ಪಿಜಿ, ಸರ್ವಿಸ್‌ ಅಪಾರ್ಟ್‌ಮೆಂಟ್‌ ನೋಂದಣಿ ಕಡ್ಡಾಯ: ಪೊಲೀಸ್‌ ಆಯುಕ್ತ


Team Udayavani, Jul 13, 2019, 10:26 AM IST

police

ಮಂಗಳೂರು: ನಗರದಲ್ಲಿ ಹಾಸ್ಟೆಲ್‌, ಪೇಯಿಂಗ್‌ ಗೆಸ್ಟ್‌, ಸರ್ವಿಸ್‌ ಅಪಾರ್ಟ್‌ಮೆಂಟ್‌ ನಡೆಸುವವರು ಕಡ್ಡಾಯ ವಾಗಿ ನೋಂದಣಿ ಮಾಡಿಸಿ ಕೊಳ್ಳಬೇಕು. ಇವುಗಳ ನಿವಾಸಿಗಳು ಕೂಡ ತಮ್ಮ ಗುರುತಿನ ಪೂರ್ಣ ವಿವರಗಳನ್ನು ಸಂಬಂಧಪಟ್ಟವರಿಗೆ ನೀಡಬೇಕು ಎಂಬುದಾಗಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

ಮಂಗಳೂರಿಗೆ ಹೊರ ಜಿಲ್ಲೆ ಮತ್ತು ದೇಶ, ವಿದೇಶಗಳಿಂದ ವಿದ್ಯಾರ್ಥಿಗಳು ಮತ್ತು ಜನರು ಬಂದು ಹಾಸ್ಟೆಲ್‌, ಪೇಯಿಂಗ್‌ ಗೆಸ್ಟ್‌, ಸರ್ವಿಸ್‌ ಅಪಾರ್ಟ್‌ ಮೆಂಟ್‌ ಮತ್ತು ಶಿಕ್ಷಣ ಸಂಸ್ಥೆಗಳ ವಸತಿಗೃಹಗಳಲ್ಲಿ ವಾಸ್ತವ್ಯವಿರುತ್ತಾರೆ. ಇತ್ತೀಚೆಗೆ ಡ್ರಗ್ಸ್‌ ಮಾಫಿಯಾ ಮತ್ತು ಇತರ ಕಾನೂನುಬಾಹಿರ ಚಟುವಟಿಕೆ ಗಳು ಹೆಚ್ಚುತ್ತಿವೆ. ಅವುಗಳನ್ನು ನಿಯಂತ್ರಣಕ್ಕೆ ತರಲು ಈ ಆದೇಶ ಹೊರಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಸಿಸಿ ಕೆಮರಾ: ಗಡುವು
ಹಾಸ್ಟೆಲ್‌, ಪೇಯಿಂಗ್‌ ಗೆಸ್ಟ್‌ ಗಳಲ್ಲಿ ಸಿಸಿ ಟಿವಿ ಕೆಮರಾ ಅಳವಡಿಸ ಬೇಕು. ಒಂದು ಸಿಸಿ ಕೆಮರಾವನ್ನು ಮುಖ್ಯ ಪ್ರವೇಶ ದ್ವಾರಕ್ಕೆ ರಸ್ತೆಗೆ ಮುಖ ಮಾಡಿ ಅಳವಡಿಸಬೇಕು. ಇವುಗಳ ಫ‌ೂಟೇಜ್‌ ಕನಿಷ್ಠ 30 ದಿನಗಳ ಅವಧಿಗೆ ವೀಕ್ಷಣೆಗೆ ಲಭ್ಯವಿರು ವಂತೆ ಡಿವಿಆರ್‌ಗಳಲ್ಲಿ ಶೇಖರವಾಗಿರಬೇಕು.
ನಿಯಮ ಅನುಸರಿಸದಿದ್ದರೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಕಮಿಷನರ್‌ ತಿಳಿಸಿದ್ದಾರೆ.

ಆದೇಶದಲ್ಲೇನಿದೆ?
* ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಹಾಸ್ಟೆಲ್‌, ಪೇಯಿಂಗ್‌ ಗೆಸ್ಟ್‌, ಸರ್ವಿಸ್‌ ಅಪಾರ್ಟ್‌ಮೆಂಟ್‌ ಮತ್ತು ಶಿಕ್ಷಣ ಸಂಸ್ಥೆಗಳ ವಸತಿ ಗೃಹಗಳ ಮಾಲಕರು, ಪಾಲುದಾರರು ಮತ್ತು ಆಡಳಿತ ಮಂಡಳಿಯವರು ಕಡ್ಡಾಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಬೇಕು.
* ಹಾಸ್ಟೆಲ್‌, ಪೇಯಿಂಗ್‌ ಗೆಸ್ಟ್‌ ಮಾಲಕರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಪೊಲೀಸ್‌ ಠಾಣೆಗೆ ಸಲ್ಲಿಸಬೇಕು.
* ವಾಸ್ತವ್ಯವಿರುವ ವಿದ್ಯಾರ್ಥಿಗಳ ಹೆಸರು, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಪೊಲೀಸ್‌ ಠಾಣೆಗೆ ನೀಡಬೇಕು.
*ವಿದೇಶದ ವಿದ್ಯಾರ್ಥಿಗಳಾಗಿದ್ದಲ್ಲಿ ಅವರು ವಾಸ್ತವ್ಯಕ್ಕೆ ಬಂದ 15 ದಿನಗಳೊಳಗೆ ಪೂರ್ಣ ಮಾಹಿತಿಯೊಂದಿಗೆ ಪಾಸ್‌ ಪೋರ್ಟ್‌, ವೀಸಾ ವಿವರಗಳನ್ನು ಠಾಣೆಗೆ ಸಲ್ಲಿಸಬೇಕು. ವಾಸ್ತವ್ಯ ತೆರವುಗೊಳಿಸದಿದ್ದರೆ ಅದರ ವಿವರವನ್ನೂ ಆಯಾ ಠಾಣಾಧಿಕಾರಿಗೆ ಸಲ್ಲಿಸಬೇಕು.
* ಹಾಸ್ಟೆಲ್‌, ಪೇಯಿಂಗ್‌ ಗೆಸ್ಟ್‌ ಮಾಲಕರು ಅಪರಿಚಿತರ ಪ್ರವೇಶ ನಿಯಂತ್ರಿಸಲು ಸೂಕ್ತ ವ್ಯವಸ್ಥೆಯನ್ನು ಮಾಡಬೇಕು.
* ಅಪರಾಧ ಕೃತ್ಯಗಳು, ಕಾನೂನುಬಾಹಿರ ಚಟುವಟಿಕೆಗಳು, ಅನೈತಿಕ ಚಟುವಟಿಕೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು.

ಟಾಪ್ ನ್ಯೂಸ್

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

ಗಂಗಾವತಿ: ಕೃಷಿ ಸೇವಾ ಸಹಕಾರಿ ಸಂಘಗಳಿಗೆ ಮುಚ್ಚುವ ಭೀತಿ?

ಗಂಗಾವತಿ: ಕೃಷಿ ಸೇವಾ ಸಹಕಾರಿ ಸಂಘಗಳಿಗೆ ಮುಚ್ಚುವ ಭೀತಿ?

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.