Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!

93 ಸ್ಟಾಲ್‌ ವಿತರಣೆಯಾದರೂ ಮೂಲ ಸೌಕರ್ಯವಿಲ್ಲ; ಗೂಡಂಗಡಿ ಉರುಳಿಸುವಾಗಿನ ಉತ್ಸಾಹ ಈಗಿಲ್ಲ

Team Udayavani, Oct 16, 2024, 4:51 PM IST

13

ಕುಡುಕರ, ಭಿಕ್ಷುಕರ ಆವಾಸ ತಾಣ.

ಮಹಾನಗರ: ಮಂಗಳೂರು ನಗರದೊಳಗಿರುವ ಬೀದಿಬದಿ ವ್ಯಾಪಾರಿಗಳಿಗೆ ಸ್ಟೇಟ್‌ಬ್ಯಾಂಕ್‌ ಸಮೀಪ ಪ್ರತ್ಯೇಕ ವಲಯ ನಿರ್ಮಾಣ ಮಾಡಲಾಗಿದೆ. ಗುರುತಿನ ಚೀಟಿ ವಿತರಿಸಿ ಸ್ಟಾಲ್‌ಹಂಚಿಕೆಯಾಗಿ ತಿಂಗಳು ಕಳೆದರೂ ವ್ಯಾಪಾರ ಆರಂಭಗೊಂಡಿಲ್ಲ. ನಿರ್ಮಾಣಗೊಂಡ ವಲಯ ಕುಡುಕರ, ಭಿಕ್ಷುಕರ ಆವಾಸ ತಾಣವಾಗಿ ಮಾರ್ಪಾಡಾಗುತ್ತಿದೆ.

ಮಹಾನಗರದ ಜನರ ಆರೋಗ್ಯ ಮತ್ತು ಸ್ವತ್ಛತೆಯ ಕಾರಣವನ್ನು ಮುಂದಿಟ್ಟು ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳು ನಗರದಲ್ಲಿರುವ ಅಕ್ರಮ ಗೂಡಂಗಡಿಗಳನ್ನು ಕೆಡವಿದ್ದರು. ಅಧಿಕೃತ ವ್ಯಾಪಾರದ ಪರವಾನಿಗೆ ಪಡೆದವರಿಗೆ ವ್ಯಾಪಾರಿ ವಲಯ ಸ್ಥಾಪಿಸಿ ಅಲ್ಲಿ ಸ್ಟಾಲ್‌ಗೆ ಅವಕಾಶ ಕೊಡುವುದಾಗಿ ಹೇಳಲಾಗಿತ್ತು. ಈಗ ವ್ಯಾಪಾರಿ ವಲಯ ಸಿದ್ಧವಾಗಿದ್ದರೂ ಅದಕ್ಕೆ ಸರಿಯಾದ ಮೂಲ ಸೌಕರ್ಯಗಳಿಲ್ಲ ಎಂಬ ದೂರಿದೆ. ಗೂಡಂಗಡಿ ಉರುಳಿಸುವ ಟೈಗರ್‌ ಕಾರ್ಯಾಚರಣೆಗೆ ವಹಿಸಿದಷ್ಟು ಆಸಕ್ತಿ ವಲಯ ಕಾರ್ಯಾರಂಭಕ್ಕೆ ವಹಿಸಿದಂತೆ ಕಾಣುತ್ತಿಲ್ಲ.

ಸೆ. 5ರಂದು ಪಾಲಿಕೆಯ ಮೂಲಕ ವ್ಯಾಪಾರಿಗಳಿಗೆ ಸ್ಟಾಲ್‌ಹಸ್ತಾಂತರ ಕಾರ್ಯ ಮಾಡಲಾಗಿತ್ತು. 93 ವ್ಯಾಪಾರಿಗಳಿಗೆ ಚೀಟಿ ಎತ್ತುವ ಮೂಲಕ ಸ್ಟಾಲ್‌ಗ‌ಳನ್ನು ವಿತರಿಸಲಾಗಿತ್ತು. ಆದರೆ ಇಲ್ಲಿಯ ತನಕ ವಲಯದಲ್ಲಿ ವ್ಯಾಪಾರ ಆರಂಭಗೊಂಡಿಲ್ಲ.

ಬಹುತೇಕ ಕಾಮಗಾರಿ ಪೂರ್ಣ
ಬೀದಿಬದಿ ವ್ಯಾಪಾರಿ ವಲಯ ನಿರ್ಮಾಣಗೊಂಡು ಬಹುತೇಕ ವರ್ಷ ಪೂರ್ಣಗೊಂಡಿದೆ. ಹಂತಹಂತವಾಗಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಮೇಲ್ಛಾವಣಿ, ನೆಲದ ಕೆಲಸ ಸೇರಿದಂತೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಆದರೂ ವ್ಯಾಪಾರ ಆರಂಭವಾಗದಿರುವುದು ಯಕ್ಷ ಪ್ರಶ್ನೆಯಾಗಿದೆ.

