Ullal: ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗೆ ಸ್ಪಂದಿಸಿ

ಉಳ್ಳಾಲ ತಾಲೂಕು ಮಟ್ಟದ ಪ್ರಾಕೃತಿಕ ವಿಕೋಪ; ತುರ್ತು ಸಭೆಯಲ್ಲಿ ಖಾದರ್‌

Team Udayavani, Aug 2, 2024, 2:21 PM IST

ullal

ಉಳ್ಳಾಲ: ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲ ಗ್ರಾಮಗಳನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ ಕೊರತೆಗಳನ್ನು ಬಗೆಹರಿಸಬೇಕು. ಮುಂದಿನ ಒಂದು ತಿಂಗಳು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಂಘ – ಸಂಸ್ಥೆಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ ಫರೀದ್‌ ತಿಳಿಸಿದರು.

ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆದ ಉಳ್ಳಾಲ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅ ಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮೇ ತಿಂಗಳ ಕೊನೆಯಲ್ಲಿ ಮಳೆಗಾಲ ಆರಂಭವಾಗಿದೆ. ನಿರಂತರ ಪ್ರಾಕೃತಿಕ ವಿಕೋಪಗಳು ನಡೆಯುತ್ತಲೇ ಬಂದಿದ್ದು, ಈ ಕುರಿತು ತುರ್ತು ಸಭೆ ನಡೆಸಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಪ್ರಾಕೃತಿಕ ವಿಕೋಪಗಳು ನಡೆದಾಗ ಯಾವ ರೀತಿಯಲ್ಲಿ ಕೆಲಸ ಮಾಡಬೇಕು ಅನ್ನುವ ನಿರ್ದೇಶನಗಳನ್ನು ನೀಡಲಾಗಿದೆ. ಎಲ್ಲೆಲ್ಲ ಹಾನಿಯಾಗಿದೆ, ಎಷ್ಟು ನಷ್ಟವುಂಟಾಗಿದೆ. ಸಾವು ನೋವಿನ ವಿಚಾರಗಳ ಕುರಿತು ,ಚರ್ಚಿಸಲಾಗಿದೆ. ಸರಕಾರ ಅವರಿಗೆ ಎಷ್ಟು ಪರಿಹಾರ ನೀಡಬೇಕು, ಅದು ಮುಂದೆ ನಡೆಸಬೇಕಾದ ಕ್ರಮಗಳು. ಗ್ರಾ. ಪಂ. ಸದಸ್ಯರ ಮತ್ತು ಅಧಿಕಾರಿಗಳ ನಡುವೆ ಸಮನ್ವಯ ಕೊರತೆಗಳು ಉಂಟಾಗುತ್ತಿದೆ. ಅದನ್ನು ಬಗೆಹರಿಸಲು ಮತ್ತು ಸಮಸ್ಯೆಗಳನ್ನು ಪುನರ್‌ ವಿಮರ್ಶಿಸುವ ಸಲುವಾಗಿಯೂ ಚರ್ಚಿಸಲಾಗಿದೆ ಎಂದರು.

ಸಮನ್ವಯ ಕೊರತೆ ಬಗೆಹರಿಸಿ

ಹೈಟೆನ್ಶನ್‌ ತಂತಿ, ಆರ್‌ಡಿಪಿಆರ್‌ ಪೈಪ್‌, ಪೊಲೀಸ್‌ ವ್ಯವಸ್ಥೆಗಳಲ್ಲಿ ಪ್ರಸ್ತುತ ಸಂದರ್ಭ ತೊಂದರೆಗಳಾಗುತ್ತಿದ್ದು, ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳಾದ ಅರಣ್ಯ, ಮೆಸ್ಕಾಂ, ಆರ್‌ಡಿಪಿಆರ್‌, ಪಿಡಬ್ಲ್ಯುಡಿ, ಅಧಿಕಾರಿಗಳು ಜತೆಯಾಗಿ ಎಲ್ಲ ಗ್ರಾಮಕ್ಕೆ ಭೇಟಿ ಅಲ್ಲಿರುವ ಸಮನ್ವಯ ಕೊರತೆಗಳನ್ನು ಬಗೆಹರಿಸಿಕೊಂಡು ಹೋಗಬೇಕೆಂದು ಖಾದರ್‌ ನಿರ್ದೇಶನ
ನೀಡಿದರು.

ಗ್ರಾಮ ಪಂಚಾಯತ್‌ ತುರ್ತು ನಿಧಿಗೆ ಸೂಚನೆ

ಮನೆಗಳಿಗೆ ಹಾನಿಯುಂಟಾದಾಗ ತತ್‌ ಕ್ಷಣ ರೂ. 6,500 ಕಂದಾಯ ಇಲಾಖೆ ನೀಡಬೇಕಾಗಿದೆ. ಗ್ರಾಮಕರಣಿಕ ಬಂದು ಪರಿಶೀಲನೆ ನಡೆಸಿದ ಅನಂತರ ಎಂಜಿನಿಯರ್‌ ವರದಿ ಸಲ್ಲಿಸಿದ ಒಂದು ವಾರದ ಒಳಗೆ ನಷ್ಟ ಪರಿಹಾರವನ್ನು ನೀಡಬೇಕಾಗಿದೆ. ಜನರಿಗೆ ಸಮಸ್ಯೆಯಾದಲ್ಲಿ ಸ್ಥಳೀಯ ಪಂ.ಸದಸ್ಯರ ಮೂಲಕ ತನ್ನ ಗಮನಕ್ಕೆ ತರಬಹುದು ತತ್‌ ಕ್ಷಣ ಅನಾಹುತಗಳು ಸಂಭವಿಸಿದಾಗ ಗ್ರಾ.ಪಂ.ಗಳಲ್ಲಿ ಅನುದಾನವಿರುವುದಿಲ್ಲ ಅನ್ನುವುದನ್ನು ಸದಸ್ಯರು ಗಮನಕ್ಕೆ ತಂದಾಗ ಸ್ವಂತ ನಿಧಿಯಿಂದ ನೀಡಬೇಕಾಗಿದೆ. ಅದು ಕೂಡ ಕೆಲವು ಗ್ರಾಮಾಡಳಿತಗಳಲ್ಲಿ ಇರುವುದಿಲ್ಲ. ಅದಕ್ಕಾಗಿ ಸರಕಾರ ಜಿಲ್ಲಾಧಿಕಾರಿ ಮುಖಾಂತರ ತುರ್ತು ನಿಧಿ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗುವುದು ಎಂದ ಅವರುಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಂದು ತಿಂಗಳಅವಧಿಗೆ ಸಕ್ರಿಯವಾಗಿರಬೇಕು. ಜನರಿಗೆ ತೊಂದರೆಯಾಗುವ ಸಂದರ್ಭ ಸ್ಪಂದಿಸಬೇಕಿದೆ ಎಂದು ತಿಳಿಸಿದರು.

ಅದ್ದೂರಿ ಸ್ವಾತಂತ್ರ್ಯ ದಿನ ಆಚರಣೆಗೆ ಸಿದ್ಧತೆ

ತೊಕ್ಕೊಟ್ಟು ಬೃಹತ್‌ ಧ್ವಜಸ್ತಂಭದ ಅಡಿಯಲ್ಲಿ ತಾಲೂಕು ರಚನೆಯಾದ ಎರಡನೇ ವರ್ಷದ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಎಲ್ಲ ಇಲಾಖೆಗಳು ಸೇರಿಕೊಂಡು ಪ್ರಮುಖವಾಗಿ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ತಹಶೀಲ್ದಾರ್‌ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಗಿದೆ ಎಂದು ಖಾದರ್‌ ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.