ಕಸದ ತೊಟ್ಟಿಯಾಗಿ ಪರಿಣಮಿಸಿದ ತೆರೆದ ಚರಂಡಿ


Team Udayavani, Oct 12, 2017, 3:23 PM IST

12-Mng-14.jpg

ಬಜಪೆ: ಬಜಪೆ ಪೇಟೆಯಲ್ಲಿ ಕಳೆದ ಎಪ್ರಿಲ್‌ನಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆದಿದೆ. ಆದರೂ ಚರಂಡಿಯನ್ನು ಸಮರ್ಪಕವಾಗಿ ಮುಚ್ಚದೆ ಕೆಲವೆಡೆ ತೆರೆದಿಟ್ಟಿರುವುದು ಹಲವಾರು ಸಮಸ್ಯೆಗೆ ಕಾರಣವಾಗಿದೆ. ಅದು ಈಗ ಸಾರ್ವಜನಿಕರಿಗೆ ಸುಲಭ ಕಸದ ತೊಟ್ಟಿಯಾಗಿ ಪರಿಣಮಿಸಿದೆ.

ಕಳೆದ ಮಾರ್ಚ್‌ -ಎಪ್ರಿಲ್‌ ತಿಂಗಳಲ್ಲಿ ಚರಂಡಿ ಕಾಮಗಾರಿ ಆರಂಭಗೊಂಡಿತ್ತು. ಎಪ್ರಿಲ್‌ ತಿಂಗಳಲ್ಲಿ ಈ ಕಾಮಗಾರಿಯನ್ನು
ಪೂರ್ಣಗೊಳಿಸದೇ ಅರ್ಧದಲ್ಲಿ ನಿಲ್ಲಿಸಲಾಗಿತ್ತು. ಬಸ್ಸು ನಿಲ್ದಾಣದ ಸಮೀಪದಲ್ಲಿ ಚರಂಡಿಯನ್ನು ಮುಚ್ಚದೇ ಇದ್ದ ಕಾರಣ ಸಾರ್ವಜನಿಕರಿಗೆ ಅಪಾಯ ಕಾಡಿತ್ತು. ಈ ಬಗ್ಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಬಳಿಕ, ಕಾಂಕ್ರೀಟಿಕರಣ ಮೂಲಕ ಪುನಃ ಆರಂಭಿಸಿ ಅದನ್ನು ಪೂರ್ಣಗೊಳಿಸಲಾಯಿತು. ಆದರೆ ಪೇಟೆಯ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದ ಎದುರು ಈಗಲೂ
ಸುಮಾರು 10 ಮೀಟರ್‌ ಉದ್ದಕ್ಕೆ ಚರಂಡಿ ತೆರೆದೇ ಇದೆ. ಇದು ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ಅಪಾಯ ತಂದೊಡ್ಡಿದೆ. ಇನ್ನೂ ಕೆಲವೆಡೆ ಚರಂಡಿಗಳನ್ನು ಮುಚ್ಚದೆ ಬಿಟ್ಟಿದ್ದರಿಂದ ಕೆಲವರು ಕತ್ತಲಲ್ಲಿ ಕಾಣದೆ ಅದರೊಳಗೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.

ಕಸ ವಿಲೇವಾರಿ ಕಠಿಣ
ಅರೆ-ಬರೆ ಚರಂಡಿ ಕಾಮಗಾರಿಯಿಂದಾಗಿ ಈಗ ಕಸ ವಿಲೇವಾರಿಯೂ ಕಠಿನವಾಗಿದೆ. ಜನ ತೆರೆದ ಚರಂಡಿಯಲ್ಲೇ ಕಸ ಎಸೆಯುತ್ತಿದ್ದಾರೆ. ಕಸಕ್ಕೆ ಅಲ್ಲೇ ಬೆಂಕಿಯನ್ನೂ ಕೊಡುತ್ತಿದ್ದಾರೆ. ಈಗಾಗಲೇ ಚರಂಡಿ ಕಸದಿಂದ ತುಂಬಿಹೋಗಿದೆ.

