Mangaluru: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ
Team Udayavani, Oct 14, 2024, 9:30 PM IST
ಮಂಗಳೂರು: ಪಚ್ಚನಾಡಿ ಸಂತೋಷ್ನಗರ ಮೈದಾನದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಕೊಳೆತ ಶವ ಪತ್ತೆಯಾಗಿದೆ.
ಸ್ಥಳೀಯರಾದ ರಿತೇಶ್ ಎನ್ನುವವರು ಈ ಪ್ರದೇಶದಲ್ಲಿ ಸಾಗುತ್ತಿದ್ದ ವೇಳೆ ವಾಸನೆ ಬರುತ್ತಿದ್ದುದನ್ನು ಕಂಡು ಪರಿಶೀಲಿಸಿದಾಗ ಸುಮಾರು 35 – 45 ವರ್ಷದೊಳಗಿನ ಅಪರಿಚಿತ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ಎರಡು ಬೈರಾಸುಗಳನ್ನು ಜೋಡಿಸಿ ಅದರಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ.
ದೇಹದ ಭಾರದಿಂದ ಶವ ಕುಳಿತ ಸ್ಥಿತಿಯಲ್ಲಿ ಇತ್ತು. ದೇಹವು ಸಂಪೂರ್ಣವಾಗಿ ಕೊಳೆತಿದ್ದು, ಮುಖ ಗುರುತು ಸಿಗದಷ್ಟು ಕೊಳೆತು ಹೋಗಿತ್ತು. ಸುಮಾರು 5.7 ಅಡಿ ಎತ್ತರ, ದೇಹದಲ್ಲಿ ತೋಳಿನ ಮಣಿಗಂಟಿನ ವರೆಗೆ ಮಡಚಿದ ಶರ್ಟ್, ಕಡು ನೀಲಿ ಬಣ್ಣದ ಪ್ಯಾಂಟ್, ಬಳಿ ಮತ್ತು ಕಂದು ಬಣ್ಣದ ಬಾರ ಇರುವ ಮಾಸಿದ ಚಪ್ಪಲ್ ಇತ್ತು. ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಚಹರೆಯ ಮೃತ ವ್ಯಕ್ತಿಯ ಪರಿಚಯ ಇದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸಬಹುದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.