ಪಾಲಿಕೆಯಿಂದ 18 ಷರತ್ತುಗಳು
667 ಬೀದಿ ಬದಿ ವ್ಯಾಪಾರಸ್ಥರನ್ನು ಗುರುತಿಸುವ ಕೆಲಸ ಪಟ್ಟಣ ವ್ಯಾಪಾರಸ್ಥರ ಸಮಿತಿಯ ಮೂಲಕ ಈ ಹಿಂದೆಯೇ ನಡೆದಿತ್ತು. ಅವರಿಗೆ ವ್ಯಾಪಾರ ನಡೆಸಲು ಪಾಲಿಕೆ 18 ಷರತ್ತುಗಳನ್ನು ವಿಧಿಸಿದೆ. ಅವುಗಳನ್ನು ಪಾಲಿಸಿಕೊಂಡು ವ್ಯಾಪಾರಕ್ಕೆ ಮುಂದಾಗುವವರಿಗೆ ಗುರುತಿನ ಚೀಟಿ ನೀಡಿ ವ್ಯಾಪಾರಕ್ಕೆ ಅನುವು ಮಾಡಲಾಗುವುದು ಎಂದು ಪಾಲಿಕೆ ತಿಳಿಸಿದೆ.

ಸ್ಟಾಲ್‌ಗ‌ಳಲ್ಲಿ ಮೀಸಲಾತಿ
ಸ್ಟೇಟ್‌ಬ್ಯಾಂಕ್‌ ಬಳಿ ನಿರ್ಮಿಸಿರುವ ವಲಯದಲ್ಲಿ ಪರಿಶಿಷ್ಟ ಜಾತಿಯವರಿಗೆ 22, ಪರಿಶಿಷ್ಟ ಪಂಗಡದವರಿಗೆ 8 ಹಾಗೂ ಅಂಗವಿಕಲರಿಗೆ 7 ಸ್ಟಾಲ್‌ಗ‌ಳು ಸೇರಿದಂತೆ 37 ಸ್ಟಾಲ್‌ಗ‌ಳನ್ನು ಕಾಯ್ದಿರಿಸಲಾಗಿದೆ. ಉಳಿದವುಗಳನ್ನು ಚೀಟಿ ಎತ್ತುವ ಮೂಲಕ ಸ್ಟಾಲ್‌ಗ‌ಳನ್ನು ಹಿಂದಿನ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅವರ ಅವಧಿಯಲ್ಲಿ ವಿತರಿಸಲಾಗಿತ್ತು.

ಮೂಲ ಸೌಕರ್ಯ ಆಗಿದೆ/ಆಗಿಲ್ಲ!
ಬೀದಿಬದಿ ವ್ಯಾಪಾರಿಗಳು ಹೇಳುವ ಪ್ರಕಾರ ಮೂಲ ಸೌಕರ್ಯ ಕೊರತೆಯನ್ನು ಬೊಟ್ಟು ಮಾಡುತ್ತಿದ್ದಾರೆ. ನೀರಿನ ವ್ಯವಸ್ಥೆ ಸೇರಿ ಕೆಲವೊಂದು ಸೌಕರ್ಯ ಆಗಬೇಕಿದೆ. ಅವುಗಳು ಪೂರ್ಣಗೊಂಡ ಬಳಿಕವಷ್ಟೇ ವ್ಯಾಪಾರ ಆರಂಭಿಸುತ್ತೇವೆ. ಒಂದೊಮ್ಮೆ ವ್ಯಾಪಾರ ಆರಂಭಿಸಿದರೆ ಮತ್ತೆ ಪಾಲಿಕೆ ವ್ಯವಸ್ಥೆ ಮಾಡುವುದಿಲ್ಲ ಎನ್ನು ಆತಂಕ ಇದೆ ಎನ್ನುತ್ತಾರೆ. ಅಧಿಕಾರಿಗಳ ಪ್ರಕಾರ ಕೇಳಿದ ಸಂದರ್ಭದಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ತತ್‌ಕ್ಷಣ ಆರಂಭಿಸಲು ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11(1)

Mangaluru: ಪಾರಂಪರಿಕ ಕಟ್ಟಡ ಫಲಕಗಳಿಗೆ ಒದಗಲಿ ಶುಭಗಳಿಗೆ!

8

Hampankatta: ಕೆ.ಎಸ್‌.ರಾವ್‌ ರಸ್ತೆ; ಅಪಾಯಕಾರಿ ಕೇಬಲ್‌ ಛೇಂಬರ್‌

7

KSRTC ದಸರಾ ಪ್ಯಾಕೇಜ್‌ ಯಶಸ್ವಿ; 6,010 ಪ್ರವಾಸಿಗರು ಭಾಗಿ, ಕೊಲ್ಲೂರಿಗೆ ಭರ್ಜರಿ ಬೇಡಿಕೆ

6

Kaikamba: ಉಳಾಯಿಬೆಟ್ಟು ಸೇತುವೆಯಲ್ಲಿ ಬಸ್‌ ನಿಷೇಧ; ಟಿಪ್ಪರ್‌ಗಿಲ್ಲ ತಡೆ!

5

Mangaluru: ಮಹಾಕಾಳಿಪಡ್ಪು ರೈಲ್ವೇ ಕೆಳಸೇತುವೆ ಕಾಮಗಾರಿಗೆ ಗ್ರಹಣ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.