ಪಂಪ್‌ವೆಲ್‌-ಪಡೀಲ್‌ ಸ್ಮಾರ್ಟ್‌ ರಸ್ತೆ ಕಾಮಗಾರಿಗೆ ವೇಗ

ಸ್ಮಾರ್ಟ್‌ ರಸ್ತೆ ಪ್ಯಾಕೇಜ್‌- 5ರಡಿ ಕಾಮಗಾರಿ

Team Udayavani, Oct 18, 2022, 12:08 PM IST

9

ಮಹಾನಗರ: ನಗರದ ಬಹು ಮುಖ್ಯ ರಸ್ತೆಗಳಲ್ಲಿ ಒಂದಾಗಿರುವ, ಪಡೀಲ್‌ – ಪಂಪ್‌ವೆಲ್‌ ರಸ್ತೆಯ ಅಭಿವೃದ್ಧಿ ಕೆಲಸ ಭರದಿಂದ ಸಾಗಿದೆ. ಬೆಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಮಂಗಳೂರು ನಗರ ಪ್ರವೇಶಿಸುವ ಮುಖ್ಯ ರಸ್ತೆಯಾಗಿರುವುದರಿಂದ ವಿಸ್ತ ರಣೆ ಅಗತ್ಯವಾಗಿದ್ದು, ಆ ಹಿನ್ನೆಲೆಯಲ್ಲಿ ಸ್ಮಾರ್ಟ್‌ ಸಿಟಿಯ ಸ್ಮಾರ್ಟ್‌ ರಸ್ತೆ ಪ್ಯಾಕೇಜ್‌- 5ರಡಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಪಡೀಲ್‌ನಿಂದ ಕಾಮಗಾರಿ ಆರಂಭವಾಗಿದ್ದು, ಒಂದು ಬದಿಯಲ್ಲಿ ಸುಮಾರು 200 ಮೀ.ನಷ್ಟು ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗಿದೆ. ಉಳಿದಂತೆ ಕಪಿತಾನಿಯೋ ವರೆಗೆ ಅಲ್ಲಲ್ಲಿ ತಡೆ ಗೋಡೆ ನಿರ್ಮಿಸಿ ಮಣ್ಣ ಹಾಕಿ ಸಮತಟ್ಟುಗೊಳಿಸಲಾಗಿದೆ. ರಸ್ತೆ ಬದಿಯ ಕೆಲವು ಕಟ್ಟಡಗಳನ್ನೂ ತೆರವುಗೊಳಿಸಲಾಗಿದೆ. ಮಳೆ ನೀರು ಹರಿಯುವ ಚರಂಡಿ ನಿರ್ಮಾಣ ಕೆಲಸವೂ ಅಲ್ಲಲ್ಲಿ ನಡೆಯುತ್ತಿದೆ. ರಸ್ತೆ ಕಾಮಗಾರಿ ಉದ್ದೇಶ ದಕ್ಕೆ ಸ್ಥಳದಲ್ಲಿದ್ದ ಬೃಹತ್‌ ಮರ ಗಳನ್ನು ನೆಲಸಮಗೊಳಿಸಲಾಗಿದೆ. ಸಾಧ್ಯವಿರುವ ಮರಗಳನ್ನು ಸ್ಥಳಾಂತರಗೊಳಿಸುವ ಚಿಂತನೆಯಿದೆ. ಕಡಿಯಲಾದ ಮರಗಳ ಬದಲಿಗೆ ಬೇರೆ ಕಡೆಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು ಸ್ಮಾರ್ಟ್‌ ಸಿಟಿಯಿಂದ ಅರಣ್ಯ ಇಲಾಖೆಗೆ ಮೊತ್ತ ಪಾವತಿ ಸಲಾ ಗಿದೆ ಎನ್ನುತ್ತಾರೆ ಅಧಿಕಾರಿಗಳು.

