Panambur: ಬಟ್ಟೆಯಿಂದ ಕುತ್ತಿಗೆ ಬಿಗಿದು ಬಾಲಕಿಯ ಹತ್ಯೆ
ಚಿಕ್ಕಪ್ಪನ ಮನೆಗೆ ಬಂದಿದ್ದ ವೇಳೆ ಹತಳಾದ ಬಾಲಕಿ
Team Udayavani, Aug 7, 2024, 7:00 AM IST
ಪಣಂಬೂರು: ಇಲ್ಲಿನ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಜಂಕ್ಷನ್ನ ಭಜನ ಮಂದಿರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಬಾಲಕಿಯೊಬ್ಬಳನ್ನು ಬಟ್ಟೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಆ. 6 ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗಾವಿ ಮೂಲದ ಬಾಲಕಿ ಜೋಕಟ್ಟೆಯ ಚಿಕ್ಕಪ್ಪ ಹನುಮಂತ ಅವರ ಮನೆಗೆ ಬಂದಿದ್ದಳು. ಕೂಲಿ ಕೆಲಸ ಮಾಡಿಕೊಂಡಿರುವ ಹನುಮಂತ ಮಂಗಳವಾರ ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಹನುಮಂತನ ಕೊನೆಯ ಮಗ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಗೆ ತೆರಳಿದ್ದ. ಹನುಮಂತನ ಪತ್ನಿ ಊರಿಗೆ ಹೋಗಿದ್ದರಿಂದ ಬಾಲಕಿ ಒಬ್ಬಳೇ ಮನೆಯಲ್ಲಿದ್ದಳು. ಬಾಲಕಿ ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಘಟನ ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದರು. ಪಣಂಬೂರು ಉಪವಿಭಾಗ ಎಸಿಪಿ, ಪಣಂಬೂರು ಪೊಲೀಸ್ ಠಾಣೆಯ ಆಧಿಕಾರಿಗಳು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಾಯಿ ಕರೆ ಮಾಡಿದಾಗ ಕೃತ್ಯ ಬೆಳಕಿಗೆ
ಮಂಗಳವಾರ ಮಗಳನ್ನು ವಿಚಾರಿಸಲು ತಾಯಿ ಪಕ್ಕದ ಮನೆಮಂದಿಗೆ ಕರೆ ಮಾಡಿ ಮಾತನಾಡಲು ಫೋನ್ ಕೊಡುವಂತೆ ವಿನಂತಿಸಿದ ಮೇರೆಗೆ ಕೊಡಲು ಹೋದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ತತ್ಕ್ಷಣ ಪೊಲೀಸರಿಗೆ ಹನುಮಂತ ಕರೆ ಮಾಡಿ ಮಾಹಿತಿ ನೀಡಿದ ಮೇರೆಗೆ ಪಣಂಬೂರು ಪೊಲೀಸರು, ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಪರಿಚಯಸ್ಥರದ್ದೇ ಕೃತ್ಯ?
ಅಷ್ಟೇನು ಸಿರಿವಂತರಲ್ಲದ ಹನುಮಂತನ ಮನೆಯಲ್ಲಿ ಚಿನ್ನಾಭರಣ ಕಳ್ಳತನಕ್ಕೆ ಸಾಧ್ಯತೆ ಕಡಿಮೆ ಇದೆ. ಯಾವುದೇ ಕಪಾಟು, ಪೆಟ್ಟಿಗೆಯ ವಸ್ತುಗಳನ್ನು ಮುಟ್ಟಿಲ್ಲ. ಕೊಲೆಗಾರ ಲೈಂಗಿಕ ದೌರ್ಜನ್ಯ ಎಸಗಿರಬಹುದು ಅಥವಾ ದೌರ್ಜನ್ಯಕ್ಕೆ ಯತ್ನಿಸಿದಾಗ ಬಾಲಕಿ ಬೇರೆಯವರಿಗೆ ಹೇಳಬಹುದು ಎಂಬ ಭಯದಿಂದ ಕೊಲೆ ಮಾಡಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಘಟನೆ ನಡೆದ ಸ್ಥಳಕ್ಕೆ ಹತ್ತಿರದಲ್ಲೇ ಮೂರ್ನಾಲ್ಕು ಮನೆಗಳಿದ್ದು, ಕಿರುಚಾಟ, ಬಡಿದಾಟದ ಯಾವುದೇ ಶಬ್ದ ಕೇಳಿಸಿಲ್ಲ ಎಂದವರು ಹೇಳುತ್ತಾರೆ. ಪರಿಚಯಸ್ಥರೇ ಈ ಕೃತ್ಯ ಎಸಗಿರಬಹುದು ಎನ್ನುವ ಶಂಕೆ ಬಲವಾಗಿ ಇದೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲು ಕಾರ್ಯಪ್ರವೃತ್ತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
Mangaluru City Corporation: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.