Mangaluru ಜಂಕ್ಷನ್ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ
Team Udayavani, Oct 11, 2024, 6:24 PM IST
ಕಂಕನಾಡಿ: ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ನಾಗುರಿ ಕಡೆಯಿಂದ ಇರುವ ರಸ್ತೆಯ ಅಂತ್ಯದ ಸುಮಾರು 100 ಮೀ. ರಸ್ತೆ ಇಕ್ಕಟ್ಟಾಗಿರುವ ಹಿನ್ನೆಲೆಯಲ್ಲಿ ಅಲ್ಲಿಯೇ ಇನ್ನೊಂದು ಕಡೆಯಿಂದ ರಸ್ತೆ ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿ ಹಂತದಲ್ಲಿ ರುವ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ನಾಗುರಿಯಿಂದ ಕೆಲವು ವರ್ಷಗಳ ಹಿಂದೆಯೇ ರಸ್ತೆ ನಿರ್ಮಿ ಸಲಾಗಿದೆ. ನಾಗುರಿ ಭಾಗದಲ್ಲಿ ಅಗಲವಾ ಗಿರುವ ಈ ರಸ್ತೆಯು ನಿಲ್ದಾಣಕ್ಕೆ ಪ್ರವೇಶ ಪಡೆಯುವಲ್ಲಿ ತುಂಬಾ ಕಿರಿದಾಗಿದ್ದು, ಇದರಿಂದ ಘನ ವಾಹನಗಳಿಗೆ ಸಂಚರಿ ಸುವುದು ಕಷ್ಟವಾಗಿದೆ. ಕೇವಲ ದ್ವಿಚಕ್ರ ವಾಹನ, ಆಟೋಗಳು ಮತ್ತು ಕಾರು ಸಂಚರಿಸಬಹುದಾಗಿದೆ.
ರಸ್ತೆ ವಿಸ್ತರಣೆಗೆ ರೈಲ್ವೇ ಹೋರಾಟಗಾರ ರಿಂದ ಬೇಡಿಕೆ ಇತ್ತಾದರೂ ಸ್ಥಳಾವಕಾಶದ ಕೊರತೆಯ ಕಾರಣ ರಸ್ತೆ ವಿಸ್ತರಿಸಲು ಸಾಧ್ಯವಾಗಿರಲಿಲ್ಲ. ಇದೀಗ 100 ಮೀ. ಮೊದಲೇ ಎಡಕ್ಕೆ ಇನ್ನೊಂದು ರಸ್ತೆಯನ್ನು ನಿರ್ಮಾಣ ಮಾಡಲು ಯೋಜನೆ ರೂಪಿ ಸಲಾಗಿದೆ. ಸ್ಥಳೀಯರ ಮನವೊಲಿಸಿ ರಸ್ತೆ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ.
ಇದಕ್ಕಾಗಿ ಸುಮಾರು 30 ಸೆಂಟ್ಸ್ನಷ್ಟು ಜಾಗವನ್ನು ಟಿಡಿಆರ್ ಮೂಲಕ ಸ್ಥಳೀಯ ರಿಂದ ಪಡೆದು ಕೊಳ್ಳಲಾಗಿದ್ದು, ಈಗಾಗಲೇ ರಸ್ತೆ ಗಾಗಿ ನೆಲ ಸಮತಟ್ಟುಗೊಳಿಸುವ ಕೆಲಸ ಆಗಿದೆ. ಕಾಂಕ್ರೀಟ್ ಕಾಮಗಾರಿ ಬಾಕಿ ಇದೆ.
ಬಜಾಲ್ ಕಡೆಯಿಂದ ರಸ್ತೆ
ಪ್ರಸ್ತುತ ನಿಲ್ದಾಣಕ್ಕೆ ಬಜಾಲ್ ಕಡೆ ಯಿಂದ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದ್ದು, ಬಹುತೇಕ ವಾಹನಗಳು ಇದೇ ರಸ್ತೆಯಾಗಿ ರೈಲು ನಿಲ್ದಾಣದ ಆವರಣಕ್ಕೆ ಪ್ರವೇಶಿಸುತ್ತವೆ. ಬಸ್ ಕೂಡ ಇದೇ ರಸ್ತೆಯಲ್ಲಿ ನಿಲ್ದಾಣದ ವರೆಗೆ ಬರುತ್ತದೆ. ನಾಗುರಿ ಕಡೆಯಿಂದಲೂ ನಿಲ್ದಾಣಕ್ಕೆ ಸಂಪರ್ಕ ಸಾಧ್ಯವಾದರೆ ನಿಲ್ದಾಣ ಪ್ರವೇಶ ಇನ್ನಷ್ಟು ಸುಲಭವಾಗಲಿದೆ.
ನಿಲ್ದಾಣ ಅಭಿವೃದ್ಧಿ
ನಿಲ್ದಾಣ ಅಭಿವೃದ್ಧಿ ಕಾರ್ಯಕವೂ ವೇಗವಾಗಿ ನಡೆಯುತ್ತಿದೆ. ಪಾರ್ಕಿಂಗ್ ಸ್ಥಳ, ಪ್ರವೇಶ ದ್ವಾರ, ಪ್ರಯಾಣಿಕರು ರೈಲಿ ಗಾಗಿ ಕಾಯುವ ಕೊಠಡಿ ಸಹಿತ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ವರ್ಷಾಂತ್ಯದೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ
Mangaluru: ಜರ್ಮನಿ ಪಾರ್ಲಿಮೆಂಟ್ ಪುಸ್ತಕದಲ್ಲಿ ಸ್ಪೀಕರ್ ಖಾದರ್ ಸಹಿ
Mangaluru: ಅ.15: ಬಂಟ್ವಾಳ ಬಿಜೆಪಿ ಸಮಾವೇಶಕ್ಕೆ ವಿಜಯೇಂದ್ರ
Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ
Mangaluru: ಮೊಬೈಲ್ ಕಿತ್ತುಕೊಂಡದ್ದಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.