Gujjar Kere: ಗುಜ್ಜರಕೆರೆಗೆ ಸೇರುತ್ತಿದೆ ಪ್ಲಾಸ್ಟಿಕ್ ತ್ಯಾಜ್ಯ
ಇತಿಹಾಸ ಪ್ರಸಿದ್ಧ ಕೆರೆಯ ಸಂರಕ್ಷಣೆಗೆ ಬೇಕು ಇಚ್ಛಾಶಕ್ತಿ
Team Udayavani, Aug 26, 2024, 3:11 PM IST
ಗುಜ್ಜರಕೆರೆ: ಇತಿಹಾಸ ಪ್ರಸಿದ್ಧ ಗುಜ್ಜರಕೆರೆಯ ನೀರಿನಲ್ಲಿ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಚೀಲಗಳು ತೇಲುತ್ತಿದ್ದು, ಕೆರೆಯ ನೀರು ಮಲಿನವಾಗಿದೆ. ಈ ರೀತಿ ಕೆರೆ ಮತ್ತು ಕೆರೆಯ ಪರಿಸರವನ್ನು ಹಾಳು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದರೊಂದಿಗೆ ಕೆರೆ ಮತ್ತು ಕೆರೆ ಪರಿಸರದ ಸಂರಕ್ಷಣೆಗೂ ಸಂಬಂಧಿಸಿದ ಇಲಾಖೆಗಳು ಮುಂದಾಗಬೇಕಿದೆ.
ಗುಜ್ಜರಕೆರೆ ಪರಿಸರಕ್ಕೆ ವಾಯು ವಿಹಾರಕ್ಕೆ ಮತ್ತು ಪ್ರವಾಸಕ್ಕೆಂದು ಆಗಮಿಸುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಸಂರಕ್ಷಣೆ ಕ್ರಮಗಳಿಲ್ಲದೆ ಕೆರೆಯು ಪ್ರವಾಸಿಗರ ಬೇಜವಾಬ್ದಾರಿಯುತ ನಡವಳಿಕೆ ಬಲಿಯಾಗುತ್ತಿರುವುದು ವಿಪರ್ಯಾಸ. ಈ ಪುರಾತನ ಪ್ರಸಿದ್ಧ ಕೆರೆಯು ಧಾರ್ಮಿಕ ಮಹತ್ವವನ್ನೂ ಹೊಂದಿದ್ದು, ಪ್ರಸ್ತುತ ಮೋಜು ಮಸ್ತಿಯ ತಾಣವಾಗಿ ಬದಲಾಗಿದೆ ಎಂದು ಸ್ಥಳೀಯರು ಖೇದ ವ್ಯಕ್ತಪಡಿಸುತ್ತಿದ್ದಾರೆ.
ಹೆಚ್ಚಾಗಿ ಅನ್ಯ ರಾಜ್ಯದ ಯುವಕ ಯುವತಿಯರು ನಾಗರಿಕ ಸಮಾಜದ ಪ್ರಜ್ಞೆ ಇಲ್ಲದಂತೆ ವರ್ತಿಸುವ ಕಾರಣ ವಾಯು ವಿಹಾರಕ್ಕೆ ಆಗಮಿಸುವವರಿಗೂ ಮುಜುಗರ ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಬೇಕು. ತಿಂಡಿಗಳು ತಿಂದು ಅದರ ಪ್ಲಾಸ್ಟಿಕ್ ವಸ್ತುಗಳನ್ನು ಹೆಚ್ಚಿನವರು ಕೆರೆಗೆ ಎಸೆಯುವ ಕಾರಣ ಮತ್ತು ಕೆರೆಯ ಪರಿಸರದಲ್ಲಿ ಬಿಟ್ಟು ಹೋಗುವ ಕಾರಣ ನೀರಿನ ಮತ್ತು ಜಲಚರಗಳ ಮೇಲೆ ದುಷ್ಪರಿಣಾಮ ಬೀರುತ್ತಿದ್ದು ಈ ಬಗ್ಗೆ ದಂಡ ಸಹಿತ ಕಠಿನ ಕ್ರಮ ತೆಗೆದುಕೊಳ್ಳಬೇಕು.
ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ನಾಮಫಲಕ ಇಲ್ಲಿ ಹಾಕಲಾಗಿದ್ದು ಬಿಟ್ಟರೆ, ಕೆರೆಯ ಸಂರಕ್ಷಣೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಇನ್ನಾದರೂ ಸ್ಥಳೀಯ ಜನಪ್ರತಿನಿ ಗಳು ಎಚ್ಚೆತ್ತು ಕೆರೆಯ ನೀರಿನ, ಕೆರೆಯ ಪರಿಸರದ ಪಾವಿತ್ರ್ಯ ಸಂರಕ್ಷಣೆಗೆ ಬೇಕಾಗಿರುವ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕು. ಸಂಬಂಧಪಟ್ಟ ಇಲಾಖೆಯ ಗಮನ ಸೆಳೆದು ಕೆರೆಯನ್ನು ಸಂರಕ್ಷಿಸಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.