ಖಾಸಗಿ ಬಸ್‌ ಚಾಲಕ-ನಿರ್ವಾಹಕರಿಗೆ ತಿಂಗಳಿಗೊಂದು ಕಾರ್ಯಾಗಾರಕ್ಕೆ ಸಿದ್ಧತೆ


Team Udayavani, May 31, 2024, 4:48 PM IST

ಖಾಸಗಿ ಬಸ್‌ ಚಾಲಕ-ನಿರ್ವಾಹಕರಿಗೆ ತಿಂಗಳಿಗೊಂದು ಕಾರ್ಯಾಗಾರಕ್ಕೆ ಸಿದ್ಧತೆ

ಮಹಾನಗರ: ಸಂಚಾರ ನಿಯಮ ಪಾಲನೆ, ಒತ್ತಡದ ಮನಸ್ಸಿಗೆ ಸಮಾಲೋಚನೆ ಸಹಿತ ವಿವಿಧ ಚಟುವಟಿಕೆಗಳನ್ನಾಧರಿಸಿ ಖಾಸಗಿ ಬಸ್‌ ಚಾಲಕ ನಿರ್ವಾಹಕರಿಗೆ ತಿಂಗಳಿಗೊಂದು ಕಾರ್ಯಾಗಾರ ನಡೆಸಲು ಸಾರಿಗೆ ಇಲಾಖೆ ಮುಂದಾಗಿದೆ.

ಕೆಲವೊಂದು ಖಾಸಗಿ ಬಸ್‌ ಗಳಲ್ಲಿ ಸಂಚಾರ ನಿಯಮ ಪಾಲನೆ ಮಾಡಲಾಗುತ್ತಿಲ್ಲ, ಟೈಮ್‌ ಕೀಪಿಂಗ್‌ ಹೆಸರಿನಲ್ಲಿ ಜಗಳಗಳು ನಡೆಯುತ್ತಿದೆ, ತಂಗುದಾಣದ ಎದುರು ಬಸ್‌ ನಿಲ್ಲುತ್ತಿಲ್ಲ, ಕರ್ಕಶ ಹಾರ್ನ್ ಬಳಕೆ ಮಾಡಲಾಗುತ್ತಿದೆ. ಬಸ್‌ ಟಿಕೆಟ್‌ ನೀಡುತ್ತಿಲ್ಲ ಎಂಬಿತ್ಯಾದಿ ದೂರುಗಳು ಪ್ರಯಾಣಿಕರಿಂದ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಸ್‌ ಮಾಲಕರ ಸಂಘದಿಂದ ಬ್ಯಾಚ್‌ ಆಧಾರವಾಗಿ ಚಾಲಕ-ನಿರ್ವಾಹಕರನ್ನು ಕಳುಹಿಸಿಕೊಟ್ಟರೆ ತರಬೇತಿ ನೀಡಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ಬಸ್‌ ಚಾಲಕರಿಗೆ ಟೈಮಿಂಗ್‌ ವಿಚಾರದಲ್ಲಿ ಒತ್ತಡ ಹೆಚ್ಚಾಗುತ್ತಿದ್ದು, 40ರ ವಯಸ್ಸಿನಲ್ಲಿಯೇ ಹಲವು ರೋಗಗಳು ಕಾಣಿಸಿಕೊಳ್ಳುತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಒಂದೇ ರೂಟ್‌ನಲ್ಲಿ ಸಂಚರಿಸುತ್ತೇವೆ, ಇದರಿಂದ ಮನಸ್ಸಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಬಸ್‌ ಮಾಲಕರು ಸಹಿತ ಚಾಲಕ- ನಿರ್ವಾಹಕರಿಂದ ಅಹವಾಲುಗಳು ಕೇಳಿ ಬರುತ್ತಿದೆ. ಮುಡಿಪುವಿನಲ್ಲಿ ಈಗಾಗಲೇ ಭಾರೀ ವಾಹನ ಚಾಲನ ತರಬೇತಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಪ್ರತಿ ತಿಂಗಳು 20 ಮಂದಿ ಚಾಲಕ – ನಿರ್ವಾಹಕರಿಗೆ ಕಾರ್ಯಾಗಾರ ನಡೆಸಲು ನಿರ್ಧರಿಸಲಾಗಿದೆ.

