Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

ತ್ಯಾಜ್ಯದ ಬಗ್ಗೆ ನಿಗಾ ವಹಿಸುವ ಸಿಸಿ ಕೆಮರಾ 'ಬಂದ್‌'!

Team Udayavani, Sep 23, 2024, 2:43 PM IST

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

ಮಹಾನಗರ: ಮಂಗಳೂರು ನಗರದ ಸುಮಾರು 18 ಕಡೆಗಳಲ್ಲಿ  ಸೋಲಾರ್‌ ಆಧಾರಿತ ಸಿಸಿ ಕೆಮರಾಗಳಿವೆ ಆದೆ ಬಳಕೆಗಿಲ್ಲ. ಕೆಮರಾಗಳ ಮುಂದೆಯೇ ಕಸದ ರಾಶಿ ಬೀಳುತ್ತಿದ್ದು, ಪಾಲಿಕೆ ಲಕ್ಷಾಂತರ ರೂ. ಖರ್ಚು ಮಾಡಿದ ಹಣ ಉಪಯೋಗಕ್ಕೆ ಇಲ್ಲದಂತಾಗಿದೆ.

ನಾಲ್ಕು ವರ್ಷಗಳ ಹಿಂದೆ ನಗರದ ಸುಮಾರು 18 ಕಡೆ ಸಾರ್ವಜನಿಕ ರಸ್ತೆ ಪಕ್ಕದಲ್ಲಿ ಕಸ ಎಸೆಯುವುದನ್ನು ನಿಯಂತ್ರಿಸಲು  ಪಾಲಿಕೆಯು ಸೋಲಾರ್‌ ಪೋಲ್‌ ಕೆಮರಾಗಳನ್ನು ಅಳವಡಿಸಿತ್ತು. ಆರಂಭಿಕ ಹಂತದಲ್ಲಿ ಸಮರ್ಪಕವಾಗಿ ಕಾರ್ಯಾಚರಿಸುತ್ತಿದ್ದವು. ಅಪರೂಪಕ್ಕೆ ಕೆಲವರಿಗೆ ದಂಡ ವಿಧಿಸಲಾಗಿತ್ತು. ಆದರೆ ಇದೀಗ ಕೆಮರಾಗಳು ಕಾರ್ಯಾಚರಿಸುತ್ತಿಲ್ಲ ಎನ್ನುವುದಕ್ಕೆ ನಿತ್ಯ ಕೆಮರಾ ಮಂಭಾಗದಲ್ಲಿ ಬೀಳುತ್ತಿರುವ ಕಸದ ರಾಶಿಯೇ ಸಾಕ್ಷಿ!

ಸಿಮ್‌ ರೀಚಾರ್ಜ್‌ ಮಾಡದೆ ಕೆಮರಾ ಆಫ್‌!
ಸೋಲಾರ್‌ ಬೇಸ್ಡ್ ಪೋಲ್‌ ಕೆಮರಾಗಳನ್ನು ನಗರದ 18 ಕಡೆಗಳಲ್ಲಿ ಅಳವಡಿಸಲಾಗಿದೆ. ಇಂಟರ್‌ನೆಟ್‌ಗಾಗಿ ಸಿಮ್‌ ಅಳವಡಿಸಲಾಗಿದ್ದು, ಪ್ರತೀ ತಿಂಗಳು ಪಾಲಿಕೆ ಮೂಲಕ ಬಿಲ್‌ ಪಾವತಿಸಬೇಕಾಗುತ್ತದೆ. ಕಳೆದ ಮೂರು ತಿಂಗಳಿನಿಂದ ಬಿಲ್‌ ಪಾವತಿಯಾಗಿಲ್ಲ ಎನ್ನಲಾಗಿದ್ದು, ಇದರಿಂದಾಗಿ ಸಂಪರ್ಕ ಕಡಿತಗೊಳಿಸಲಾಗಿದೆ.

2 ಕೆಮರಾ ಕಳವು!
ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು ಅಳವಡಿಸಲಾಗಿದ್ದ ಕೆಮರಾಗಳ ಪೈಕಿ ಎರಡು ಕೆಮರಾಗಳು ಕಳವಾಗಿವೆ. ಸುರತ್ಕಲ್‌ ಹಾಗೂ ಕಾವೂರು ಸಮೀಪದಲ್ಲಿ ಅಳವಡಿಸಿದ್ದ ಕೆಮರಾ ಕಳವು ಮಾಡಲಾಗಿದೆ. ಈ ಬಗ್ಗೆ ಪಾಲಿಕೆ ಮೂಲಕ ಸ್ಥಳೀಯ ಪೊಲೀಸರಿಗೆ ದೂರು ನೀಡಲಾಗಿದೆ.

ಪ್ರತೀ ಕೆಮರಾ ಅಳವಡಿಕೆಗೆ ಪಾಲಿಕೆ ಸರಿಸುಮಾರು 60 ಸಾವಿರ ರೂ. ಖರ್ಚು ಮಾಡಿದ್ದು, ಒಟ್ಟು 10.80 ಲಕ್ಷ ರೂ. ವ್ಯಯಿಸಿದೆ.

