Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

ದೀಪಾವಳಿಗೆ 18,000 ಹಣತೆಗೆ ಬಣ್ಣ ಹಚ್ಚುತ್ತಿದ್ದಾರೆ ಚೇತನಾ ಬಾಲ ವಿಕಾಸ ಕೇಂದ್ರದ ಮಕ್ಕಳು

Team Udayavani, Oct 25, 2024, 12:42 PM IST

17(1)

ಮಹಾನಗರ: ಎಲ್ಲೆಡೆ ದೀಪಾವಳಿಗೆ ಸಡಗರದ ಸಿದ್ಧತೆ ನಡೆಯುತ್ತಿರುವಂತೆಯೇ ಮಂಗಳೂರಿನ ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಸಾಮರ್ಥ್ಯದ ಮಕ್ಕಳು ಕೂಡಾ ಬೆಳಕಿನ ಹಬ್ಬಕ್ಕೆ ಬಣ್ಣ ತುಂಬಲು ಸಿದ್ಧರಾಗುತ್ತಿದ್ದಾರೆ.

ಮಂಗಳೂರಿನ ವಿಟಿ ರಸ್ತೆಯ ಸೇವಾ ಭಾರತಿ ಸಂಸ್ಥೆಯ ಅಂಗಸಂಸ್ಥೆ ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಚೇತನ ವಿದ್ಯಾರ್ಥಿಗಳು ಹಣತೆಗಳಿಗೆ ಬಣ್ಣದ ಚಿತ್ತಾರ ನೀಡುವ ಮೂಲಕ ಬೆಳಕಿನ ಹಬ್ಬಕ್ಕೆ ಹೊಸ ಅರ್ಥ ಕಲ್ಪಿಸಿದ್ದಾರೆ. ಮಂಗಳೂರು ಆಸುಪಾಸಿನ 100ಕ್ಕೂ ಅಧಿಕ ವಿಶೇಷ ಚೇತನರಿಗೆ ಚೇತನಾ ಬಾಲವಿಕಾಸ ಕೇಂದ್ರ ಆಸರೆಯಾಗಿದೆ. ಇಲ್ಲಿನ 25 ವರ್ಷ ಮೇಲ್ಪಟ್ಟ ಸುಮಾರು 30ರಷ್ಟು ವಿಶೇಷ ಚೇತನ ಮಕ್ಕಳು ಅತ್ಯಂತ ತಾಳ್ಮೆಯಿಂದ ಶಿಸ್ತಿನಿಂದ ಹಣತೆಗಳಿಗೆ ನಾಜೂಕಾಗಿ ಬಣ್ಣ ಬಳಿಯುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈ ಹೊಸ ಸಡಗರದಲ್ಲಿರುವ ಮಕ್ಕಳ ಉತ್ಪನ್ನಗಳಿಗೆ ಮಂಗಳೂರು ಮಾತ್ರವಲ್ಲ ದೇಶ, ವಿದೇಶಗಳಿಂದಲೂ ಬೇಡಿಕೆ ಬಂದಿದೆಯಂತೆ.

ಚೇತನಾ ಬಾಲ ವಿಕಾಸ ಸಂಸ್ಥೆಯ ಮಕ್ಕಳು ಕಳೆದ 10 ವರ್ಷಗಳಿಂದ ದೀಪಾವಳಿ ಹಬ್ಬವನ್ನು ಬಣ್ಣದ ಹಣತೆಯೊಂದಿಗೆ
ಸಂಭ್ರಮಿಸುತ್ತಿದ್ದಾರೆ. ಅವರಿಗೆ ಪೋಷಕರು, ಸಿಬ್ಬಂದಿ, ಸ್ವಯಂಸೇವಕರು ಬೆಂಬಲ ನೀಡುತ್ತಿದ್ದಾರೆ. ಕಳೆದ ವರ್ಷ 13 ಸಾವಿರ ಹಣತೆಗಳನ್ನು ಬಣ್ಣ ಹಚ್ಚಿ ಸಿದ್ಧಪಡಿಸಿದ್ದರು. ಈ ಬಾರಿ ಬೇಡಿಕೆ ಹೆಚ್ಚಿದೆ ಎನ್ನುತ್ತಾರೆ ಸಂಸ್ಥೆಯ ಸಿಬಂದಿ ಮೀನಾಕ್ಷಿ. ಮುಂಬೈ, ಚೆನ್ನೈ, ಪುಣೆ, ಬೆಂಗಳೂರು, ಮೈಸೂರಿಗೆ ಸಾವಿರಾರು ಹಣತೆಗಳನ್ನು ಕಳುಹಿಸಲಾಗಿದೆ ಎನ್ನುತ್ತಾರೆ ಸಂಸ್ಥೆಯ ಮುಖ್ಯಸ್ಥರು.

