![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 17, 2019, 1:46 PM IST
ಬಂಟ್ವಾಳ: ರಾಷ್ಟ್ರೀಯ ಪೌರತ್ವ ಕಾಯ್ದೆಯು ಬಿಜೆಪಿಯ ಮತಗಳಿಕೆಯ ಕಾನೂನೇ ಹೊರತು ಅಭಿವೃದ್ಧಿಯ ಯೋಜನೆಯಲ್ಲ ಎಂದು ರಾಜ್ಯ ಹೈಕೋರ್ಟ್ ನ ನ್ಯಾಯವಾದಿ ಸುಧೀರ್ ಕುಮಾರ್ ಕೊಪ್ಪ ಆರೋಪಿಸಿದರು.
ಬಿ.ಸಿ.ರೋಡಿನಲ್ಲಿ ಮಂಗಳವಾರ ಬಂಟ್ವಾಳ ಕಾಂಗ್ರೆಸ್ ವತಿಯಿಂದ ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿ ವಿರುದ್ಧ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮುಖ್ಯ ಭಾಷಣ ಮಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಆರ್ಥಿಕ ಹಿಂಜರಿತವನ್ನು ಮರೆಮಾಚುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಕಾನೂನನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ ಮೊದಲಾದವರಿದ್ದರು.
You seem to have an Ad Blocker on.
To continue reading, please turn it off or whitelist Udayavani.