Pandeshwar ರೈಲು ಹಳಿ ದುರಸ್ತಿ; ವಾಹನ ಸವಾರರಿಗೆ ಸಂಕಷ್ಟ


Team Udayavani, Oct 22, 2024, 4:01 PM IST

6(2)

ಪಾಂಡೇಶ್ವರ: ಗೂಡ್‌ಶೆಡ್‌ನ‌ಲ್ಲಿರುವ ರೈಲು ತಂಗುದಾಣಕ್ಕೆ ತೆರಳುವ ರೈಲು ಹಳಿಯ ಪಾಂಡೇಶ್ವರ ಸಮೀಪ ಹಳಿ ಹಾಗೂ ಗೇಟ್‌ ದುರಸ್ತಿ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬಂದ್‌ ಮಾಡಲಾಗಿದ್ದು, ಕಾಮ ಗಾರಿ ಪ್ರಗತಿಯಲ್ಲಿದೆ. ಸ್ಥಳೀಯ ವಾಹನ ಸವಾರರಿಗೆ ಇದರಿಂದ ಬಹಳಷ್ಟು ಅನನು ಕೂಲವಾಗಿದ್ದು, ಸುತ್ತು ಬಳಸಿ ಸಂಚರಿಸ ಬೇಕಾದ ಅನಿವಾರ್ಯ ಎದುರಾಗಿದೆ.

ಶನಿವಾರ ರಾತ್ರಿ 8 ಗಂಟೆಯಿಂದ ಪಾಂಡೇಶ್ವರ ರೈಲ್ವೇ ಕ್ರಾಸಿಂಗ್‌ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಅ. 22ರಂದು ಬೆಳಗ್ಗೆ 8 ಗಂಟೆಗೆ ಕಾಮಗಾರಿ ಪೂರ್ಣ ಗೊಂಡು ವಾಹನ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ.

ರೈಲ್ವೇ ಗೇಟ್‌ ಕಾಮಗಾರಿ ಪೂರ್ಣ
ಕೆಲವು ತಿಂಗಳ ಹಿಂದೆ ಪಾಂಡೇಶ್ವರದ ರೈಲ್ವೇ ಗೇಟ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಗೇಟ್‌ಗೆ ಹಾನಿಯಾಗಿತ್ತು. ಬಳಿಕ ಗೇಟ್‌ ದುರಸ್ತಿಗೊಳಿಸಲಾಗಿತ್ತು. ಇದೀಗ ಗೇಟ್‌ನಲ್ಲಿ ಎದುರಾಗುವ ಇತರ ತಾಂತ್ರಿಕ ಸಮಸ್ಯೆ ನಿವಾರಿಸಿ ಸಣ್ಣ ಪುಟ್ಟ ದುರಸ್ತಿ ಕಾರ್ಯ ಪೂರ್ಣಗೊಳಿಸಿ ಪೈಂಟಿಂಗ್‌ ನಡೆಸಲಾಗಿದೆ. ಪದೇ ಪದೇ ಗೇಟ್‌ನಲ್ಲಿ ಸಮಸ್ಯೆ ಎದುರಾಗಿ ಸಾರ್ವಜನಿಕರಿಗೆ ಸಮಸ್ಯೆ ನೀಡುವ ಬದಲು ದುರಸ್ತಿ ಕಾರ್ಯ ನಡೆಸಲಾಗಿದೆ ಎಂದು ರೈಲ್ವೇ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದುವರಿದ ರೈಲು ಹಳಿ ದುರಸ್ತಿ ಕಾಮಗಾರಿ
ರೈಲ್ವೇ ಗೇಟ್‌ ಸಮೀಪ ಹಳಿ ಅಲ್ಪ ಪ್ರಮಾಣದಲ್ಲಿ ಒಳಗೆ ಜಗ್ಗಿದೆ ಎನ್ನುವ ಕಾರಣ ದುರಸ್ತಿ ಕೆಲಸ ಶುರು ಮಾಡಲಾಗಿದೆ. ಪ್ರಸ್ತುತ ಹಳಿಯ ಜಲ್ಲಿ ಹಾಗೂ ಕಾಂಕ್ರಿಟ್‌ ಹಾಸುಗಳನ್ನು ತೆರವುಗೊಳಿಸಲಾಗಿದೆ. ಹಳಿ ತೆರವುಗೊಳಿಸಿ ದುರಸ್ತಿ ಕಾರ್ಯ ನಡೆಯಲಿದೆ. ಸುಮಾರು 200 ಮೀ.ನಷ್ಟು ಹಳಿ ದುರಸ್ತಿಗೊಳ್ಳಲಿದೆ.