ಮಮತೆಯ ಮಡಿಲಿಂದ ಬಣ್ಣಗಳ ಚಿತ್ತಾರ
ಚೇತನಾ ಬಾಲವಿಕಾಸ ಸಂಸ್ಥೆಯಲ್ಲಿ ವಿಶೇಷ ಪ್ರೀತಿ ಮಮತೆ ಮಕ್ಕಳಿಗೆ ನೀಡಲಾಗುತ್ತದೆ. ಹೀಗಾಗಿ ಯಾವುದೇ ಕೆಲಸಗಳನ್ನು ಅವರು ಮಾಡುತ್ತಾರೆ. ಮೂರು ತಿಂಗಳ ಹಿಂದೆಯೇ ಹಣತೆಗಳನ್ನು ಶೃಂಗರಿಸುವ ಕೆಲಸ ಆರಂಭಿಸಲಾಗಿದೆ. ವಿವಿಧ ರಾಜ್ಯಗಳಿಂದ ಹಣತೆಗೆ ಬೇಡಿಕೆ ಇದ್ದು, ಈ ಬಾರಿ 18 ಸಾವಿರ ಹಣತೆ ಸಿದ್ಧಪಡಿಸುತ್ತಿದ್ದೇವೆ. ಮುಂದಿನ ವರ್ಷಗಳಲ್ಲಿ ಹಣತೆಗಳನ್ನು ಇಲ್ಲೇ ರಚಿಸುವ ಯೋಜನೆ ಇದೆ.
-ಸುಪ್ರೀತಾ, ಮುಖ್ಯಶಿಕ್ಷಕಿ ಚೇತನಾ, ಬಾಲ ವಿಕಾಸ ಕೇಂದ್ರ

25 ಶೈಲಿಯ ಹಣತೆಗಳಿಗೆ ಬಣ್ಣ
ಮುಂಬೈನಿಂದ ಮಣ್ಣಿನ ಹಣತೆಗಳನ್ನು ತಂದು ಅವುಗಳಿಗೆ ಬಣ್ಣ ಬಳಿದು ವಿವಿಧ ಚಿತ್ತಾರ ಮೂಡಿಸಲಾಗುತ್ತದೆ. ತಾವರೆ, ತುಳಸಿಕಟ್ಟೆ, ಮಾವು ಇತ್ಯಾದಿ ಶೈಲಿಯಲ್ಲಿ ಹಣತೆಗಳು ಇಲ್ಲಿವೆ. ಓರ್ವ ವಿಶೇಷ ವಿದ್ಯಾರ್ಥಿ ದಿನವೊಂದಕ್ಕೆ 25 ಹಣತೆಗಳನ್ನು ಶೃಂಗರಿಸಬಲ್ಲರು.

ಹಣತೆಗೆ ಬಣ್ಣ ಬಳಿಯುವುದು ವಿದ್ಯಾರ್ಥಿಗಳಿಗೆ ಒಂದು ಚಟುವಟಿಕೆಯಾದರೆ, ಇದರಿಂದ ಬರುವ ಆದಾಯದಲ್ಲಿ ಖರ್ಚು ವೆಚ್ಚ ತೆಗೆದು ಉಳಿದ ಹಣವನ್ನು ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ನೀಡಲಾಗುತ್ತದೆ. ಸಂಸ್ಥೆಯ ವಾರ್ಷಿಕೋತ್ಸವದಂದು ಬಹುಮಾನ ರೂಪದಲ್ಲಿ ವಿತರಿಸಲಾಗುತ್ತದೆ. ಇದನ್ನು ಪಡೆಯುವ ವಿದ್ಯಾರ್ಥಿಗಳ ಆನಂದ ಹೇಳಲು ಅಸಾಧ್ಯ ಅನ್ನುತ್ತಾರೆ ಸಿಬಂದಿ.

ಮಕ್ಕಳಿಗೆ ವರ್ಷವಿಡೀ ಚಟುವಟಿಕೆ
ದೀಪಾವಳಿ ಸಂದರ್ಭದಲ್ಲಿ ಹಣತೆಗಳಿಗೆ ಬಣ್ಣದ ಚಿತ್ತಾರ ಒಂದೆಡೆಯಾದರೆ, ವರ್ಷವಿಡೀ ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತದೆ.  ಸ್ಕ್ರೀನ್‌ ಪೈಂಟಿಂಗ್‌, ಪೇಪರ್‌, ಬಟ್ಟೆ ಬ್ಯಾಗ್‌ ತಯಾರಿಕೆ, ಮೆಡಿಕಲ್‌ಗ‌ಳಿಗೆ ಬೇಕಾಗುವ ಕವರ್‌ಗಳು, ಅಲಂಕಾರಿಕ ಹೂವುಗಳು, ಬಟ್ಟೆಯ ಮ್ಯಾಟ್‌ಗಳು, ಕ್ಯಾಂಡಲ್‌ ತಯಾರಿಕೆ ಹೀಗೆ ವಿವಿಧ ಚಟುವಟಿಕೆಗಳು ಭಿನ್ನ ಸಾಮರ್ಥ್ಯರನ್ನು ಕ್ರಿಯಾಶೀಲರನ್ನಾಗಿಸುತ್ತಿದೆ.

-ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

14-rabakavi-1

Rabkavi Banhatti: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-surath

ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ

11

Paduperar: ಈ ಬಾರಿ ರಾಮ ಮಂದಿರ ಗೂಡುದೀಪ!

10

Mangaluru: ನಿರ್ಬಂಧವಿದೆ, ದಂಡನೆಯಿದೆ.. ಜಾರಿ ಇಲ್ಲ !

WhatsApp Image 2024-10-25 at 02.11.37

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

WhatsApp Image 2024-10-25 at 02.14.40

Dakshina Kannada: ಎಸೆಸೆಲ್ಸಿಯ 4,742 ವಿದ್ಯಾರ್ಥಿಗಳಿಗೆ ‘ದತ್ತಾಂಶ ಸೂತ್ರ’!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.