ಚರಂಡಿ ಕಾಮಗಾರಿ ಬಜಪೆ ಪಂಚಾಯತ್‌ಗೆ ಹೋಗುವ ರಸ್ತೆಯಿಂದ ರಾಜ್ಯ ಹೆದ್ದಾರಿಯಲ್ಲಿ ಆರಂಭವಾಗಿ ಬಜಪೆ
ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಸಮೀಪದಲ್ಲಿ ಹರಿಯುವ ತೋಡಿನವರೆಗೆ ನಡೆದಿದೆ. ಚರಂಡಿಯ ಆರಂಭದ
ಹಂತದಲ್ಲಿ ಅದನ್ನು ಮುಚ್ಚಿದ್ದರಿಂದ ನೀರು ಅದರೊಳಗೆ ಹೋಗುವುದಿಲ್ಲ.

ಅರ್ಧದಲ್ಲಿಯೇ ನಿಂತ ಕಾಮಗಾರಿಯಿಂದ ವಾಹನ ಪಾರ್ಕಿಂಗ್‌ಗೂ ಸಮಸ್ಯೆಯಾಗಿದೆ. ರಸ್ತೆಯ ವರೆಗೂ ವಾಹನಗಳನ್ನು ನಿಲ್ಲಿಸುವುದರಿಂದ ಅಪಘಾತ ಭಯ ಕಾಡುತ್ತಿದೆ. ಸಂಚಾರಕ್ಕೂ ಅಡ್ಡಿಯಾಗುತ್ತಿದೆ. ಪಾದಚಾರಿಗಳಿಗೆ, ನಡೆದುಕೊಂಡು ಶಾಲೆಗೆ ಹೋಗುವ ಮಕ್ಕಳಿಗೆ ದಾರಿಯೇ ಇಲ್ಲದಂತಾಗಿದೆ.

ನೀರು ಹೋಗಲು ಮಾಡಿದ್ದಲ್ಲ! 
ಈ ಚರಂಡಿ ಮಳೆಯ ನೀರು ಹರಿದು ಹೋಗಲು ಮಾಡಿದ್ದಲ್ಲ, ಇದು ಕಸ ಹಾಕಲು ಮಾಡಿದ್ದು. ಇದರಲ್ಲಿ ಎಲ್ಲಿ ನೀರು ಹರಿದು ಹೋಗಿದೆ ತೋರಿಸಿ. ಚರಂಡಿ ಆರಂಭದಲ್ಲಿಯೇ ಮಣ್ಣು ಹಾಕಿ ಬಂದ್‌ ಮಾಡಿದ್ದಾರೆ. ನೀರು ಬರುವುದೆಲ್ಲಿಂದ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಚರಂಡಿ ಪೂರ್ಣಗೊಳಿಸಿದರೆ ಪಾರ್ಕಿಂಗ್‌ ವ್ಯವಸ್ಥೆ
ಅರ್ಧದಲ್ಲಿ ನಿಂತ ಕಾಮಗಾರಿಯನ್ನು ಪೂರ್ತಿಗೊಳಿಸಿದ ನಂತರವೇ ನಾವು ವಾಹನದ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಬಹುದು. ಪಾರ್ಕಿಂಗ್‌ ವ್ಯವಸ್ಥೆಯ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಸಭೆ ನಡೆದಿದೆ. ಪಾರ್ಕಿಂಗ್‌ ಜಾಗ ಹಾಗೂ ರಸ್ತೆ ಅಂಚುಗಳಿಗೆ ಬಣ್ಣ ಬಳಿಯುವ ಬಗ್ಗೆ ಸಲಹೆಗಳು ಬಂದಿವೆ. ಅದರೂ ರಾಜ್ಯ ಹೆದ್ದಾರಿಯ ಈ ರಸ್ತೆ ಅಭಿವೃದ್ಧಿ ಆದಮೇಲೆಯೇ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗುವುದು. ತೆರೆದ ಚರಂಡಿ ಅಪಾಯಕಾರಿಯಾಗಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ಬಗ್ಗೆ ಬಗ್ಗೆ ಇಲಾಖೆಗೆ ಮನವಿ ಮಾಡಲಾಗುವುದು ಎಂದು ಬಜಪೆ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸಾಯೀಶ್‌ ಚೌಟ ತಿಳಿಸಿದ್ದಾರೆ.

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.