Panambur: ಬಾಟಲಿ, ಪೊಟ್ಟಣ ಎಸೆಯಲು ಬೀಚ್ನಲ್ಲಿ ಕಿಯೋಸ್ಕ್ ಇಂದು ಉದ್ಘಾಟನೆ
ಪಣಂಬೂರು ಕಡಲತೀರ ಪ್ಲಾಸ್ಟಿಕ್ ಮುಕ್ತ
Team Udayavani, Aug 30, 2024, 5:41 PM IST
ಪಣಂಬೂರು: ಮಂಗಳೂರಿನ ಪಣಂಬೂರು ಬೀಚ್ ಪ್ರದೇಶದ ಸ್ವತ್ಛ ಬೀಚ್ಗಳಲ್ಲಿ ಒಂದು ಎಂಬ ಖ್ಯಾತಿ ಹೊಂದಿದೆ. ಆದರೂ ಇಲ್ಲಿ ವರ್ಷಕ್ಕೆ ಹಲವಾರು ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆಯಾಗುತ್ತದೆ. ಅಂತಾರಾಷ್ಟ್ರೀಯ ಖ್ಯಾತಿಯ ಬೀಚನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನವೊಂದು ನಡೆದಿದೆ.
ಪ್ರವಾಸಿಗರು ತರುವ ನೀರಿನ ಬಾಟಲಿ, ತಿಂಡಿಯ ಪ್ಲಾಸ್ಟಿಕ್ ಪೊಟ್ಟಣಗಳು, ಪ್ಲಾಸ್ಟಿಕ್ ಬ್ಯಾಗ್ ಮತ್ತಿತರ ವಸ್ತುಗಳನ್ನು ಬೇಕಾಬಿಟ್ಟಿ ಎಸೆಯದೆ ಅದನ್ನು ಸರಿಯಾದ ಜಾಗದಲ್ಲಿ ಸಂಗ್ರಹಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಸಂಗ್ರಹ ಕಿಯೋಸ್ಕ್ ಕೇಂದ್ರವೊಂದನ್ನು ನಿರ್ಮಿಸಲಾಗಿದೆ. ಬೈಕಂಪಾಡಿಯ ಕೆನರಾ ಪ್ಲಾಸ್ಟಿಕ್ ಉತ್ಪಾದಕರ ಅಸೋಸಿಯೇಶನ್ ಆಂದಾಜು 2.50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟಿದೆ. ಇದರ ಮೇಲ್ವಿಚಾರಣೆಗೆ ಒಬ್ಬ ಸಿಬಂದಿ ನೇಮಕವಾಗಿದೆ.
ಪ್ರವಾಸಿಗರು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕಿಯೋಸ್ಕ್ಗೆ ತಂದು ಹಾಕುವಂತೆ ಪ್ರೇರೇಪಿಸುವುದು, ಸಂಗ್ರಹವಾಗುವ ಪ್ಲಾಸ್ಟಿಕ್ ವಿಲೇವಾರಿಯ ಬಗ್ಗೆ ಸೂಕ್ತ ಯೋಜನೆ ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳ ನಿರ್ದೆಶನದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಬೀಚ್ ನಿರ್ವಹಣೆ ಸಮಿತಿ, ಪಾಲಿಕೆ ಆಡಳಿತ ಸಹಿತ ಎಲ್ಲರೂ ಇದಕ್ಕೆ ಕೈಜೋಡಿಸಿದ್ದಾರೆ.
ಸಮುದ್ರ ತೀರದಲ್ಲಿ ಬರುವ ಜನರು ಬಳಸಿದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ಮರುಬಳಕೆ ಮಾಡುವ ತಾಂತ್ರಿಕ ಘಟಕಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸಲಾಗುತ್ತದೆ.
ಸೂಕ್ತ ವ್ಯವಸ್ಥೆಗಳು ಇರಲಿಲ್ಲ
ಪಣಂಬೂರು ಬೀಚ್ನಲ್ಲಿ ರಜಾ ದಿನ, ವಾರಾಂತ್ಯಗಳಲ್ಲಿ ಕನಿಷ್ಠ ನೂರು ಕೆಜಿ ಕೇವಲ ಪ್ಲಾಸ್ಟಿಕ್ ಪೊಟ್ಟಣಗಳು, ಬಾಟಲಿ, ಕೈ ಚೀಲ ಸಂಗ್ರಹವಾಗುತ್ರವೆ, ಇದನ್ನು ಪ್ರತ್ಯೇಕಿಸಿ ಹಾಕಲು ವ್ಯವಸ್ಥೆಗಳಿರಲಿಲ್ಲ.
ಬೀಚ್ ಪ್ರವಾಸೋದ್ಯಮ ವಿಭಾಗಕ್ಕೆ ಸೇರಿದ್ದರೂ ತ್ಯಾಜ್ಯ ವಿಲೇವಾರಿ ಮಾಡುವ ಜವಾಬ್ದಾರಿ ಪಾಲಿಕೆಯದ್ದು. ಪಾಲಿಕೆಯು ಸ್ಥಳೀಯ ವ್ಯಾಪಾರಿಗಳಲ್ಲಿ ಒಡಂಬಡಿಕೆ ಮಾಡಿಕೊಂಡು ಪ್ಲಾಸ್ಟಿಕ್ ಸಹಿತ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿತ್ತು.
ಪಣಂಬೂರು ಬೀಚ್ನ್ನು ಕಳೆದ ಹತ್ತು ವರ್ಷದ ಹಿಂದೆಯೇ ಪ್ಲಾಸ್ಟಿಕ್ ಮುಕ್ತ ಎಂದು ಘೋಷಣೆ ಮಾಡಲಾಗಿದೆಯಾದರೂ ಇದುವೆರಗೂ ಸಂಪೂರ್ಣ ನಿಯಂತ್ರಣ ಸಾಧ್ಯವಾಗಿಲ್ಲ.
ಇಂದು ಸಚಿವರಿಂದ ಚಾಲನೆ
ಪಣಂಬೂರು ಬೀಚಲ್ಲಿ ಪ್ಲಾಸ್ಟಿಕ್ ಸಂಗ್ರಹ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಮುದ್ರ ದಡಕ್ಕೆ ಪ್ಲಾಸ್ಟಿಕ್ ಬಾಟಲಿಗಳನ್ನು ಒಯ್ಯದೆ, ಈ ಘಟಕದಲ್ಲಿ ಹಾಕಿ ಸ್ವತ್ಛತೆಗೆ ಕೈ ಜೋಡಿಸಬೇಕು. ಇದಕ್ಕೆ ಅಧಿಕೃತವಾಗಿ ಆ. 30ರಂದು ಉಸ್ತುವಾರಿ ಸಚಿವ ಗುಂಡೂರಾವ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಿಪಿಎಂಟಿಎ ಅಧ್ಯಕ್ಷ ಬಿ.ಎ. ನಝೀರ್ ತಿಳಿಸಿದ್ದಾರೆ.
-ಲಕ್ಷ್ಮೀನಾರಾಯಣ ರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
Mangaluru City Corporation: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.