ರಸ್ತೆ ವಿಸ್ತರಣೆಗೊಂಡರೂ ಫುಟ್‌ಪಾತ್‌ ಮೇಲೆಯೇ ಪಾರ್ಕಿಂಗ್‌


Team Udayavani, Oct 15, 2020, 10:26 PM IST

ರಸ್ತೆ ವಿಸ್ತರಣೆಗೊಂಡರೂ ಫುಟ್‌ಪಾತ್‌ ಮೇಲೆಯೇ ಪಾರ್ಕಿಂಗ್‌

ಲಾಲ್‌ಬಾಗ್‌ನಲ್ಲಿ ಫ‌ುಟ್‌ಪಾತ್‌ ಅನ್ನು ಸಂಪೂರ್ಣವಾಗಿ ಅತಿಕ್ರಮಿಸಿ ಕೊಂಡಿರುವ ವಾಹನಗಳು.

ಮಹಾನಗರ: ನಗರದ ಹಲವೆಡೆ ಹೊಸದಾಗಿ ನಿರ್ಮಾಣಗೊಂಡಿರುವ ಫ‌ುಟ್‌ಪಾತ್‌ಗಳ ಪೈಕಿ ಬಹುತೇಕ ವಾಹನಗಳ ಪಾರ್ಕಿಂಗ್‌ಗೆ ಬಳಕೆಯಾಗುತ್ತಿವೆ!

ವಿಸ್ತರಿಸಲಾದ ರಸ್ತೆಗಳು ಈಗಾಗಲೇ ಅನಧಿಕೃತ ವಾಹನ ಪಾರ್ಕಿಂಗ್‌ ಸ್ಥಳವಾಗಿ ಮಾರ್ಪಟ್ಟಿವೆ. ಇದೀಗ ಹೊಸದಾಗಿ ನಿರ್ಮಾಣಗೊಂಡಿರುವ ಫುಟ್‌ಪಾತ್‌ಗಳು ಕೂಡ ವಾಹನಗಳ ನಿಲುಗಡೆ ತಾಣವಾಗುತ್ತಿವೆ. ಇದರಿಂದ ಪಾದಚಾರಿಗಳು ರಸ್ತೆಯಲ್ಲಿಯೇ ಅಪಾಯಕಾರಿಯಾಗಿ ನಡೆದಾಡುವ ಸ್ಥಿತಿ ಉಂಟಾಗಿದೆ.

ಫುಟ್‌ಪಾತ್‌ ನಿರ್ಮಿಸಿದ್ದು ಏತಕ್ಕಾಗಿ?
ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಕಡೆಯಿಂದ ಲಾÇಬಾಗ್‌ ಕಡೆಗೆ, ಅಲ್ಲಿಂದ ಮುಂದಕ್ಕೆ ಬಲ್ಲಾಳ್‌ಬಾಗ್‌ ಕಡೆಗೆ ಬರುವ ರಸ್ತೆ ಪಾದಚಾರಿಗಳಿಗೆ ಅತ್ಯಂತ ಅಪಾಯ ಕಾರಿಯಾಗಿ ಪರಿಣಮಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಹೊರಡುವ ಪಾದಚಾರಿಗಳು ಆರಂಭದಲ್ಲಿ ಫುಟ್‌ಪಾತ್‌ ಇಲ್ಲದೇ ತೊಂದರೆಗೆ ಸಿಲುಕುತ್ತಾರೆ. ಇಲ್ಲಿ ರಸ್ತೆ ವಿಸ್ತರಣೆಯಾದರೂ ಫುಟ್‌ಪಾತ್‌ ನಿರ್ಮಾಣವಾಗಿಲ್ಲ. ವಿಸ್ತರಣೆಗೊಂಡ ರಸ್ತೆಯಲ್ಲಿ ವಾಹನಗಳನ್ನು ಅಡ್ಡಾದಿಡ್ಡಿ ಯಾಗಿ ನಿಲ್ಲಿಸಲಾಗುತ್ತದೆ. ಪಾಲಿಕೆ ಕಚೇರಿ ಕಟ್ಟಡದ ಎದುರಿನ ಕಟ್ಟಡದ ಪಕ್ಕದಿಂದ ಮುಂದೆ ಸುವ್ಯವಸ್ಥಿತ ಫುಟ್‌ಪಾತ್‌ ನಿರ್ಮಿಸಲಾಗಿದೆ. ಆದರೆ ಫುಟ್‌ಪಾತ್‌ನ್ನು ಸಂಪೂರ್ಣವಾಗಿ ವಾಹನಗಳು ಆಕ್ರಮಿಸಿಕೊಂಡಿರುತ್ತವೆ.

