ಸರಕಾರಿ ಕಚೇರಿ ಆವರಣ ಸುತ್ತಮುತ್ತ ಸೊಳ್ಳೆ ಉತ್ಪತ್ತಿ ಭೀತಿ!


Team Udayavani, Jul 31, 2019, 5:03 AM IST

22

ಮಹಾನಗರ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಸರಕಾರಿ ಕಚೇರಿಗಳ ಆವರಣದಲ್ಲಿಯೂ ಸ್ವಚ್ಛತೆ ಕಾಪಾಡುವ ಜತೆಗೆ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸುವಂತೆ ಈಗಾಗಲೇ ಆರೋಗ್ಯ ಇಲಾಖೆಯು ಸುತ್ತೋಲೆ ಹೊರಡಿಸಿದೆ.

ನಗರದಲ್ಲಿ ಡೆಂಗ್ಯೂ ಕಾಯಿಲೆ ವ್ಯಾಪಕವಾಗಿದ್ದರೂ ಕೂಡ ಕೆಲವೊಂದು ಸರಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಅಥವಾ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ಲಾರ್ವಾ ನಿರ್ಮೂಲನೆ ಕಡೆಗೆ ಅಷ್ಟೊಂದು ಗಮನಹರಿಸಿದಂತೆ ಕಾಣಿಸುತ್ತಿಲ್ಲ. ಇನ್ನೊಂದೆಡೆ ಮನೆಗಳಲ್ಲಿ ಡೆಂಗ್ಯೂ ಉತ್ಪತ್ತಿಗೆ ಕಾರಣವಾಗುವ ತಾಣಗಳು ಕಂಡುಬಂದರೆ ಅಧಿಕಾರಿಗಳು ದಂಡ ಹಾಕುತ್ತಿದ್ದಾರೆ. ಇತ್ತ ಸರಕಾರಿ ಕಚೇರಿಗಳಿರುವ ಕಟ್ಟಡದ ಸುತ್ತಮುತ್ತ ಸ್ವಚ್ಛತೆ ಕಾಪಾಡುವಲ್ಲಿ ಆರೋಗ್ಯ ಇಲಾಖೆ ಅಥವಾ ಜಿಲ್ಲಾಡಳಿತದ ಕಟ್ಟುನಿಟ್ಟಿನ ನಿರ್ದೇಶನ ನಿಯಮ ಪಾಲನೆಯಾಗುತ್ತಿಲ್ಲ ಎನ್ನುವುದು ವಾಸ್ತವ. ಆ ಮೂಲಕ ಸರಕಾರಿ ಕಚೇರಿಗಳ ಆವರಣದಲ್ಲಿನ ನೈರ್ಮಲ್ಯದ ಬಗ್ಗೆ ಸುದಿನ ನಡೆಸಿರುವ ರಿಯಾಲಿಟಿ ಚೆಕ್‌ ಇಲ್ಲಿದೆ.

ಮಹಾನಗರ ಪಾಲಿಕೆ ಅಧಿಕಾರಿಗಳು ಡೆಂಗ್ಯೂ ರೋಗ ನಿರ್ಮೂಲನೆ ಮಾಡುವ ಸಲುವಾಗಿ ಈಗಾಗಲೇ ತಂಡಗಳನ್ನು ರಚನೆ ಮಾಡಿ ಕಾರ್ಯಾಚರಣೆ ನಡೆಸುತ್ತಿದ್ದು, ಇತ್ತ ಲಾಲ್ಬಾಗ್‌ನಲ್ಲಿರುವ ಮಹಾನಗಗರ ಪಾಲಿಕೆ ಕಚೇರಿಯಲ್ಲಿಯೇ ಡೆಂಗ್ಯೂ ರೋಗದ ಭೀತಿ ಇದೆ.

ಪಾಲಿಕೆ ಕಚೇರಿಯ ಹಿಂಭಾಗದಲ್ಲಿಯೇ ಡೆಂಗ್ಯೂ ಉತ್ಪತ್ತಿ ಮಾಡುವ ಸೊಳ್ಳೆಗಳ ತಾಣವಾಗುತ್ತಿರುವುದು ವಿಪರ್ಯಾಸ. ಪಾಲಿಕೆ ಹಿಂಭಾಗ ಕೆಲವು ವರ್ಷಗಳಿಂದ ಹಳೆಯ ಕಾಲದ ಗುಜರಿ ವಾಹನಗಳಿವೆ. ವಾಹನಗಳ ಟಯರ್‌ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುವ ಸಾಧ್ಯತೆಗಳಿದ್ದರೂ ಅವುಗಳನ್ನು ತೆರವು ಮಾಡಿಲ್ಲ. ಪಾಲಿಕೆ ಹಿಂಭಾಗದಲ್ಲಿ ನಿರುಪಯುಕ್ತ ಟಯರ್‌ಗಳನ್ನು ಹಾಗೇ ಇಡಲಾಗಿದೆ.

