Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು
Team Udayavani, Oct 7, 2024, 7:45 AM IST
ಮಂಗಳೂರು: ಕೂಳೂರಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕ ಅಂಗಡಿಗೆ ಬರುತ್ತಿದ್ದ ಮಹಿಳೆಯೋರ್ವರಿಗೆ ವೀಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ಆ ಯುವಕನನ್ನು ಅಂಗಡಿಯವರು ಕೆಲಸದಿಂದ ತೆಗೆದು ಹಾಕಿದ್ದಾರೆ.
ರಾತ್ರಿ 11.30ಕ್ಕೆ ಮಹಿಳೆಗೆ ವೀಡಿಯೋ ಕರೆ ಮಾಡಿದ್ದ ಯುವಕ ಅಸಭ್ಯವಾಗಿ ವರ್ತಿಸಿದ್ದ. ಇದರಿಂದ ಆಕ್ರೋಶಗೊಂಡ ಇಬ್ಬರು ಮಹಿಳೆಯರು ಅಂಗಡಿಗೆ ಬಂದು ಯುವಕನನ್ನು ತರಾಟೆಗೆ ತೆಗೆದುಕೊಂಡು ಕೈಯಿಂದ ಹಲ್ಲೆ ನಡೆಸಿದ್ದರು. ಮಹಿಳೆಯರು ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ‘ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕ ವೀಡಿಯೋ ಕರೆ ಮಾಡಿದ್ದ. ಈ ವಿಷಯ ಗೊತ್ತಾದ ಕೂಡಲೇ ಕೆಲಸದಿಂದ ತೆಗೆದು ಹಾಕಿದ್ದೇವೆ. ಮಾಲಕರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆದರೆ ಕೃತ್ಯ ನಡೆಸಿದ್ದು ಕೆಲಸಗಾರ. ಆತನನ್ನು ತೆಗೆದು ಹಾಕಲಾಗಿದೆ ಎಂದು ಅಂಗಡಿಯ ಮಾಲಕರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Bigg Boss Marathi 5: ಬಿಗ್ ಬಾಸ್ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.