ಮೇ 3ರಂದು ಕರಾವಳಿಗೆ ಪ್ರಧಾನಿ: ಹೊಸ ಇತಿಹಾಸ ಸೃಷ್ಟಿಯಾಗಲಿದೆ: ಸುದರ್ಶನ್ ಮೂಡುಬಿದಿರೆ


Team Udayavani, May 1, 2023, 5:12 PM IST

ಮೇ 3ರಂದು ಕರಾವಳಿಗೆ ಪ್ರಧಾನಿ: ಹೊಸ ಇತಿಹಾಸ ಸೃಷ್ಟಿಯಾಗಲಿದೆ: ಸುದರ್ಶನ್ ಮೂಡುಬಿದಿರೆ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇ ೩ರಂದು ಕರಾವಳಿಗೆ ಆಗಮಿಸಲಿದ್ದು, ಈ ಬಾರಿ ಅವರು ಪ್ರಧಾನ ಮಂತ್ರಿಯಾಗಿ ಮಾತ್ರವಲ್ಲ; ವಿಶ್ವದ ನಂ.1 ನಾಯಕರಾಗಿ ಬರುತ್ತಿದ್ದಾರೆ. ಹಿಂದಿನ ಅವರ ಭೇಟಿ ಸಂದರ್ಭದ ಎಲ್ಲ ದಾಖಲೆಗಳನ್ನು ಮೀರಿ ಸಮಾವೇಶ ಯಶಸ್ವಿಯಾಗಲಿದ್ದು, ಹೊಸ ಇತಿಹಾಸವನ್ನು ಸೃಷ್ಟಿಸಲಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದರು.

ನಗರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ- ಉಡುಪಿ ಗಡಿಭಾಗವಾದ ಮೂಲ್ಕಿಯ ಕೊಲ್ನಾಡು ಬಳಿ ಬೆಳಗ್ಗೆ 10.30ಕ್ಕೆ ಮೊದಿಯವರ ಸಮಾವೇಶ ನಡೆಯಲಿದ್ದು, ಉಭಯ ಜಿಲ್ಲೆಗಳ 13 ವಿಧಾನ ಸಭಾ ಕ್ಷೇತ್ರಗಳಿಂದ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು, ಮತದಾರರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ನೇತೃತ್ವದಲ್ಲಿ ಸಭೆಗಳು ನಡೆಯುತ್ತಿದೆ.

ಮೋದಿಯವರ ಆಗಮನ ಚುನಾವಣಾ ಪ್ರಚಾರ ಕಾರ್ಯಕ್ಕೆ ವೇಗ ನೀಡಲಿದ್ದು, ಕಾರ್ಯಕರ್ತರಿಗೆ ಪ್ರೇರಣೆ, ವಿಶೇಷ ಶಕ್ತಿ ನೀಡಲಿದೆ. ಆ ಮೂಲಕ ಜಿಲ್ಲೆಯ ಎಲ್ಲ ೮ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.

ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್, ಪ್ರಮುಖರಾದ ಮೋನಪ್ಪ ಭಂಡಾರಿ, ಕಸ್ತೂರಿ ಪಂಜ, ಸಂಜಯ್ ಪ್ರಭು ಉಪಸ್ಥಿತರಿದ್ದರು.

ಇದನ್ನೂ ಓದಿ: ನಮ್ಮ ಸರ್ಕಾರದ ಯೋಜನೆಗಳನ್ನೇ ಕಾಂಗ್ರೆಸ್ ಕಾಪಿ ಮಾಡಿದೆ :ಸಿಎಂ ಬೊಮ್ಮಾಯಿ

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.