ಉಪಯೋಗವಿಲ್ಲದ ದೊಡ್ಡದಾದ ಸಿಂಟೆಕ್‌ ಟ್ಯಾಂಕ್‌ ಒಂದನ್ನು ಪಾಲಿಕೆ ಹಿಂಭಾಗದಲ್ಲಿ ಇರಿಸಲಾಗಿದ್ದು, ಇವುಗಳಿಗೆ ಮುಚ್ಚಳ ಕೂಡ ಅಳವಡಿಸಲಿಲ್ಲ. ಇದೇ ಕಾರಣಕ್ಕೆ ಇವುಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುವ ಸಂಭವವಿದೆ. ಅಲ್ಲೇ ಪಕ್ಕದಲ್ಲಿ ಕಾಗದ ರಾಶಿ, ಪ್ಲಾಸ್ಟಿಕ್‌ಗಳು, ಸಿಮೆಂಟ್‌ಗಳನ್ನು ಹಾಗೇ ಬಿಡಲಾಗಿದೆ. ಇವುಗಳಲ್ಲಿ ನೀರು ನಿಲ್ಲುವ ಸಂಭವವಿದ್ದು ಪಾಲಿಕೆ ಕೂಡಲೇ ಇತ್ತ ಗಮನಹರಿಸಬೇಕಿದೆ. ದಿನಂಪ್ರತಿ ನೂರಾರು ಮಂದಿ ಸರಕಾರಿ ಕೆಲಸಗಳಿಗೆಂದು ಬರುವ ಮಿನಿ ವಿಧಾನಸೌಧ ಆವರಣದಲ್ಲಿ ನೀರು ನಿಂತಿದೆ. ಅಲ್ಲಿನ ಪಾರ್ಕಿಂಗ್‌ ಜಾಗದಲ್ಲಿ ಸಣ್ಣ ಕಾಂಕ್ರೀಟ್ ಕಣಿ ಇದ್ದು ಇದರಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ರೋಗಗಳಿಗೆ ಆಹ್ವಾನ ನೀಡುತ್ತಿದೆ. ಆವರಣದ ಹಿಂಬದಿ ಉಪಯೋಗವಿಲ್ಲದ ಸಿಮೆಂಟ್ ಶೀಟ್‌ಗಳನ್ನು ಇಡಲಾಗಿದ್ದು, ಅವುಗಳಲ್ಲಿ ನೀರು ನಿಲ್ಲುತ್ತಿದೆ. ಗೋಣಿ ಚೀಲಗಳು, ರಟ್ಟುಗಳು, ಬಾಟಲಿಗಳು ಬಿದ್ದಿದ್ದು, ಅವುಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದೆ. ಜಿಲ್ಲಾಧಿಕಾರಿ ಕಚೇರಿ ಆವರಣದ ಕೆಲವು ಕಡೆಗಳಲ್ಲಿ ಮಾತ್ರ ನಿಲ್ಲುತ್ತಿದೆ. ಉಳಿದಂತೆ ಆವರಣವನ್ನು ಸ್ವಚ್ಛಗೊಳಿಸಲಾಗಿದೆ. ನಗರದ ಪ್ರಮುಖ ಭಾಗಗಳಲ್ಲಿ ಹಳೆಯ ಉಪಯೋಗ ಶೂನ್ಯವಾದ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗಿದೆ. ಇವುಗಳ ಟಯರ್‌ಗಳಲ್ಲಿ, ವಾಹನಗಳ ಬಿಡಿ ಭಾಗಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಗಮನಹರಿಸಬೇಕಿದೆ. ನಗರದ ಬಹುತೇಕ ಗ್ಯಾರೇಜ್‌ ಆವರಣಗಳಲ್ಲಿ ತುಕ್ಕು ಹಿಡಿದ ಉಪಯೋಗ ಶೂನ್ಯ ವಾಹನಗಳನ್ನು ನಿಲುಗಡೆ ಮಾಡಲಾಗಿದ್ದು, ಬಹುತೇಕ ಸರಕಾರಿ ಕಚೇರಿಗಳ ಆವರಣದಲ್ಲೇ ಉಪಯೋಗ ಶೂನ್ಯ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ.

ಮಹಾನಗರ ಪಾಲಿಕೆ ಆವರಣ, ಅರಣ್ಯ ಇಲಾಖೆ ಕಟ್ಟಡ ಸಹಿತ ಸರಕಾರಿ ಕಚೇರಿಗಳ ಆವರಣಗಳಲ್ಲೇ ತುಕ್ಕು ಹಿಡಿದ ವಾಹನಗಳು ನಿಲುಗಡೆಯಾಗಿವೆ. ಪೊಲೀಸ್‌ ಠಾಣೆ ಆವರಣಗಳಲ್ಲೇ ಹಳೆ ವಾಹನಗಳ ಸಾಲೇ ಇದೆ. ನಗರದ ಬಹುತೇಕ ಪೊಲೀಸ್‌ ಠಾಣೆ ಆವರಣ ಸೀಸ್‌ ಮಾಡಿದ ವಾಹನಗಳನ್ನು ನಿಲ್ಲಿಸಲು ಸ್ಥಳವಕಾಶದ ಕೊರತೆಯಿಂದ ಠಾಣೆಯ ಆಸುಪಾಸಲ್ಲಿ ವಾಹನಗಳನ್ನು ಪಾರ್ಕ್‌ ಮಾಡುತ್ತಿದ್ದಾರೆ.

