Tumbe: ಪೈಪ್ಲೈನ್ ದುರಸ್ತಿ ಕಾಮಗಾರಿ ಪೂರ್ಣ
ನಗರಕ್ಕೆ ನೀರು ಪೂರೈಕೆ ಮರು ಆರಂಭ: ಇಂದು ಮಧ್ಯಾಹ್ನ ಮನೆಗಳಿಗೆ ತಲುಪುವ ನಿರೀಕ್ಷೆ
Team Udayavani, Aug 3, 2024, 2:44 PM IST
ಮಹಾನಗರ: ತುಂಬೆ ಬಳಿ ಗೈಲ್ಗ್ಯಾಸ್ ಪೈಪ್ಲೈನ್ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ ಲೈನ್ಗೆ ಉಂಟಾಗಿದ್ದ ಹಾನಿಯ ದುರಸ್ತಿ ಕಾರ್ಯ ಗುರುವಾರ ತಡರಾತ್ರಿ ವೇಳೆಗೆ ಪೂರ್ಣಗೊಂಡಿದೆ. ಶುಕ್ರವಾರ ತುಂಬೆಯಿಂದ ನಗರಕ್ಕೆ ನೀರು ಪೂರೈಕೆ ಆರಂಭವಾಗಿದೆಯಾದರೂ ಪೂರ್ಣ ಪ್ರಮಾಣದಲ್ಲಿ ನೀರು ಮನೆ ಮನೆಗೆ ತಲುಪುವಾಗ ಶನಿವಾರ ಮಧ್ಯಾಹ್ನವಾಗುವ ಸಾಧ್ಯತೆಯಿದೆ.
ಪಡೀಲ್ ಪಂಪ್ಹೌಸ್ಗೆ ನೀರು ಪೂರೈಕೆ ಮಾಡುವ 1,100 ಮಿ.ಮೀ.ವ್ಯಾಸದ ಪೈಪ್ಲೈನ್ಗೆ ಮಂಗಳವಾರ ರಾತ್ರಿ ತುಂಬೆಯ ಬಳಿ ಹಾನಿಯಾಗಿ, ನಗರಕ್ಕೆ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಕೆಲವು ಭಾಗದಲ್ಲಿ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿತ್ತು.
ಶುಕ್ರವಾರ ಸ್ಥಳಕ್ಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಗೈಲ್ ಗ್ಯಾಸ್ ಪೈಪ್ಲೈನ್ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ಲೈನ್ಗೆ ಹಾನಿಯಾಗಿ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. 15-20 ಅಡಿ ತಳಭಾಗದಲ್ಲಿ ಪೈಪ್ಲೈನ್ ಇದ್ದಕಾರಣ, ಮಣ್ಣು ತೆರವು ಮಾಡಿ, ಲೀಕೇಜ್ ಆಗಿರುವ ಸ್ಥಳದಲ್ಲಿ ವೆಲ್ಡಿಂಗ್ ಮಾಡಿ ಮುಚ್ಚಲಾಗಿದೆ. ವಿಪರೀತ ಮಳೆಯ ನಡುವೆಯೂ ತುರ್ತಾಗಿ ಕಾಮಗಾರಿ ನಡೆಸಲಾಗಿದೆ ಎಂದರು.
ಮಳೆಗಾಲದಲ್ಲಿ ಇಂತಹ ಕಾಮಗಾರಿ ನಡೆಸದಂತೆ ಸೂಚನೆಯನ್ನೂ ಪಾಲಿಕೆ ವತಿಯಿಂದ ನೀಡಲಾಗಿತ್ತು. ಆದರೂ ಕಾಮಗಾರಿ ಕೈಗೊಂಡಿದ್ದಾರೆ. ಮಳೆಗಾಲ ಮುಗಿಯುವವರೆಗೆ ಎಲ್ಲಿಯೂ ಕಾಮಗಾರಿ ನಡೆಸದಂತೆ ಜಿಲ್ಲಾಡಳಿತದ ಮೂಲಕ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗುವುದು ಎಂದರು.
ಮನಪಾ ಪಾಲಕ ಅಭಿಯಂತ ನರೇಶ್ ಶೆಣೈ, ಜೂನಿಯರ್ ಎಂಜಿನಿಯರ್ ಅಶ್ವಿನ್ ಜತೆಗಿದ್ದರು.
ಹಾನಿಗೆ ಕಾರಣವಾದ ಗೈಲ್ ಗ್ಯಾಸ್ ಸಂಸೆಗೆ ದಂಡ
ಜನರಿಗೆ ಆಗಿರುವ ಸಮಸ್ಯೆಯ ಆಧಾರದಲ್ಲಿ ಮತ್ತು ಪಾಲಿಕೆಗೆ ಆಗಿರುವ ನಷ್ಟವನ್ನು ಭರಿಸುವ ನಿಟ್ಟಿನಲ್ಲಿ ಗೈಲ್ ಗ್ಯಾಸ್ ಸಂಸ್ಥೆಗೆ ದಂಡ ವಿಧಿಸಲು ಉದ್ದೇಶಿಸಲಾಗಿದೆ. ದುರಸ್ತಿ ಕಾಮಗಾರಿಯ ಪೂರ್ಣ ವೆಚ್ಚವನ್ನು ಗೈಲ್ ಕಂಪೆನಿಯವರ ಮೇಲೆ ಹಾಕಲಾಗುವುದು. ರಸ್ತೆಗೆ ಡಾಮರು ಹಾಕುವ ಕಾಮಗಾರಿಯನ್ನೂ ಗೈಲ್ನವರಿಂದಲೇ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MG Motor: ನೂತನ ಇವಿ ಕಾರು ಸಿಯುವಿ ಝಿಎಸ್ ವಿಂಡ್ಸರ್ ಮಾರುಕಟ್ಟೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
Congress Government: ಪೊಲೀಸ್ ಅಧಿಕಾರಿಗಳ ವಿರುದ್ಧ ಇಂದು ಎಚ್ಡಿಕೆ ದಾಖಲೆ ಬಿಡುಗಡೆ
Cabinet Decision: ಸಿಬಿಐ ಪವರ್ ಕಟ್: ರಾಜ್ಯ ಸರಕಾರ ಸಮರ್ಥನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.