ಪಾಲಿಕೆ ವತಿಯಿಂದ ದುರಸ್ತಿ
ರೈಲ್ವೇ ಗೇಟ್‌ ಸಮೀಪ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಹೊಂಡ ನಿರ್ಮಾಣಗೊಂಡು ರಸ್ತೆಯಲ್ಲಿ ನೀರು ತುಂಬಿಕೊಳ್ಳುತ್ತಿದೆ. ಈ ರಸ್ತೆ ದುರಸ್ತಿಗೊಳಿಸಲು ರೈಲ್ವೇ ಇಲಾಖೆಗೆ ಮನವಿ ಮಾಡಲಾಗಿದ್ದು, ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಉತ್ತರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಪಾಲಿಕೆಯಿಂದ ಅನುದಾನ ಬಳಸಿ ರಸ್ತೆಗೆ ಡಾಮರು ಅಳವಡಿಸಲಾಗುವುದು.
– ದಿವಾಕರ ಪಾಂಡೇಶ್ವರ, ಮಾಜಿ ಮೇಯರ್‌

ಪರ್ಯಾಯ ಮಾರ್ಗಗಳು
ಪ್ರಸ್ತುತ ಸವಾರರಿಗೆ ಹೊಗೆಬಜಾರ್‌ ಮೂಲಕ ತೇರಳಲು ಅವಕಾಶವಿದೆ. ಮತ್ತೂಂದೆಡೆ ಮಂಗಳಾದೇವಿ ಕಡೆಯಿಂದ ನಂದಿಗುಡ್ಡ ಮೂಲಕ ಅತ್ತಾವರ, ಕಂಕನಾಡಿ ಮುಖೇನ ಸಂಚಾರ ನಡೆಸಲು ಪ್ರಸ್ತುತ ಅವಕಾಶವಿದೆ.

ಟಾಪ್ ನ್ಯೂಸ್

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅಮಾನತು

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ… ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Surathkal: ಬೀದಿದೀಪಗಳಿಗೇ ಇನ್ನೂ ಸಿಕ್ಕಿಲ್ಲ ವಿದ್ಯುತ್‌ ಸಂಪರ್ಕ

4

Pilikula: 10 ವರ್ಷಗಳ ಬಳಿಕ ನಡೆಯಲಿದೆ ಕಂಬಳ!

3

Mangaluru: ಮೂಕ ಪ್ರಾಣಿಗಳ ಪ್ರಾಣ ಹಿಂಡುವ ಪ್ಲಾಸ್ಟಿಕ್‌!

3

Mangaluru: ಬಸ್‌ ಸಿಬಂದಿ ನಡುವೆ ಜಗಳ; ಕನ್ನಡಿಗೆ ಹಾನಿ; 4 ಸಾವಿರ ರೂ. ನಷ್ಟ

2

Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

11(1)

Thekkatte: ಸಂಪೂರ್ಣ ಹದಗೆಟ್ಟ ಬಿದ್ಕಲ್‌ಕಟ್ಟೆ-ಕಂಬಿಕಲ್ಲು ರಸ್ತೆ

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

10

Kolluru: ವಂಡ್ಸೆ-ಹಾಲ್ಕಲ್‌ ರಸ್ತೆ ಹೊಂಡಕ್ಕೆ ಮುಕ್ತಿ ಎಂದು?

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

9

Karkala: ಆಗಾಗ ಸುರಿಯುತ್ತಿರುವ ಮಳೆ; ರಸ್ತೆ ದುರಸ್ತಿಗೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.