಗದರ್ಶದಲ್ಲಿ ನಡೆಯುತ್ತಿರುವ ಮಂಗಳಾ ರಿಸೋರ್ಸ್‌ ಮ್ಯಾನೇಜ್‌ಮೆಂಟ್‌ ಸ್ಟಾರ್ಟ್‌ಅಪ್‌ಗೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.

ನಗರದ ಘನ ತ್ಯಾಜ್ಯ ನಿರ್ವಹಣೆ, ಸಂಗ್ರಹ ಮತ್ತು ಸಾಗಾಟ ಕುರಿತು ಆ್ಯಂಟಿ ಪೊಲ್ಯೂಶನ್‌ ಡ್ರೈವ್‌ ಸಂಸ್ಥೆ ಸಿದ್ಧ ಪಡಿಸಿದ ಡಿಪಿಆರ್‌ ಕುರಿತು ಸೋಮವಾರ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಚರ್ಚೆಯಲ್ಲಿ ಅವರು ಮಾತನಾಡಿದರು.

ಮಂಗಳೂರು ರಾಮಕೃಷ್ಣ ಮಠದ ಶ್ರೀ ಏಕ ಗಮ್ಯಾನಂದ ಸ್ವಾಮೀಜಿ ಮತ್ತು ದಿಲ್‌ರಾಜ್‌ ಆಳ್ವ ಅವರು ಯೋಜನೆ ಕುರಿತು ವಿವರಿಸಿದರು. ಮೇಯರ್‌ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್‌ ಮತ್ತು ಡಾ| ಭರತ್‌ ಶೆಟ್ಟಿ ವೈ., ಉಪ ಮೇಯರ್‌ ಸುಮಂಗಲಾ ರಾವ್‌, ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌ ಉಪಸ್ಥಿತರಿದ್ದರು.

ಸ್ವತ್ಛ ಭಾರತ್‌ ಮಿಷನ್‌ ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆಯ ಸಮಗ್ರ ಪೌರ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆಗಾಗಿ ತ್ಯಾಜ್ಯ ಸಂಸ್ಕರಣೆ ಮತ್ತು ಸಾಗಾಟಕ್ಕೆ ಸಂಬಂಧ ಪಟ್ಟ ಯೋಜನ ವರದಿಯನ್ನು ಈಗಾಗಲೇ ತಯಾರಿಸಿದ್ದು, ಈ ವಿಸ್ತೃತ ಯೋಜನ ವರದಿಯ ಬಗ್ಗೆ ಚರ್ಚಿಸಲು ಈ ಸಭೆಯನ್ನು ಏರ್ಪಡಿಸಲಾಗಿತ್ತು.

ಇದನ್ನೂ ಓದಿ:ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

ಈಗ ತಯಾರಿಸಲಾಗಿರುವ ಡಿಪಿಆರ್‌ ಅಂತಿಮವಲ್ಲ; ಇನ್ನೂ ಚರ್ಚೆಗೆ ಅವಕಾಶವಿದೆ. ಚರ್ಚೆ ನಡೆಸಿದ ಬಳಿಕ ಅಂತಿಮ ನಿರ್ಧಾರಕ್ಕೆ ಬಂದು ದೃಢೀಕರಣ ಮಾಡಲಾಗುವುದು ಎಂದು ಮೇಯರ್‌ ಪ್ರೇಮಾನಂದ ಶೆಟ್ಟಿ ತಿಳಿಸಿದರು.ವಿಪಕ್ಷದ ಸದಸ್ಯ ಎ.ಸಿ. ವಿನಯರಾಜ್‌ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡರು.

10 ದಿನಗಳ ಕಾಲಾವಕಾಶ
ರಾಮಕೃಷ್ಣ ಮಠದವರು ತಾವೂ ಡಿಪಿಆರ್‌ ತಯಾರಿಸುವುದಾಗಿ ತಿಳಿಸಿದ್ದರಿಂದ ಅವರಿಗೆ ಡಿಪಿಆರ್‌ ತಯಾರಿಸಿ ಪ್ರಸ್ತುತ ಪಡಿಸಲು 10 ದಿನಗಳ ಕಾಲಾವಕಾಶ ನೀಡಲಾಯಿತು. ಅವರ ಡಿಪಿಆರ್‌ ಬರುವ ತನಕ ಈಗಾಗಲೇ ಆ್ಯಂಟಿ ಪೊಲ್ಯೂಶನ್‌ ಡ್ರೈವ್‌ ತಯಾರಿಸಿದ ಡಿಪಿಆರ್‌ ಅನ್ನು ತಡೆ ಹಿಡಿಯಲು ಹಾಗೂ ಹೊಸ ವ್ಯವಸ್ಥೆ ಆಗುವ ತನಕ ಈಗಿರುವ ಆ್ಯಂಟನಿ ವೇಸ್ಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಗುತ್ತಿಗೆಯನ್ನು ಮುಂದುವರಿಸಲು ಸರಕಾರದ ಅನುಮತಿ ಕೋರಲು ಸಭೆ ನಿರ್ಧರಿಸಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.