ಗ್ರಾಮ ಪಂಚಾಯತ್ ನಲ್ಲಿನ್ನು ಆನ್‌ಲೈನ್‌ ಲೆಕ್ಕ ಪರಿಶೋಧನೆ !

ಅನುದಾನದ ಮೇಲೆ ನಿಗಾ

Team Udayavani, Oct 28, 2020, 6:02 AM IST

ಗ್ರಾಮ ಪಂಚಾಯತ್ ನಲ್ಲಿನ್ನು ಆನ್‌ಲೈನ್‌ ಲೆಕ್ಕ ಪರಿಶೋಧನೆ !

ಸಾಂದರ್ಭಿಕ ಚಿತ್ರ

ಮಂಗಳೂರು: ಗ್ರಾಮ ಪಂಚಾಯತ್‌ಗಳಿಗೆ ಬರುವ ಅನುದಾನ, ಆರ್ಥಿಕ ಸಂಪನ್ಮೂಲ ಸಂಗ್ರಹ ಹಾಗೂ ಹಂಚಿಕೆಯ ಮೇಲೆ ನಿಗಾ ವಹಿಸುವ ಹಾಗೂ ಈ ಕುರಿತ ಲೆಕ್ಕಪರಿಶೋಧನೆಯನ್ನು ಇನ್ನಷ್ಟು ಪಾರದರ್ಶಕವಿರಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಗ್ರಾಮ ಪಂಚಾಯತ್‌ಗಳ ಲೆಕ್ಕಪರಿಶೋಧನೆಯನ್ನು ಆನ್‌ಲೈನ್‌ ಮೂಲಕ ನಡೆಸಲು ಕೇಂದ್ರ ಸರಕಾರ ಸೂಚಿಸಿದೆ.

ಇಲ್ಲಿಯವರೆಗೆ ಸ್ಥಳೀಯ ಲೆಕ್ಕಪರಿಶೋಧನ ಅಧಿಕಾರಿಗಳ ತಂಡ ಖುದ್ದಾಗಿ ಸಂಬಂಧಪಟ್ಟ ಪಂಚಾಯತ್‌ಗಳಿಗೆ ತೆರಳಿ ನಡೆಸಲಾಗುತ್ತಿತ್ತು. ಸಿಬಂದಿ ಕೊರತೆ ಹಾಗೂ ಇತರ ತಾಂತ್ರಿಕ ಸಮಸ್ಯೆಯಿಂದ ಸಾಮಾನ್ಯವಾಗಿ ವರ್ಷಕ್ಕೊಮ್ಮೆ ನಡೆಯಬೇಕಾದ ಲೆಕ್ಕಪರಿಶೋಧನೆಯು ಎರಡು-ಮೂರು ವರ್ಷಕ್ಕೊಮ್ಮೆ ನಡೆಯುತ್ತಿದೆ. ಜತೆಗೆ, ಕೆಲವು ಗ್ರಾಮ ಪಂಚಾಯತ್‌ಗಳ ಲೆಕ್ಕಾಚಾರವು ಹಲವಾರು ಗೊಂದಲಗಳಿಗೂ ಕಾರಣವಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇದೀಗ ಆನ್‌ಲೈನ್‌ ಪರಿಶೋಧನೆಗೆ ಉದ್ದೇಶಿಸಲಾಗಿದೆ.

ಮೊದಲ ಹಂತದಲ್ಲಿ, ರಾಜ್ಯದ 30 ಜಿಲ್ಲಾ ಪಂಚಾಯತ್‌ಗಳ ಶೇ.20ರಷ್ಟು ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ ಆನ್‌ಲೈನ್‌ ಲೆಕ್ಕಪರಿಶೋಧನೆಗೆ ನಿರ್ಧರಿಸಲಾಗಿದೆ. ಈ ಕುರಿತು ಆಯಾ ಗ್ರಾಮ ಪಂಚಾಯತ್‌ಗಳಿಗೆ ತರಬೇತಿ ನೀಡುವ ಕಾರ್ಯಕ್ರಮಗಳು ಆಯೋಜನೆಯಾಗಿದ್ದು, ಮಂಗಳೂರಿನಲ್ಲಿ ಅ. 28ರಂದು ನಡೆಯಲಿದೆ. ಇದು ಪೂರ್ಣವಾದ ಬಳಿಕ ಎಲ್ಲ ಗ್ರಾ.ಪಂ.ನಲ್ಲಿಯೂ ಹಂತ ಹಂತವಾಗಿ ಜಾರಿಯಾಗಲಿದೆ.

