ಬಲಿಪ ನಾರಾಯಣ ಭಾಗವತರಿಗೆ ಮಣಿಕೃಷ್ಣ ಸ್ವಾಮಿ ಅಕಾಡೆಮಿ ಸಮ್ಮಾನ


Team Udayavani, Nov 7, 2019, 2:56 AM IST

qq-23

ಮೂಡುಬಿದಿರೆ: ಯಕ್ಷಗಾನ ಸಂಗೀತಕ್ಕೆ ನೀಡಿರುವ ಕೊಡುಗೆಯನ್ನು ಮನ್ನಿಸಿ ಹಿರಿಯ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಾಗವತ ಅವರನ್ನು ನೂಯಿಯ ಭಾಗವತರ ಮನೆಯಂಗಳದ “ಬಲಿಪ ಭವನ’ದಲ್ಲಿ ಮಂಗಳೂರಿನ ಮಣಿಕೃಷ್ಣ ಸ್ವಾಮಿ ಅಕಾಡೆಮಿ ವತಿಯಿಂದ ಬುಧವಾರ ಸಮ್ಮಾನಿಸಲಾಯಿತು.

ಮಣಿ ಕೃಷ್ಣಸ್ವಾಮಿ ಅಕಾಡೆಮಿ ಏರ್ಪಡಿಸಿರುವ “ರಾಗ ಸುಧಾ ರಸ -2019′ ರಾಷ್ಟ್ರೀಯ ಸಂಗೀತೋತ್ಸವದ ಪೂರ್ವಭಾವಿಯಾಗಿ ನಡೆದ ಈ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ವಹಿಸಿದ್ದರು. ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಬಲಿಪ ಭಾಗವತರನ್ನು ಅಭಿನಂದಿಸಿ, ಮಾತನಾಡಿದರು.

ಸಮ್ಮಾನಿಸುವುದು ಇದೇ ಮೊದಲು
ಬಲಿಪ ಭಾಗವತರು ಐವತ್ತು ರಾಗಗಳ ಗಟ್ಟಿ ಭಾಗವತರು. ಭಾಗವತಿಕೆಯ ಮೂಲಕ ಯಕ್ಷಗಾನ ಸಂಗೀತಕ್ಕೆ ಮಹತ್ವದ ಕೊಡುಗೆ ನೀಡಿದವರು. ಯಕ್ಷಗಾನ ಕಲಾವಿದರೊಬ್ಬರಿಗೆ ಅಭಿಮಾನಿಗಳು ಭವನವೊಂದನ್ನು ನಿರ್ಮಿಸಿಕೊಟ್ಟಿರುವುದು ಸರ್ವ ಪ್ರಥಮ; ಸಂಗೀತ ಅಕಾಡೆಮಿಯೊಂದು ಯಕ್ಷಗಾನ ಭಾಗವತರನ್ನು ಸಮ್ಮಾನಿಸುತ್ತಿರುವುದೂ ಇದೇ ಮೊದಲು. ಇದು ರಾಷ್ಟ್ರಪ್ರಶಸ್ತಿಗೆ ಸಮ ಎಂದು ಡಾ| ಜೋಶಿ ಭಿಪ್ರಾಯಪಟ್ಟರು.

ಪುಸ್ತಕರೂಪದಲ್ಲಿ ಬಲಿಪರು
ಮಣಿ ಕೃಷ್ಣ ಸ್ವಾಮಿ ಅಕಾಡೆಮಿಯ ಅಧ್ಯಕ್ಷ ಕ್ಯಾ| ಗಣೇಶ್‌ ಕಾರ್ಣಿಕ್‌, ಮಾತನಾಡಿ, ಅದ್ಭುತ ಪ್ರತಿಭೆ ಬಲಿಪ ನಾರಾಯಣ ಭಾಗವತರನ್ನು ಸಂಪೂರ್ಣವಾಗಿ ಬಲ್ಲ ಡಾ| ಜೋಶಿಯಂಥವರು ಪುಸ್ತಕ ರೂಪದಲ್ಲಿ ಕಟ್ಟಿಕೊಡಬೇಕು’ ಎಂದು ವಿನಂತಿಸಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಬಲಿಪರ ಕುರಿತಾದ ಅಧ್ಯಯನ, ಪುಸ್ತಕ ಪ್ರಕಟನೆಯೇ ಮೊದಲಾದ ಕಾರ್ಯಗಳಿಗೆ ಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದರು.

ಅತಿಥಿಗಳಾದ ನಾದಸ್ವರ ಕಲಾವಿದ ನಾಗೇಶ್‌ ಎ. ಬಪ್ಪನಾಡು, ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಹಾಗೂ ಶ್ರೀಪತಿ ಭಟ್‌ ಅವರು ಬಲಿಪ ಭಾಗವತರನ್ನು ಅಭಿವಂದಿಸಿ ಮಾತನಾಡಿದರು. ಬಲಿಪರ ಮೊಮ್ಮಕ್ಕಳು ವಿನಾಯಕ ಸ್ತುತಿಗೈದರು. ಬಲಿಪರ ಕೂಡುಕುಟುಂಬದ 20 ಮಂದಿ ಸದಸ್ಯರೆಲ್ಲರೂ ಒಳಗೊಂಡಂತೆ ಅಭಿಮಾನಿಗಳು ಪಾಲ್ಗೊಂಡಿದ್ದರು. ಕೀರ್ತನಾ ರಾವ್‌ ಕೀರ್ತನೆ ಹಾಡಿದರು.

ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ರಾವ್‌ ಸ್ವಾಗತಿಸಿ, 15 ವರ್ಷದ ಕೊನೆಯ ಕಾರ್ಯಕ್ರಮವಾಗಿ ಬಲಿಪರ ಸಮ್ಮಾನ ಕಾರ್ಯಕ್ರಮ ಏರ್ಪಡಿಸಿದ್ದು 16ನೇ ವರ್ಷದ ಪ್ರಾರಂಭದ ಕಾರ್ಯಕ್ರಮವಾಗಿ ಮಂಗಳೂರಿನಲ್ಲಿ ರಾಷ್ಟ್ರೀಯ ಸಂಗೀ ತೋತ್ಸವ ಏರ್ಪಡಿಸಲಾಗಿದೆ ಎಂದರು.

ಕಲೆ ಹೋಲಿಕೆ ಸಲ್ಲ
ಬ್ರಹ್ಮಾಂಡವೆಂಬಂತೆ ಪ್ರಚಾರ ಮಾಡುತ್ತಿರುವ ವರ್ತಮಾನ ಕಾಲದಲ್ಲಿ ಬಲಿಪರು ಏರಿದ ಎತ್ತರವನ್ನು ನಾವೆಲ್ಲ ಬೆರಗುಗಣ್ಣುಗಳಿಂದ ನೋಡುತ್ತಿದ್ದೇವೆ. ಪ್ರತಿಯೊಂದು ಕಲೆಯೂ ತನ್ನದೇ ಆದ ವೈಶಿಷ್ಟ ಮಾನ್ಯ. ಒಂದು ಕಲೆ ಯನ್ನು ಮತ್ತೂಂದರ ಜತೆ ಹೋಲಿ ಸುವುದು ಸಲ್ಲ ಎಂದು ಡಾ| ಜೋಶಿ ಹೇಳಿದರು.

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.