Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Team Udayavani, Oct 6, 2024, 2:56 PM IST
ಮಂಗಳೂರು: ನಾಪತ್ತೆಯಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸೋದರ ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ.
ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಳೂರು ಸೇತುವೆ ಬಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.
ಮುಳುಗುತಜ್ಞ ಈಶ್ಚರ ಮಲ್ಪೆ ತಂಡ ಸಹಿತ ಹಲವು ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ನಿರತವಾಗಿವೆ. ಮಾಜಿ ಶಾಸಕ ಮೊಯ್ದಿನ್ ಬಾವಾ ಕೂಡ ಸ್ಥಳದಲ್ಲಿದ್ದು ಕಾರ್ಯಾಚರಣೆ ಪರಿಶೀಲಿಸಿದರು.
ಒಂದು ಹಂತದ ಹುಡುಕಾಟದ ನಡೆಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ನಾವು ಏಳು ಜನ ಆಳಕ್ಕೆ ಮುಳುಗಿ ಕಾರ್ಯಾಚರಣೆ ನಡೆಸಿದ್ದೇವೆ, ಆದರೆ ಎಲ್ಲೂ ಕೂಡ ಪತ್ತೆಯಾಗಿಲ್ಲ ಎಂದರು.
ಸದ್ಯಕ್ಕೆ 100 ಮೀಟರ್ ಸುತ್ತುತ್ತಾ ಹುಡುಕಾಟ ನಡೆಸಲಾಗಿದೆ. ಸೇತುವೆ ಆಳಕ್ಕೆ ಇಳಿದು ಹುಡುಕಾಟ ನಡೆಸಿದ್ದೇವೆ. ಸೇತುವೆ ಕಾಮಗಾರಿ ನಡೆಯುತ್ತಿದ್ದು ಕೆಳಗೆ ಕಬ್ಬಿಣದ ಸರಳು, ಸಿಮೆಂಟ್ ಚೀಲಗಳಿವೆ. ಕೆಳಗೆ ಕತ್ತಲೆ ಇರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಹೇಳಿದರು.
ಮುಂದುವರೆದು ಮಾತನಾಡಿ ಇಲ್ಲಿ ಬಿದ್ದಿದ್ದರೆ ಇಲ್ಲೇ ಸಿಗಬೇಕು, ಇಷ್ಟು ಬೇಗ ಸಮುದ್ರ ಸೇರುವುದಿಲ್ಲ. ಎಲ್ಲಾ ತಂಡಗಳು ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದ್ದೇವೆ. ಅವರು ಜೀವಂತವಾಗಿ ಇರಲಿ ಎಂದು ಆಶೀಸುತ್ತೇವೆ ಎಂದರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಲಿ ಅವರ ಸಹೋದರ ಬಿ.ಎಂ ಫಾರೂಕ್, ಐವನ್ ಡಿಸೋಜ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.