ಫ‌ುಟ್‌ಪಾತ್‌ಗೆ ತಡೆ
ಕೆಲವು ಕಟ್ಟಡಗಳು/ವಾಣಿಜ್ಯ ಮಳಿಗೆಗಳ ಎದುರು ಸಾಮಗ್ರಿಗಳನ್ನು ಫ‌ುಟ್‌ಪಾತ್‌ನಲ್ಲಿಯೇ ಇಟ್ಟು ಪಾದಚಾರಿಗಳು ಫ‌ುಟ್‌ಪಾತ್‌ ಬಳಸದಂತೆ ಮಾಡಲಾಗಿದೆ. ತಿಂಗಳ ಹಿಂದೆಯಷ್ಟೇ ನಿರ್ಮಾಣಗೊಂಡ ಫ‌ುಟ್‌ಪಾತ್‌ ಕೂಡ ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗುತ್ತಿದೆ. ಇನ್ನು ಕೆಲವೆಡೆ ಫ‌ುಟ್‌ಪಾತ್‌ಗಳ ಮಧ್ಯೆ ರಸ್ತೆಗಾಗಿ ಸ್ಥಳಾವಕಾಶ ಬಿಟ್ಟು ಸಂಪರ್ಕವೇ ಇಲ್ಲದಿರುವುದರಿಂದ ಅಂತಹ ಸ್ಥಳಗಳಲ್ಲಿಯೂ ನಡೆದಾಡುವುದು ಅಸಾಧ್ಯ.

ಎತ್ತರವಿಲ್ಲದ ಫ‌ುಟ್‌ಪಾತ್‌
ಹಲವೆಡೆ ಫ‌ುಟ್‌ಪಾತ್‌ಗಳನ್ನು ರಸ್ತೆಗೆ ಸಮತಟ್ಟಾಗಿ ನಿರ್ಮಿಸಲಾಗಿದೆ. ಹಾಗಾಗಿ ವಾಹನಗಳನ್ನು ಸುಲಭವಾಗಿ ಫ‌ುಟ್‌ಪಾತ್‌ಗಳಲ್ಲಿ ನಿಲ್ಲಿಸಲಾಗುತ್ತಿದೆ. ಇನ್ನು ಕೆಲವೆಡೆ ತುಸು ಎತ್ತರದಲ್ಲಿದ್ದರೂ ಅದು ವಾಹನಗಳು ಏರುವಷ್ಟೇ ಎತ್ತರವಿದೆ. ಫ‌ುಟ್‌ಪಾತ್‌ಗಳನ್ನು ನಿರ್ಮಿಸುವಾಗಲೇ ವಾಹನಗಳ ನಿಲುಗಡೆಗೆ ಸೂಕ್ತವಾಗಿರುವ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ ಎಂದು ಅನೇಕ ಮಂದಿ ಪಾದಚಾರಿಗಳು ದೂರಿದ್ದಾರೆ.

