Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ


Team Udayavani, Oct 22, 2024, 7:00 AM IST

2

ಮಂಗಳೂರು: ಜೆ.ಪಿ. ಮಾರ್ಗನ್‌ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ವಿಶ್ವನಾಥನ್‌ ಮುಖ್ಯ ಹೂಡಿಕೆದಾರ ಸ್ಟ್ರ್ಯಾಟಜಿಸ್ಟ್‌ ಎಂದು ಹೇಳಿಕೊಂಡು ಸಂಪರ್ಕಿಸಿದ್ದಾನೆ. ಬಳಿಕ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್‌ ಎಂಬ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ನಂಬರ್‌ಗಳಿಂದ ಕರೆ ಮಾಡಿ ಸಂಪರ್ಕಿಸಿದ್ದಾರೆ. ಕಂಪೆನಿ ಪ್ರಾರಂಭಿಸುವ ಬಗ್ಗೆ ತಿಳಿಸಿ ಲಿಂಕ್‌ ಕಳುಹಿಸಿ, 20 ಲಕ್ಷ ರೂ. ವರ್ಗಾವಣೆ ಮಾಡುವಂತೆ ತಿಳಿಸಿದ್ದಳು. ಅದರಂತೆ ಅ. 14ರಂದು ದೂರುದಾರರು 20 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಷೇರುಗಳನ್ನು ಖರೀದಿಸುವಂತೆ ತಿಳಿಸಿದ್ದು, 1 ಷೇರಿಗೆ 240 ರೂ.ನಂತೆ 1 ಸಾವಿರ ಷೇರುಗಳನ್ನು ಖರೀದಿಸಿದ್ದಾರೆ.

ಅ. 15ರಂದು ಇನ್ನೊಂದು ಸಂಸ್ಥೆಯ ಷೇರುಗಳನ್ನು ಖರೀದಿಸುವಂತೆ ತಿಳಿಸಿದ್ದು, ಅದರಂತೆ 250.95 ರೂ.ನಂತೆ 7,900 ಷೇರುಗಳನ್ನು ಖರೀದಿಸಿದ್ದಾರೆ. ಬಳಿಕ ಹೂಡಿಕೆ ಮಾಡಿದ ಹಣವನ್ನು ವಿದ್‌ಡ್ರಾ ಮಾಡುವಂತೆ ತಿಳಿಸಿದ್ದು, 1,500 ರೂ. ಹಿಂಪಡೆದಿದ್ದಾರೆ. ಆದರೆ ಆ ಹಣವು ಬೇರೊಂದು ಖಾತೆಯಿಂದ ಬಂದಿದ್ದು, ಇದರಿಂದ ಸಂಶಯ ಬಂದು ನೀತಾ ಶರ್ಮಾ ಅವರಿಗೆ ಕೇಳಿದಾಗ ಸರಿಯಾದ ಉತ್ತರ ನೀಡಿಲ್ಲ.

ಹೂಡಿಕೆ ಮಾಡಿದ ಎಲ್ಲ ಹಣವನ್ನು ವಾಪಸ್‌ ನೀಡುವಂತೆ ಕೇಳಿದಾಗ ನೀತಾ ಶರ್ಮಾ 4 ಲಕ್ಷ ರೂ. ಹೆಚ್ಚುವರಿಯಾಗಿ ಕೇಳಿದ್ದಾರೆ. ಆಗ ತಾನು ಮೋಸ ಹೋಗಿರುವುದು ಅರಿವಾಗಿದೆ. ಹೂಡಿಕೆ ಮಾಡುವಂತೆ ಹೇಳಿ ಮೋಸ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಬಸ್‌ ಸಿಬಂದಿ ನಡುವೆ ಜಗಳ; ಕನ್ನಡಿಗೆ ಹಾನಿ; 4 ಸಾವಿರ ರೂ. ನಷ್ಟ

death

Mangaluru: ಅಪರಿಚಿತ ಶವ ಪತ್ತೆ; ಸೂಚನೆ

12

Kavoor: ಒಳಚರಂಡಿಯಿಂದ ಹೊರಚಿಮ್ಮುವ ಮಲಿನ ನೀರು; ಸಾಂಕ್ರಾಮಿಕ ರೋಗ ಭೀತಿ

10(2)

Mangaluru: ಸರಕಾರಿ ಶಾಲಾ ಶೌಚಾಲಯಗಳಿಗೆ ಹೊಸ ರೂಪ

9

Mangaluru: ಪಾಲಿಕೆ ಸಾಮಾನ್ಯ ಸಭೆಗೆ ಈ ಬಾರಿಯೂ ಅಡ್ಡಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.