ಆನ್‌ಲೈನ್‌ ಏಕೆ?
ಲೆಕ್ಕಪರಿಶೋಧನೆಯಲ್ಲಿ ಏಕರೂಪತೆ ತರಲು ಹಾಗೂ ನಿಗದಿತ ಅವಧಿಯಲ್ಲಿ ಲೆಕ್ಕಪತ್ರ ಪರಿಶೋಧನೆ ಕೈಗೊಳ್ಳುವ ಉದ್ದೇಶದಿಂದ 15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಆಧಾರದ ಮೇಲೆ ಹೊಸದಿಲ್ಲಿಯ ಪಂಚಾಯತ್‌ರಾಜ್‌ ಮಂತ್ರಾಲಯವು ಆನ್‌ಲೈನ್‌ ಆಡಿಟ್‌ ಮಾಡಲು ಸೂಚಿಸಿದೆ. ಹೀಗಾಗಿ ಪ್ರತ್ಯೇಕ ವೆಬ್‌ ಆಧಾರಿತ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಇದರ ಮೂಲಕ ಆನ್‌ಲೈನ್‌ ಲೆಕ್ಕಪರಿಶೋಧನೆ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಸೂಚಿಸಲಾಗಿದೆ.

ಆನ್‌ಲೈನ್‌ ಆಡಿಟ್‌ನಿಂದ ಏನು ಲಾಭ?
ಸದ್ಯ ಎಲ್ಲವೂ ಡಿಜಿಟಲೀಕರಣ ಆಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಕಚೇರಿಯಿಂದ ಸಿಬಂದಿಯನ್ನು ಗ್ರಾ.ಪಂ.ಗಳಿಗೆ ಕಳುಹಿಸಿ ಲೆಕ್ಕಪರಿಶೋಧನೆ ಮಾಡುವ ಬದಲು ಕೇಂದ್ರ ಕಚೇರಿಯಿಂದಲೇ ಆನ್‌ಲೈನ್‌ ಮೂಲಕ ಆಡಿಟ್‌ ಮಾಡಲು ಸಾಧ್ಯ. ಜತೆಗೆ ಸದ್ಯ ಆಡಿಟ್‌ ಮಾಡುವ ವಿಚಾರದಲ್ಲಿ ಎದುರಾಗುವ ಕೆಲವೊಂದು ಆರೋಪಗಳು ಆನ್‌ಲೈನ್‌ನಲ್ಲಿ ಸರಿಯಾಗಬಹುದು. ನಿಗದಿತ ಸಮಯದೊಳಗೆ ಆಡಿಟ್‌ ಮಾಡಲು ಕೂಡ ಸಾಧ್ಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಹಣಕಾಸಿನ ವ್ಯವಹಾರದ ಮೇಲೆ ನಿಗಾ ವಹಿಸಲು ಸಾಧ್ಯ.

ಆಯ್ದ ಪಂಚಾಯತ್‌ ಸಿಬಂದಿಗೆ ತರಬೇತಿ
ಲೆಕ್ಕಪರಿಶೋಧನೆಯಲ್ಲಿ ಪಾರದರ್ಶಕತೆ, ಏಕರೂಪತೆ ತರಲು ಮತ್ತು ನಿಗದಿತ ಅವಧಿಯಲ್ಲಿ ಲೆಕ್ಕಪತ್ರ ಪರಿಶೋಧನೆ ಕೈಗೊಳ್ಳುವ ಉದ್ದೇಶದಿಂದ ಗ್ರಾಮ ಪಂಚಾಯತ್‌ನಲ್ಲಿ ಆನ್‌ಲೈನ್‌ ಲೆಕ್ಕಪರಿಶೋಧನೆಗೆ ಸರಕಾರ ಸೂಚಿಸಿದೆ. ಈ ಸಂಬಂಧ ಆನ್‌ಲೈನ್‌ ತಂತ್ರಾಂಶದ ಮೂಲಕ ಲೆಕ್ಕ ಪರಿಶೋಧನೆಯ ತರಬೇತಿಯನ್ನು ಆಯ್ದ ಪಂಚಾಯತ್‌ಗಳ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳಿಗೆ ನೀಡಲು ಸೂಚಿಸಲಾಗಿದೆ.
ಡಾ| ಸೆಲ್ವಮಣಿ, ಆರ್‌. ಸಿಇಒ, ಜಿಲ್ಲಾ ಪಂ.-ದ.ಕ

ದಿನೇಶ್‌ ಇರಾ

ಟಾಪ್ ನ್ಯೂಸ್

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.