Panambur ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ ಆರೋಪಿಗಳ ಮಹಜರು, ಮುಂದುವರಿದ ತನಿಖೆ
Team Udayavani, Oct 18, 2024, 9:00 PM IST
ಪಣಂಬೂರು: ಉದ್ಯಮಿ, ಮಿಸ್ಬಾ ಶಿಕ್ಷಣ ಸಂಸ್ಥೆಗಳ ಚೇರ್ಮನ್, ಜಮಾತ್ ಮುಖಂಡ, ಉದ್ಯಮಿ ಮಮ್ತಾಜ್ ಅಲಿ ಅವರು ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹನಿಟ್ರ್ಯಾಪ್ ದೂರು ದಾಖಲಾದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿದಿದೆ.
ಈ ಸಂಬಂಧ ಬಂಧಿತರಾಗಿರುವ ಆರೋಪಿಗಳನ್ನು ಮಹಜರು ಸಂಬಂಧ ಅವರ ಮನೆಗಳಲ್ಲಿ ತನಿಖೆ ನಡೆಸಲಾಯಿತು. ಕೃಷ್ಣಾಪುರದಲ್ಲಿ ಆರೋಪಿಗಳನ್ನು ಕರೆ ತರುವ ವೇಳೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಮಹಜರು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಪೊಲೀಸರು ಅವರನ್ನು ನಿಯಂತ್ರಿಸಲು ಹೆಚ್ಚುವರಿ ಕೆಎಸ್ಆರ್ಪಿ ಪೊಲೀಸ್ ಸಿಬಂದಿಯನ್ನು ನಿಯೋಜಿಸಿದ್ದರು. ಕಾವೂರು ಪೊಲೀಸರ ತನಿಖೆಯ ಬಳಿಕ ಹನಿಟ್ರ್ಯಾಪ್ ಪ್ರಕರಣದ ತನಿಖೆಗಾಗಿ ಅವರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಅ. 6ರಂದು ಮಮ್ತಾಜ್ ಅಲಿ ಅವರು ಹಣಕ್ಕಾಗಿ ಕಿರುಕುಳ, ಬೆದರಿಕೆ ಕುರಿತಂತೆ ವಾಯ್ಸ ಮೆಸೇಜ್ ಕಳುಹಿಸಿರುವ ಹಿನ್ನೆಲೆಯಲ್ಲಿ ಪೊಲೀಸ್ ದೂರು ದಾಖಲಾದ ಹಿನ್ನಲೆಯಲ್ಲಿ ತನಿಖೆ ಚುರುಕುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ
Mangaluru: ಡಿಜಿಟಲ್ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್ ಗಟ್ಟಿ ಕಾಪಿಕಾಡ್
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.