ಇಂದು ಕರಾವಳಿಗೆ ಮೋದಿ… ಹೆಚ್ಚಲಿದೆ ಹುರುಪು
Team Udayavani, May 3, 2023, 6:52 AM IST
ಮಂಗಳೂರು/ಮೂಲ್ಕಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರವನ್ನು ನಿರೀಕ್ಷಿಸುತ್ತಿದ್ದು, ಮೇ 3ರ ಮೋದಿ ಸಮಾವೇಶಕ್ಕೆ ಮೂಲ್ಕಿ ಪೂರ್ಣ ಸಜ್ಜುಗೊಂಡಿದೆ.
ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಸಮಾವೇಶ ನಡೆಯಲಿದ್ದು, ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಬಜಪೆಗೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ನಲ್ಲಿ ಸಮಾವೇಶ ಸ್ಥಳಕ್ಕೆ ಆಗಮಿಸುವರು.
ಕರಾವಳಿಯಲ್ಲಿಯೂ ದಾಖಲೆ ಸಂಖ್ಯೆಯ ಸ್ಥಾನಗಳಲ್ಲಿ ಜಯಗಳಿಸಬೇಕೆಂಬ ಬಿಜೆಪಿ ಹೋರಾಟಕ್ಕೆ ಮೋದಿ ಆಗಮನ ಹೊಸ ಶಕ್ತಿ ನೀಡುವ ಸಾಧ್ಯತೆಯಿದೆ. ಕರಾವಳಿಗೆ ಪ್ರತೀ ಬಾರಿ ಮೋದಿ ಆಗಮಿಸಿದಾಗಲೂ ದಾಖಲೆ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸುತ್ತಿದ್ದಾರೆ. ಈ ಬಾರಿಯೂ 2.5ರಿಂದ 3 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಭಾಗವಹಿಸುವವರಿಗೆ ನೀರು, ಮಜ್ಜಿಗೆಯ ವ್ಯವಸ್ಥೆ ಮಾಡ ಲಾಗಿದೆ ಎಂದು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
ಎಸ್ಪಿಜಿಯಿಂದ ನಿಗಾ
ಸಮಾವೇಶ ನಡೆಯುವ ಮೈದಾನ, ಹೆಲಿಪ್ಯಾಡ್ ಎಲ್ಲವನ್ನೂ ಎಸ್ಪಿಜಿ ಯವರು ತಮ್ಮ ಅಧೀನಕ್ಕೆ ಪಡೆದಿದ್ದು ಪ್ರಧಾನಿ ಆಗಮನ ಸೇರಿದಂತೆ ಭದ್ರತಾ ಲೋಪವಾಗ ದಂತೆ ಕಟ್ಟುನಿಟ್ಟಿನ ನಿಗಾ ವಹಿಸಿದೆ. ಪೊಲೀಸರ ತಂಡ ಮೂಲ್ಕಿಯ ಉದ್ದಕ್ಕೂ ಬೀಡುಬಿಟ್ಟಿದೆ. ಹೆಲಿಪ್ಯಾಡ್ನಿಂದ ಮೋದಿಯವರು ಕಾರಿನಲ್ಲಿ ಬರಲಿದ್ದು, ಹೆದ್ದಾರಿಯ ಉದ್ದಕ್ಕೂ ತಡೆಬೇಲಿ ನಿರ್ಮಿಸಲಾಗಿದೆ.
ನಳಿನ್, ಶೋಭಾ ಉಪಸ್ಥಿತಿ
ಮೋದಿಯವರು ಅವಿಭಜಿತ ಜಿಲ್ಲೆಯ ಬಿಜೆಪಿಯ ಎಲ್ಲ 13 ಅಭ್ಯರ್ಥಿ ಗಳ ಪರವಾಗಿ ಮತಯಾಚನೆ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿಗಳ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಭಯ ಜಿಲ್ಲೆಯ ಬಿಜೆಪಿ ಅಧ್ಯಕ್ಷರು ಉಪಸ್ಥಿತರಿರುವರು.
ಯಶಸ್ಸಿಗೆ ಗಣಪತಿ ಹೋಮ
ಮೋದಿಯವರ ಪ್ರಚಾರ ರ್ಯಾಲಿ ನಿರ್ವಿಘ್ನವಾಗಿ, ಯಶಸ್ವಿಯಾಗಿ ಸಂಪನ್ನಗೊಳ್ಳುವಂತೆ ಪ್ರಾರ್ಥಿಸಿ ಸಮಾವೇಶ ಸ್ಥಳದಲ್ಲಿ ಮಂಗಳವಾರ ಬೆಳಗ್ಗೆ ಗಣಪತಿ ಹೋಮ ನಡೆಸ ಲಾಯಿತು. ಮೋದಿ ಅವರು ಭಾಷಣ ಮಾಡುವ ವೇದಿಕೆಯನ್ನು ಪಶ್ಚಿಮಕ್ಕೆ ಮುಖ ಮಾಡಿ ನಿರ್ಮಿಸಲಾಗಿದೆ.
ಹೆಚ್ಚಲಿದೆ ಹುರುಪು
ಪ್ರಧಾನಿ ನರೇಂದ್ರ ಮೋದಿ ಅವರ ಕರಾವಳಿ ಭೇಟಿ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿದೆ. ಬಿಜೆಪಿಯಿಂದ ಇಲ್ಲಿಯವರೆಗೆ ನಡೆದ ಪ್ರಚಾರಕ್ಕಿಂತಲೂ ಇನ್ನು ಮುಂದೆ ನಡೆಯುವ ಪ್ರಚಾರದ ಹುರುಪಿಗೂ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ ಎಂದು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.