24 ಮೀ. ಅಗಲದ ಕಾಂಕ್ರೀಟ್‌ ರಸ್ತೆ

ಪ್ರಸ್ತುತ 10 ಮೀ. ಅಗಲದ ಡಾಮರು ರಸ್ತೆಯಿದ್ದು, ಇದು 24 ಮೀ. ಅಗಲದ ಚತುಷ್ಪಥ ಕಾಂಕ್ರೀಟ್‌ ರಸ್ತೆ ಯಾಗಿ ಪರಿವರ್ತನೆಯಾಗಲಿದೆ. ಇದರಲ್ಲಿ 3.50 ಮೀ. ಅಗಲದ ನಾಲ್ಕು ಲೇನ್‌ ಕಾಂಕ್ರೀಟ್‌ ವೇ, 3 ಮೀ.ಅಗಲದ ಇಂಟರ್‌ಲಾಕ್‌ ಅಳವಡಿಸಲಾಗುತ್ತದೆ. ಎರಡೂ ಬದಿಗಳಲ್ಲಿ ಫುಟ್‌ಪಾತ್‌, ಚರಂಡಿ, ಯುಟಿಲಿಟಿ ಡಕ್ಟ್, ರಸ್ತೆಯ ಮಧ್ಯದಲ್ಲಿ ಡಿವೈಡರ್‌, ದಾರಿದೀಪ ಅಳವಡಿಕೆಯಾಗಲಿದೆ. ಪಂಪ್‌ವೆಲ್‌ ನಿಂದ ಪಡೀಲ್‌ವರೆಗೆ ಒಟ್ಟು 2.8 ಕಿ.ಮೀ. ಉದ್ದದ ರಸ್ತೆಯಾಗಿದ್ದು, 26 ಕೋ. ರೂ. ವೆಚ್ಚದಲ್ಲಿ ಸ್ಮಾರ್ಟ್‌ ಸಿಟಿಯಿಂದ ಅಭಿವೃದ್ಧಿಯಾಗಲಿದೆ.

ವಾಹನ ದಟ್ಟಣೆ ನಿವಾರಣೆ

ಪಡೀಲ್‌- ಪಂಪ್‌ವೆಲ್‌ ರಸ್ತೆ ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ. ಈ ಹಿಂದೆ ಹೆದ್ದಾರಿಯಾಗಿದ್ದ ಈ ರಸ್ತೆ ಪ್ರಸ್ತುತ ಪಾಲಿಕೆಗೆ ಸೇರಿದ್ದು, ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ನಗರ ಪ್ರವೇಶಿಸಲು ಇರುವ ಪ್ರಮುಖ ರಸ್ತೆ. ಸದ್ಯ ಅಗಲ ಕಿರಿದಾದ ರಸ್ತೆಯಾದ ಕಾರಣ, ಪ್ರತಿ ನಿತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ. ಚತುಷ್ಪಥವಾದರೆ ವಾಹನಗಳ ಸುಗಮ ಸಂಚಾರ ಸಾಧ್ಯವಾಗಲಿದೆ. ಜತೆಗೆ ಪಡೀಲ್‌ನಲ್ಲಿ ನಿರ್ಮಾಣ ವಾಗಲಿರುವ ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ ಮೊದಲಾದೆಡೆಗಳಿಗೆ ತೆರಳು ವವರಿಗೂ ಅನುಕೂಲವಾಗಲಿದೆ.

ರಸ್ತೆಗೆ ಡಾಮರು

ಪ್ರಸ್ತುತ ವಾಹನಗಳು ಸಂಚರಿಸುತ್ತಿರುವ ಈ ಹಿಂದಿನ ಡಾಮರು ರಸ್ತೆ ಮಳೆ, ಕಾಮಗಾರಿಯ ಕಾರಣ ದಿಂದಾಗಿ ಹದಗೆಟ್ಟಿತ್ತು. ಇದೀಗ ರಸ್ತೆಯನ್ನು ಪ್ಯಾಚ್‌ವರ್ಕ್‌ ಮೂಲಕ ದುರಸ್ತಿ ಪಡಿಸಲಾಗಿದೆ.ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅವ ಕಾಶವಾಗಿದೆ. ಕಾಮಗಾರಿಯ ಕಾರಣದಿಂದಾಗಿ ಧೂಳು ಸಾಮಾನ್ಯವಾಗಿಬಿಟ್ಟಿದೆ.

ಮಾರ್ಚ್‌ ಅಂತ್ಯದೊಳಗೆ ಪೂರ್ಣ: ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಪೂರಕವಾಗಿ ವಿದ್ಯುತ್‌ ಕಂಬಗಳ ತೆರವು, ತಡೆಗೋಡೆಗಳ ನಿರ್ಮಾಣ, ನೀರು, ಒಳಚರಂಡಿ ಪೈಪ್‌ಗ್ಳನ್ನು ಸಮರ್ಪಕವಾಗಿ ಅಳವಡಿಸುವ ಕೆಲಸಗಳು ನಡೆಯುತ್ತಿವೆ. ಈಗಾಗಲೇ ಪಡೀಲ್‌ ಭಾಗದಲ್ಲಿ ಒಂದು ಕಡೆ ರಸ್ತೆ ನಿರ್ಮಾಣ ಮಾಡಲಾಗಿದೆ. 2023ರ ಮಾರ್ಚ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. –ಅರುಣ್‌ ಪ್ರಭ ಕೆ.ಎಸ್‌., ಜನರಲ್‌ ಮ್ಯಾನೇಜರ್‌-ಟೆಕ್ನಿಕಲ್‌, ಮಂಗಳೂರು ಸ್ಮಾರ್ಟ್‌ ಸಿಟಿ ಲಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.