ಕದ್ರಿ ಪಾರ್ಕ್‌ ಕಾರಂಜಿಗೆ ಕೊಳಕ್ಕೆ ಗಪ್ಪಿ ಮೀನು
ಕದ್ರಿಪಾರ್ಕ್‌ನಲ್ಲಿ ಕೆಲವೊಂದು ಕಡೆಗಳಲ್ಲಿ ಮಳೆ ನೀರು ನಿಲ್ಲುತ್ತಿದೆ. ಕದ್ರಿ ಪಾರ್ಕ್‌ ಒಳಗಡೆ ಇರುವ ಹಳೆಯ ಸಂಗೀತ ಕಾರಂಜಿ ಮತ್ತು ಕದ್ರಿ ಜಿಂಕೆ ಉದ್ಯಾನವನದ ಒಳಗೆ ಇರುವ ಸಂಗೀತ ಕಾರಂಜಿ ಕೊಳ ಟ್ಯಾಂಕ್‌, ನೀರಿನ ಕುಂಡಗಳಿಗೆ ಗಪ್ಪಿ ಮೀನು ಬಿಡಲಾಗಿದೆ.

‘ಉದಯವಾಣಿ ಸುದಿನ’ ತಂಡವು ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನಸೌಧ, ನೂತನ ತಾಲೂಕು ಪಂಚಾಯತ್‌ ಕಚೇರಿ, ಕದ್ರಿ ಪಾರ್ಕ್‌, ನಗರದ ಕೆಲವೊಂದು ಪೊಲೀಸ್‌ ಠಾಣೆ ಆವರಣಗಳಲ್ಲಿ ರಿಯಾಲಿಟಿ ಚೆಕ್‌ ನಡೆಸಿದೆ.

ಸುತ್ತೋಲೆ ನೀಡಲಾಗಿದೆ
ಸರಕಾರಿ ಕಚೇರಿಗಳನ್ನು ಶುಚಿಯಾಗಿಡಬೇಕು ಎಂದು ಆರೋಗ್ಯ ಇಲಾಖೆಯಿಂದ ಈಗಾಗಲೇ ಎಲ್ಲ ಕಚೇರಿಗಳಿಗೆ ಸುತ್ತೋಲೆಯನ್ನು ಕಳುಹಿಸಿದ್ದೇನೆ. ಉಪಯೋಗವಿಲ್ಲದ ಟಯರ್‌ಗಳಿಂದಲೂ ಡೆಂಗ್ಯೂ ರೋಗಕ್ಕೆ ಕಾರಣವಾಗುವ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ.

– ಡಾ| ರಾಮಕೃಷ್ಣ ರಾವ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಗಪ್ಪಿ ಮೀನುಗಳನ್ನು ಬಿಡಲಾಗಿದೆ
ಕದ್ರಿ ಪಾರ್ಕ್‌ ಒಳಗಡೆ ಯಾವೆಲ್ಲ ಪ್ರದೇಶಗಳಲ್ಲಿ ನೀರು ನಿಲ್ಲುತ್ತದೆ ಎಂಬುವುದನ್ನು ಪತ್ತೆ ಹಚ್ಚಿ ಗಪ್ಪಿ ಈಗಾಗಲೇ ಮೀನುಗಳನ್ನು ಬಿಡಲಾಗಿದೆ. ಇನ್ನು, ರೈಲ್ವೇ ಟ್ರ್ಯಾಕ್‌ ಸಿಮೆಂಟ್ ಆದ್ದರಿಂದ ಕೆಲವು ಕಾಲ ಮಳೆ ಬಂದಾಗ ನೀರು ನಿಲ್ಲುತ್ತದೆ. ಆ ಜಾಗಗಳಿಗೆ ಮರಳು ಹಾಕಲು ಅಧಿಕಾರಿಗಳಿಗೆ ಸೂಚಿಸುತ್ತೇನೆ.

– ಎಚ್.ಆರ್‌. ನಾಯಕ್‌, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ

ಎಲ್ಲೆಲ್ಲಿ ರಿಯಾಲಿಟಿ ಚೆಕ್‌?
‘ಉದಯವಾಣಿ ಸುದಿನ’ ತಂಡವು ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿ ಕಚೇರಿ, ಮಿನಿ ವಿಧಾನಸೌಧ, ನೂತನ ತಾಲೂಕು ಪಂಚಾಯತ್‌ ಕಚೇರಿ, ಕದ್ರಿ ಪಾರ್ಕ್‌, ನಗರದ ಕೆಲವೊಂದು ಪೊಲೀಸ್‌ ಠಾಣೆ ಆವರಣಗಳಲ್ಲಿ ರಿಯಾಲಿಟಿ ಚೆಕ್‌ ನಡೆಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.