ಬಂದಿ ನೇಮಿಸಲಾಗುವುದು
ಕೆಮರಾಗಳ ಸಿಮ್‌ಗಳಿಗೆ ಮಾಸಿಕವಾಗಿ ಬಿಲ್‌ ಪಾವತಿಸಲಾಗುತ್ತಿದೆ. ತಾಂತ್ರಿಕ ಕಾರಣಗಳಿಂದ ಬಿಲ್‌ ಪಾವತಿ ಬಿಳಂಬವಾಗಿದ್ದು, ಸಂಪರ್ಕ ಕಡಿತವಾಗಿದೆ. ಮುಂದಿನ ದಿನಗಳಲ್ಲಿ ವಾರ್ಷಿಕವಾಗಿ ಬಿಲ್‌ ಪಾವತಿಗೆ ಕ್ರಮವಹಿಸಲಾಗುವುದು. ವೀಡಿಯೋ ಮಾನಿಟರ್‌ ಮಾಡಲು ಸಿಬಂದಿ ನೇಮಿಸಲಾಗುವುದು.
ದಯಾನಂದ ಪೂಜಾರಿ ಪರಿಸರ ಅಭಿಯಂತ

ಸಾಂಕ್ರಾಮಿಕ ರೋಗ ಭೀತಿ
ಸಾರ್ವಜನಿಕ ಪ್ರದೇಶಗಳಲ್ಲಿ ಕಸ ರಾಶಿ ಹಾಕುವುದರಿಂದ ಪರಿಸರ ದುರ್ವಾಸನೆಯಿಂದ ಕೂಡುತ್ತದೆ. ಸಾಂಕ್ರಾಮಿಕ ರೋಗ ಭೀತಿಯೂ ಇದೆ. ನಿಗಾ ವಹಿಸಲು ಅಳವಡಿಸಲಾಗಿರುವ ಕೆಮರಾಗಳ ಮುಂದೆಯೇ ತ್ಯಾಜ್ಯ ಎಸೆಯುತ್ತಿರುವುದು ವಿಪರ್ಯಾಸ. ಪಾಲಿಕೆ ನಿರ್ಲಕ್ಷ್ಯ ವಹಿಸದೆ ಕ್ರಮಕೈಗೊಳ್ಳಬೇಕು.
ನಿತಿನ್‌ ಕುಮಾರ್‌, ಮಂಗಳೂರು ನಿವಾಸಿ

ಮಾನಿಟರಿಂಗ್‌ ತಂಡವಿಲ್ಲದೆ ನಿಷ್ಕ್ರಿಯ
ಬ್ಲ್ಯಾಕ್‌ ಸ್ಪಾಟ್‌ಗಳನ್ನು ಗುರುತಿಸಿ ಕಸ ಎಸೆಯುವವರಿಗೆ ದಂಡ ವಿಧಿಸುವ ಮೂಲಕ ಬೀದಿಯಲ್ಲಿ ಕಸ ಎಸೆಯುವುದನ್ನು ನಿಯಂತ್ರಿಸಲು ಪಾಲಿಕೆ ಒಂದು ಹಂತದಲ್ಲಿ ಕ್ರಮ ವಹಿಸಿದ್ದರೂ ಕೆಮರಾ ಅಳವಡಿಕೆಯ ಬಳಿಕ ತ್ಯಾಜ್ಯ ಎಸೆಯುವುದು ನಿಂತಿಲ್ಲ. ಪಾಲಿಕೆಯಿಂದ ದಂಡ ವಿಧಿಸುವ ಪ್ರಕ್ರಿಯೆಯೂ ನಡೆಯುತ್ತಿಲ್ಲ. ಪಾಲಿಕೆಯಲ್ಲಿ ಸಮರ್ಪಕವಾಗಿ ಮಾನಿಟರಿಂಗ್‌ ನಡೆಸಲು ತಂಡವಿಲ್ಲದ ಕಾರಣ ದಂಡ ವಿಧಿಸುವ ಕೆಲಸವಾಗುತ್ತಿಲ್ಲ.

ಪೌರ ಕಾರ್ಮಿಕರಿಂದ ತೆರವು
ಪ್ರತಿನಿತ್ಯ ಸಾರ್ವಜನಿಕರು ವಿವಿಧ ಕಾರಣಗಳನ್ನು ನೀಡಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ರಾಶಿ ಹಾಕುತ್ತಾರೆ. ಅಂತಹ ಬ್ಲ್ಯಾಕ್‌ ಸ್ಪಾಟ್‌ಗಳನ್ನು ಗುರುತಿಸಿ ಸಿಸಿ ಕೆಮರಾಗಳನ್ನು ಅಳವಡಿಸುವ ಕೆಲಸ ಪಾಲಿಕೆ ಮೂಲಕ ನಡೆಸಲಾಗಿದೆ. ಆದರೆ ಅವುಗಳ ಸುತ್ತ ಕಸ ರಾಶಿ ಹಾಕುತ್ತಿದ್ದು, ಸ್ವಚ್ಚತಾ ಕೆಲಸ ಮಾಡುವ ಪೌರ ಕಾರ್ಮಿಕರು ನಿತ್ಯ ಈ ರಾಶಿಯನ್ನು ತೆರವು ಮಾಡುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾವಂತರೇ ಕಸ ಎಸೆಯುತ್ತಿರುವುದು ವಿಪರ್ಯಾಸ.

ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

10

Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್‌ ಮಾಲೂ ಇದೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Aditya Shashikumar movie rashi

Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.