ಸಂಚಾರಕ್ಕೆ ತೊಡಕು
ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಫ‌ುಟ್‌ಪಾತ್‌ಗಳು ವಾಹನಗಳ ಪಾರ್ಕಿಂಗ್‌ಗೆ ಬಳಕೆಯಾಗುತ್ತಿರುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ಜೀವಭಯದಲ್ಲೇ ನಡೆದಾಡುವುದು ಅನಿವಾರ್ಯವಾಗಿದೆ. ಅಲ್ಲದೆ ವಾಹನಗಳ ಸುಗಮ ಸಂಚಾರಕ್ಕೂ ತೊಡಕಾಗುತ್ತಿದೆ. ವಿಸ್ತರಣೆಗೊಂಡ ರಸ್ತೆಯ ಅಂಚಿನಲ್ಲಿ ವಾಹನಗಳ ಪಾರ್ಕಿಂಗ್‌ ಅವಕಾಶ ನೀಡಿದರೂ ಫ‌ುಟ್‌ಪಾತ್‌ಗಳನ್ನು ಮಾತ್ರ ಜನರ ಓಡಾಟಕ್ಕೆ ಮುಕ್ತವಾಗಿರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಅನಧಿಕೃತ ಪಾರ್ಕಿಂಗ್‌ ತೆರವು
ರಸ್ತೆ ಮಾತ್ರವಲ್ಲದೆ ಫ‌ುಟ್‌ಪಾತ್‌ಗಳನ್ನು ಆಕ್ರಮಿಸಿ ಪಾರ್ಕಿಂಗ್‌ ಮಾಡುವ ವಾಹನ ಸವಾರರು/ ಚಾಲಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಜನರ ಓಡಾಟಕ್ಕೆ ತೊಂದರೆಯಾಗುವಂತೆ ವಾಣಿಜ್ಯ ಮಳಿಗೆಗಳು ಸಾಮಗ್ರಿಗಳನ್ನು ಇಟ್ಟರೆ ಅಂತವರ ವಿರುದ್ಧ ಪಾಲಿಕೆ ಹಾಗೂ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ.
-ನಟರಾಜ್‌, ಎಸಿಪಿ ಸಂಚಾರಿ ಪೊಲೀಸ್‌

ಟಾಪ್ ನ್ಯೂಸ್

mallikarjun kharge narendra modi

Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

mamata banerjee

W.Bengal: ನುಡಿದಂತೆ ನಡೆದ ದೀದಿ; ರಾಜ್ಯ ಆರೋಗ್ಯ, ಪೊಲೀಸ್‌ ಇಲಾಖೆಗೆ ಭಾರೀ ಸರ್ಜರಿ

Narenrdra-Modi

PM Modi US Visit: ಕ್ವಾಡ್‌ ಶೃಂಗಸಭೆಗಾಗಿ ಪ್ರಧಾನಿ ಮೋದಿ ಸೆ.21-23ರವರೆಗೆ ಅಮೆರಿಕ ಭೇಟಿ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ

Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ

Mannagudda: ಹುಲ್ಲು ಬೆಳೆದು ಮುಚ್ಚಿದ ದಾರಿ; ಉದ್ದಕ್ಕೂ ವಾಹನ ಪಾರ್ಕಿಂಗ್‌

Mannagudda: ಹುಲ್ಲು ಬೆಳೆದು ಮುಚ್ಚಿದ ದಾರಿ; ಉದ್ದಕ್ಕೂ ವಾಹನ ಪಾರ್ಕಿಂಗ್‌

Bangrakuloor-ದಂಬೆಲ್‌ ನಡುವಿನ 1 ಕಿ.ಮೀ. ರಸ್ತೆ ಅವ್ಯವಸ್ಥೆ

Bangrakuloor-ದಂಬೆಲ್‌ ನಡುವಿನ 1 ಕಿ.ಮೀ. ರಸ್ತೆ ಅವ್ಯವಸ್ಥೆ

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

25-uv-fusion

UV Fusion: ಬದುಕೆಂಬ ಪುಸ್ತಕದ ಪ್ರತಿ ಪುಟವೂ ಸುಂದರ

M. P. Renukacharya:ಪ್ಯಾಲೆಸ್ತೇನ್‌ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ

M. P. Renukacharya:ಪ್ಯಾಲೆಸ್ತೇನ್‌ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ

mallikarjun kharge narendra modi

Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ

24-uv-fusion

UV Fusion: ಬಾಂಧವ್ಯದ ಬಂಧವನ್ನು ಬೆಸೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.