Mangaluru: ನ್ಯಾಯವಾದಿಗಳ ವಿಚಾರ ಮಂಡನೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ದಾರಿ: ಇಂದ್ರೇಶ್‌

ಕಾನೂನು ಹಬ್ಬದಲ್ಲಿ ಭಾಗವಹಿಸುವುದರಿಂದ ಅಗಾಧ ಅನುಭವ ಪಡೆಯಲು ಸಾಧ್ಯ

Team Udayavani, Jul 29, 2024, 2:45 PM IST

Mangaluru: ನ್ಯಾಯವಾದಿಗಳ ವಿಚಾರ ಮಂಡನೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ದಾರಿ: ಇಂದ್ರೇಶ್‌

ಮಂಗಳೂರು: ಹಿರಿಯ ನ್ಯಾಯವಾದಿಗಳು ಕೆಲವು ಪ್ರಕರಣಗಳನ್ನು ಕಾನೂನು ಚೌಕಟ್ಟಿನಲ್ಲಿ ಅವಲೋಕಿಸುವ
ಸಾಧ್ಯಾಸಾಧ್ಯತೆಗಳನ್ನು ಅರಿತುಕೊಳ್ಳಲು ಕಾನೂನು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‌, ಹೈಕೋರ್ಟ್‌ಗೆ ಭೇಟಿ ನೀಡುವುದು ಅಗತ್ಯ ಎಂದು ಹೈಕೋರ್ಟ್‌ ನ್ಯಾಯಾಧೀಶರಾದ ಇಂಗಲಗುಪ್ಪೆ ಸೀತಾರಾಮಯ್ಯ ಇಂದ್ರೇಶ್‌ ಹೇಳಿದರು.

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ರವಿವಾರ ಜರಗಿದ ರಾಷ್ಟ್ರೀಯ ಕಾನೂನು ಹಬ್ಬ “ಲೆಕ್ಸ್‌ ಅಲ್ಟಿಮಾ-2024’ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸುಪ್ರಿಂಕೋರ್ಟ್‌ ನಲ್ಲಿ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌, ಅಭಿಷೇಕ್‌ ಮನು ಸಿಂಘ್ವಿ, ಚಿದಂಬರಂ, ಅಟರ್ನಿ ಜನರಲ್‌ ವೆಂಕಟರಮಣಿ ಮುಂತಾದವರ ವಾದಗಳನ್ನು ಆಲಿಸಬೇಕು. ಅವರು ಮಂಡಿಸುವ ವಿಚಾರಗಳು ಭಿನ್ನವಾಗಿದ್ದು, ಕಾನೂನು ಪರಿಧಿಯ ವಿಸ್ತಾರವನ್ನು ಅರಿತುಕೊಳ್ಳಲು ಸಾಧ್ಯವಾಗಲಿದೆ ಎಂದವರು ಹೇಳಿದರು.

ಕಾನೂನು ಹಬ್ಬದಲ್ಲಿ ಭಾಗವಹಿಸುವುದರಿಂದ ಅಗಾಧ ಅನುಭವ ಪಡೆಯಲು ಸಾಧ್ಯ. ತಮ್ಮ ವೃತ್ತಿಗೆ ಸಂಬಂಧಿಸಿ ವಿಸ್ತಾರವಾದ
ವಿಷಯಗಳನ್ನು ಕಲಿಯುವ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳು ಬಹುಮಾನಗಳತ್ತ ಚಿತ್ತ ಹರಿಸದೆ ಸಿಗುವ ಅವಕಾಶವನ್ನು ಬಳಸಿಕೊಳ್ಳಬೇಕು. ತಮ್ಮ ವೃತ್ತಿ ಜೀವನಕ್ಕೆ ಕಾನೂನು ಹಬ್ಬಗಳು ಬಾಗಿಲು ತೆರೆಸುತ್ತವೆ ಎಂದು ಹೇಳಿದರು.

ಪ್ರಾಂಶುಪಾಲ ಡಾ| ತಾರಾನಾಥ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕಿ ಡಾ| ಸುಮಾ ಸುರೇಶ್‌ ಕೋಗಿಲಗೇರಿ ವಂದಿಸಿದರು. ನೇಹಾ ರಾಮಕೃಷ್ಣ ನಿರೂಪಿಸಿದರು. ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ, ಕಾಲೇಜು ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ದೇವರಾಜ್‌ ಕೆ., ಪೋಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್‌, ಸಹಾಯಕ ಪ್ರಾಧ್ಯಾಪಕ ಪುಷ್ಪರಾಜ್‌, ಮುಖ್ಯ ಕಾರ್ಯದರ್ಶಿ ಪ್ರತೀಕ್ಷಾ ಪೈ, ವಿದ್ಯಾರ್ಥಿ ಕಾರ್ಯದರ್ಶಿ ಸಚಿನ್‌ ಮಾದೇವ್‌ ಹೆಗ್ಡೆ, ವಿದ್ಯಾರ್ಥಿ ಸಂಯೋಜಕರಾದ ಮಯೂರ್‌
ಎಂ. ಭಟ್‌, ಶ್ರೀವರ ಪಿ., ಭಾರ್ಗವಿ ಶಬರಾಯ, ಅಶ್ವಥಿ ಕೃಷ್ಣ ಎಂ.ಪಿ. ಉಪಸ್ಥಿತರಿದ್ದರು.

ವೈಕುಂಠ ಬಾಳಿಗ ಲಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮೂರು ದಿನ ನಡೆದ ಕಾನೂನು ಹಬ್ಬದಲ್ಲಿ 43 ಕಾನೂನು ಕಾಲೇಜುಗಳ 162 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಣಕು ನ್ಯಾಯಾಲಯ, ಜಾಮೀನು ಅರ್ಜಿ ಸ್ಪರ್ಧೆ, ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ, ಕಾನೂನು ರಸಪ್ರಶ್ನೆ, ಶಾಸನ ರಚನೆ, ಕಾನೂನು ಸಲಹೆ, ತೀರ್ಪು ಬರೆಯುವ ಸ್ಪರ್ಧೆ, ಕಾನೂನು ಚರ್ಚೆ ಸಹಿತ ವಿವಿಧ ಸ್ಪರ್ಧೆಗಳಲ್ಲಿ ವೈಕುಂಠ ಬಾಳಿಗ ಲಾ ಕಾಲೇಜು ಉಡುಪಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು. ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಲೀಗಲ್‌ ಸ್ಟಡೀಸ್‌ ಹಾಗೂ ಬಿಎಂಎಸ್‌ ಲಾ ಕಾಲೇಜು ಬೆಂಗಳೂರು ರನ್ನರ್‌ ಪ್ರಶಸ್ತಿಯನ್ನು ಹಂಚಿಕೊಂಡವು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.