ಇನ್ನಷ್ಟು ಕಾರ್ಯಾಗಾರ ಸಂಚಾರ ನಿಯಮ ಪಾಲನೆಗೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್‌ ಮಾಲಕರ ಸಂಘದಿಂದ ಬಸ್‌ ಚಾಲಕರು ಮತ್ತು ನಿರ್ವಾಹಕರಿಗೆ ಈಗಾಗಲೇ ಕೆಲವೊಂದು ಕಡೆಗಳಲ್ಲಿ ಕಾರ್ಯಾಗಾರ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಪೊಲೀಸ್‌ ಇಲಾಖೆಯ ಸಹಕಾರದೊಂದಿಗೆ ಮಂಗಳೂರಿನ ಇನ್ನಷ್ಟು ಕಡೆಗಳಲ್ಲಿ ಕಾರ್ಯಾಗಾರ ನಡೆಸಲು
ಸಂಘ ಮುಂದಾಗಿದೆ.

ಬಾಂಧ್ಯವ ಬೆಳಸಲು ಸಹಕಾರಿ
ಬಸ್‌ಗಳ ಚಾಲಕ-ನಿರ್ವಾಹಕರಿಗೆ ಕಾರ್ಯಾಗಾರ ನಡೆಸಲು ಸಾರಿಗೆ ಇಲಾಖೆ ನಿರ್ಧರಿಸಿದ್ದು, ಉತ್ತಮ ಬೆಳವಣಿಗೆ. ನಮ್ಮ ಸಂಘದಿಂದಲೂ ಈಗಾಗಲೇ ಕೆಲವೊಂದು ಕಡೆ ಕಾರ್ಯಾಗಾರ ನಡೆಸಿದ್ದೇವೆ. ಇದು ಕೂಡು ಮುಂದುವರಿಯುತ್ತದೆ.ಸಾರಿಗೆ ಇಲಾಖೆಯ ಕಾರ್ಯಾಗಾರಕ್ಕೆ ತಂಡವಾಗಿ ಚಾಲಕ-ನಿರ್ವಾಹಕರನ್ನು ಕಳುಹಿಸಿಕೊಡುತ್ತೇವೆ. ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ನಡುವಣ ಮಧುರ ಬಾಂಧ್ಯವ ಬೆಳಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಾಗಾರ ಸಹಕಾರಿಯಾಗುತ್ತದೆ.
*ಅಝೀಝ್ ಪರ್ತಿಪಾಡಿ, ದಕ್ಷಿಣ ಕನ್ನಡ ಬಸ್‌
ಮಾಲಕರ ಸಂಘದ ಅಧ್ಯಕ್ಷ

ಕಾರ್ಯಾಗಾರಕ್ಕೆ ಮುಂದು
ಪ್ರತೀ ದಿನ ಬಸ್‌ಗಳಲ್ಲಿ ದುಡಿಯುತ್ತಿರುವ ಚಾಲಕ-ನಿರ್ವಾಹಕರಿಗೆ ಸಂಚಾರ ನಿಯಮ ಪಾಲನೆ ಸಹಿತ ಮತ್ತಿತರ ವಿಷಯವನ್ನು ಆಧರಿಸಿ ಕಾರ್ಯಾಗಾರ ನಡೆಸಲು ಸಾರಿಗೆ ಇಲಾಖೆ ತಯಾರಿದೆ. ಮುಡಿಪುವಿನಲ್ಲಿ ಈಗಾಗಲೇ ಭಾರೀ ವಾಹನ ಚಾಲನ ತರಬೇತಿ ಸಂಸ್ಥೆ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಪ್ರತಿ ತಿಂಗಳು 20 ಮಂದಿ ಚಾಲಕ- ನಿರ್ವಾಹಕರಿಗೆ ಕಾರ್ಯಾ ಗಾರ ನಡೆಸಲು ನಿರ್ಧರಿಸಿದ್ದೇವೆ.
*ಶ್ರೀಧರ ಮಲ್ಲಾಡ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

Mangaluru: ರಿಕ್ಷಾ ತೊಳೆಯುತ್ತಿದ್ದವರ ಮೇಲೆ ಬಿದ್ದ ವಿದ್ಯುತ್ ತಂತಿ… ಇಬ್ಬರು ಮೃತ್ಯು

Mangaluru: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂತ ಅಂತ್ಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.