Dowry ಕಿರುಕುಳಕ್ಕೆ ಮಹಿಳೆ ಬಲಿ: ಪತಿ, ಆತನ ಮೊದಲ ಪತ್ನಿ ಸೇರಿ ನಾಲ್ವರಿಗೆ 7 ವರ್ಷ ಜೈಲು
ಮಂಗಳೂರಿನಲ್ಲಿ ವರದಕ್ಷಿಣೆಗಾಗಿ ದೈಹಿಕ ಮತ್ತು ಮಾನಸಿಕ ಹಿಂಸೆಗೆ ಬಲಿಯಾಗಿದ್ದ ರೇಷ್ಮಾ ಬಾನು
Team Udayavani, Jul 18, 2024, 8:38 PM IST
ಮಂಗಳೂರು: ವರದಕ್ಷಿಣೆ ಸಾವು ಪ್ರಕರಣವೊಂದರಲ್ಲಿ ಮೃತ ಮಹಿಳೆಯ ಗಂಡ, ಆತನ ಮೊದಲನೇ ಪತ್ನಿ, ಅತ್ತೆ ಮತ್ತು ಮೊದಲನೇ ಪತ್ನಿಯ ಅಣ್ಣನಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿನ ಸಜೆ ಮತ್ತು ತಲಾ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಭದ್ರಾವತಿ ತಾಲೂಕು ತಿಪ್ಲಾಪುರ ಗ್ರಾಮದ ಮಜೀದ್ ಅಹಮ್ಮದ್ (35), ಆತನ ಮೊದಲನೇ ಪತ್ನಿ ಸಪೂರ ಅಂಜುಮ್ (28), ತಾಯಿ ಮಮ್ತಾಜ್ ಬಾನು (60) ಮತ್ತು ಸಪೂರಳ ಅಣ್ಣ ಭದ್ರಾವತಿ ಹಳೆನಗರದ ಕಾಜಿ ಮೊಹಲ್ಲ 4 ನೇ ಕ್ರಾಸ್ ನಿವಾಸಿ ಜಮೀರ್ ಅಹಮ್ಮದ್ (30) ಶಿಕ್ಷೆಗೊಳಗಾದವರು. ಚೆನ್ನಗಿರಿಯ ರೇಷ್ಮಾ ಬಾನು (26) ಮೃತ ಮಹಿಳೆ.
ರೇಷ್ಮಾ ಬಾನುವನ್ನು ಮಜೀದ್ ಅಹಮ್ಮದ್ ಎರಡನೇ ಮದುವೆಯಾಗಿದ್ದು, ಬಳಿಕ ಕಾಟಿಪಳ್ಳ 9 ನೇ ಬ್ಲಾಕ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಸುರತ್ಕಲ್ನಲ್ಲಿ ಗ್ಯಾರೇಜ್ ನಡೆಸುತ್ತಿದ್ದ. ತಾಯಿ ಹಾಗೂ ಇತರರೊಂದಿಗೆ ಸೇರಿ ರೇಷ್ಮಾ ಬಾನು ವಿಗೆ ವರದಕ್ಷಿಣೆಗಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ. ಅದರಂತೆ 2019 ರ ಏ.28 ರಂದು ಮಧ್ಯಾಹ್ನ ರೇಷ್ಮಾ ರೂಮ್ನಲ್ಲಿ ಮಲಗಿದ್ದಾಗ ಆರೋಪಿ ಮಜೀದ್ ಗ್ಯಾರೇಜ್ನಿಂದ ಬಂದು ದಿಂಬುವಿನಿಂದ ಉಸಿರುಗಟ್ಟಿಸಿ ಅಸ್ವಸ್ಥಗೊಳಿಸಿದ್ದ. ಬಳಿಕ ನಾಲ್ವರು ಸೇರಿ ಚೂಡಿದಾರ ಶಾಲ್ನಿಂದ ಕುತ್ತಿಗೆಗೆ ಸುತ್ತಿ ಫ್ಯಾನ್ಗೆ ನೇಣಿಗೆ ಹಾಕುತ್ತಾರೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.