Mangaluru: ಮಾರ್ಬಲ್ ವ್ಯವಹಾರದಲ್ಲಿ ಲಾಭ ಆಮಿಷ: 2.50 ಕೋ.ರೂ. ಹೂಡಿಕೆ ಮಾಡಿಸಿ ವಂಚನೆ
Team Udayavani, Sep 11, 2024, 7:30 AM IST
ಮಂಗಳೂರು: ಮಾರ್ಬಲ್ ವ್ಯವಹಾರದಲ್ಲಿ ಲಾಭ ಮಾಡಿಕೊಡುವುದಾಗಿ ನಂಬಿಸಿ 2.50 ಕೋಟಿ ರೂ. ಹೂಡಿಕೆ ಮಾಡಿಸಿ ವಂಚಿಸಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಶರೀಫ್ ಎಲ್. ಪ್ರಕರಣದ ಆರೋಪಿ. ಈತ ಎಂ. ನಾಸೀರ್ ಅವರಿಗೆ ವಂಚಿಸಿದ್ದಾಗಿ ದೂರಲಾಗಿದೆ.
ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ಎಂ.ನಾಸೀರ್ ಅವರನ್ನು ಶರೀಫ್ ನಂಬಿಸಿದ್ದ. ನಾಸೀರ್ ಅವರಿಂದ ಹಂತ ಹಂತವಾಗಿ ಒಟ್ಟು 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು ಒಂದೇ ಊರಿನವರಾಗಿದ್ದು ದಾಖಲಾತಿಯನ್ನು ಮುಂದಕ್ಕೆ ಯಾವುದಾದರೂ ಮಾಡಬಹುದು ಎಂದು ಹೇಳಿದ್ದ.
ಮೂರು ತಿಂಗಳು ಕಳೆದ ಬಳಿಕ ವ್ಯಾಪಾರ ಲೆಕ್ಕ ಮಾಡಿ ಲಾಭ ಮತ್ತು ದಾಖಲಾತಿಯನ್ನು ಒಟ್ಟಿಗೆ ಕೊಡುವುದಾಗಿಯೂ ನಂಬಿಸಿದ್ದ. ನಾಸೀರ್ ಅವರು ಬಳಿಕ ಅಬುಧಾಬಿಗೆ ತೆರಳಿದ್ದು, ಆಗಾಗ್ಗೆ ಫೋನ್ ಮಾಡಿ ಹಣದ ಬಗ್ಗೆ ವಿಚಾರಿಸಿದ್ದರು. ಅನಂತರ ಊರಿಗೆ ಬಂದು ಆರೋಪಿಯ ಮನೆಗೆ ಹೋಗಿ ಹಣ ಕೇಳಿದಾಗ ನೀಡಿರಲಿಲ್ಲ. ಬಳಿಕ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.