ರಸ್ತೆಯಲ್ಲೇ ಗಲೀಜು ನೀರು; ತ್ವರಿತವಾಗಲಿ ಕಾಮಗಾರಿ


Team Udayavani, May 25, 2022, 11:07 AM IST

messy-water

ಮಹಾನಗರ: ಒಳಚರಂಡಿ ಕಾಮಗಾರಿಗಾಗಿ ಬೆಂದೂರ್‌ವೆಲ್‌ನಲ್ಲಿ ಮ್ಯಾನ್‌ಹೋಲ್‌ ಅಗೆದು ಹಾಕಿರುವ ಕಾರಣದಿಂದ ಗಲೀಜು ನೀರು ರಸ್ತೆಯುದ್ದಕ್ಕೂ ಹರಿದು ವಾಹನ ಸವಾರರು, ಪಾದಾಚಾರಿಗಳಿಗೆ ಸಮಸ್ಯೆಯಾಗಿದೆ. ನೀರು ತುಂಬಿ ಕೊಂಡ ಪ್ರದೇಶ ಮಿನಿ ಈಜುಕೊಳದಂತಿದ್ದು, ಕಾಮಗಾರಿ ನಿಧಾನವಾಗಿ ಸಾಗುತ್ತಿದೆ.

ಬೆಂದೂರ್‌ವೆಲ್‌, ಕಂಕನಾಡಿ ಪ್ರದೇಶದಲ್ಲಿ ತುಂಬಾ ಹಳೆಯ ಒಳಚರಂಡಿ ಪೈಪ್‌ ಹಾದುಹೋಗುತ್ತಿದ್ದು, ಇದೇ ಕಾರಣಕ್ಕೆ ಪೈಪ್‌ ಬಿರುಕು ಬಿಟ್ಟಿತ್ತು. ಪರಿಣಾಮ ಕಳೆದ ಕೆಲವು ದಿನಗಳಿಂದ ಗಲೀಜು ನೀರು ರಸ್ತೆಯಲ್ಲೇ ಹರಿಯುತ್ತಿದೆ. ಈಗಾಗಲೇ ಕಾಮಗಾರಿ ಉದ್ದೇಶಕ್ಕೆ ರಸ್ತೆ ಅಗೆಯಲಾಗಿದ್ದು, ಅಗೆದ ಪ್ರದೇಶವಿಡೀ ಪೂರ್ತಿ ಗಲೀಜು ನೀರಿ ನಿಂದ ಆವೃತವಾಗಿದೆ. ಸದ್ಯ ಆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸವಾ ರರು ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿಗಾಗಿ ಅಗೆದ ಪ್ರದೇಶದಿಂದ ರಸ್ತೆ ಮಟ್ಟದವರೆಗೆ ಕೊಳಚೆ ನೀರು ಇದ್ದು, ವಾಹನಗಳು ಅಪಘಾತ ಉಂಟಾಗುವ ಸಾಧ್ಯತೆ ಎದುರಾಗಿದೆ.

ಕಾಮಗಾರಿ ಮತ್ತು ಅಪಾಯದ ಕಾರಣದಿಂದಾಗಿ ಈ ಪ್ರದೇಶದ ಸುತ್ತಲೂ ಬ್ಯಾರಿಕೇಡ್‌ ಅಳವಡಿಸಲಾಗಿದೆ. ಆದರೆ ಬ್ಯಾರಿಕೇಡ್‌ ಕೂಡ ಕಾಮಗಾರಿ ಪ್ರದೇಶದ ಗುಂಡಿಗೆ ಬಿದ್ದಿದ್ದು, ರಾತ್ರಿ ವೇಳೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ತತ್‌ಕ್ಷಣ ಗಮನಹರಿಸಿ ಕಾಮಗಾರಿಗೆ ವೇಗ ನೀಡಬೇಕು ಎನ್ನುತ್ತಾರೆ ಸಾರ್ವಜನಿಕರು.

ಸ್ಥಳೀಯ ಮನಪಾ ಸದಸ್ಯ ನವೀನ್‌ ಡಿಸೋಜಾ ಅವರು ಉದಯವಾಣಿ ಸುದಿನ ಕ್ಕೆ ಪ್ರತಿಕ್ರಿಯಿಸಿ, ಈ ಪ್ರದೇಶದಲ್ಲಿ ಒಳಚರಂಡಿ ಪೈಪ್‌ಲೈನ್‌ ಒಡೆದಿದ್ದು, ಸದ್ಯ ದುರಸ್ತಿ ಕಾಮಗಾರಿ ಸಾಗುತ್ತಿದೆ. ಪಕ್ಕದಲ್ಲಿಯೇ ನೀರಿನ ಮುಖ್ಯ ಪೈಲ್‌ಲೈನ್‌ ಕೂಡ ಹಾದುಹೋಗುವುದರಿಂದ ನಾಜೂಕಾಗಿ ಕೆಲಸ ನಡೆಸಬೇಕು. ನೀರಿನ ಪೈಪ್‌ಲೈನ್‌ಗೆ ಹಾನಿ ಉಂಟಾದರೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು. ಇದು ಸದಾ ಜನನಿಬಿಡ ಪ್ರದೇಶವಾದ ಕಾರಣ ದಿನದಿಡೀ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ಅಲ್ಲದೆ, ಇತ್ತೀಚೆಗೆ ಮಳೆ ಬಂದ ಕಾರಣ ಕಾಮಗಾರಿ ತುಸು ವಿಳಂಬವಾಗಿತ್ತು. ಸದ್ಯ ಕಾಮಗಾರಿ ವೇಗ ಪಡೆದುಕೊಂಡಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಕಾಮಗಾರಿಗೆ ವೇಗ

ಬೆಂದೂರ್‌ವೆಲ್‌ ಬಳಿ ಒಳಚರಂಡಿ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿ ಗಲೀಜು ನೀರು ರಸ್ತೆಯಲ್ಲಿ ಹರಿಯುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳ ಜತೆ ಈ ಕುರಿತು ಚರ್ಚೆ ನಡೆಸಿದ್ದು, ಕಾಮಗಾರಿಗೆ ವೇಗ ನೀಡುವಂತೆ ಸೂಚನೆ ನೀಡಿದ್ದೇನೆ. -ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.